Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪೊಲೀಸರನ್ನು ನಿಂದಿಸಿರುವ ಗೃಹ ಸಚಿವರ...

ಪೊಲೀಸರನ್ನು ನಿಂದಿಸಿರುವ ಗೃಹ ಸಚಿವರ ಮಾತುಗಳು ಆಡಳಿತ ವೈಫಲ್ಯಕ್ಕೆ ಹಿಡಿದ ಕನ್ನಡಿ: ರಮಾನಾಥ ರೈ

ವಾರ್ತಾಭಾರತಿವಾರ್ತಾಭಾರತಿ6 Dec 2021 4:22 PM IST
share
ಪೊಲೀಸರನ್ನು ನಿಂದಿಸಿರುವ ಗೃಹ ಸಚಿವರ ಮಾತುಗಳು ಆಡಳಿತ ವೈಫಲ್ಯಕ್ಕೆ ಹಿಡಿದ ಕನ್ನಡಿ: ರಮಾನಾಥ ರೈ

ಮಂಗಳೂರು: ರಾಜ್ಯದ ಪೊಲೀಸರ ಬಗ್ಗೆ ನಿಂದಿಸಿ ಗೃಹ ಸಚಿವರು ಆಡಿದ ಮಾತುಗಳು ಆಡಳಿತ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಸುದ್ದಿಗೋಷ್ಠಿಯಲ್ಲಿಂದು ಆರೋಪಿಸಿದ್ದಾರೆ.

ಗೃಹ ಸಚಿವರು ತಮ್ಮ ಇಲಾಖೆಯ ಬಗ್ಗೆ ಆಡಿರುವ ಮಾತುಗಳು ಅವರ  ವೈಫಲ್ಯವನ್ನು ಸೂಚಿಸುತ್ತದೆ. ಅವರು ಇಲಾಖೆಯ ಮತ್ತು ಪೊಲೀಸರ ಬಗ್ಗೆ ಆಡಿರುವ ಕೀಳು ಮಟ್ಟದ ಮಾತುಗಳು ಆಡಳಿತ ವ್ಯವಸ್ಥೆ ಕುಸಿದಿರುವುದರ ಪ್ರತೀಕವಾಗಿದೆ. ಇದು ಸಚಿವರಿಗೆ ಶೋಭೆ ತರಲಾರದು. ಇದರಿಂದ ಕೆಲವು ಪ್ರಾಮಾಣಿಕ ಐಪಿಎಸ್ ಅಧಿಕಾರಿಗಳನ್ನು ಅವಮಾನಿಸಿದಂತಾಗಿದೆ. ಇಂತಹ ಮಾತುಗಳನ್ನು ಆಡುವ ಸಚಿವರಿಗೆ ತಮ್ಮ ಸಚಿವ ಸ್ಥಾನದಲ್ಲಿ ಮುಂದುರಿಯುವ ಅರ್ಹತೆ ಇಲ್ಲ ಎಂದು ರಮಾನಾಥ ರೈ ಟೀಕಿಸಿದ್ದಾರೆ.

ಪಂಚಾಯತ್ ವ್ಯವಸ್ಥೆ ಯನ್ನು ಬಿಜೆಪಿ ದುರ್ಬಲ ಗೊಳಿಸುತ್ತಾ ಬಂದಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಪಂಚಾ ಯತ್ ಗಳಲ್ಲಿ ಅಭಿವೃದ್ಧಿ ಸಂಪೂರ್ಣ ಕುಸಿದಿದೆ. ಯುಪಿಎ ಸರ್ಕಾರ ಆರಂಭಿಸಿರುವ ಉದ್ಯೋಗ ಖಾತ್ರಿ ಯೋಜನೆ ಹೊರತಾಗಿ ಎಲ್ಲಾ ಅಭಿವೃದ್ಧಿ ಯೋಜನೆಗಳು ಸ್ಥಗಿತ ಗೊಂಡಿದೆ. ಬಡವರಿಗೆ ಮನೆ ನಿರ್ಮಿಸಿ ಕೊಟ್ಟ ಉದಾಹರಣೆಗಳಿಲ್ಲ. ಈ ಕಾರಣದಿಂದ ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಪಂಚಾಯತ್ ಸದಸ್ಯರು ಬೆಂಬಲ ನೀಡಬೇಕು ಎಂದು ಮನವಿ ಮಾಡುವುದಾಗಿ ರಮಾನಾಥ ರೈ ತಿಳಿಸಿದ್ದಾರೆ.

ಬಿಜೆಪಿ ಅಪಪ್ರಚಾರದಲ್ಲಿ ಮುಂದೆ ಇದೆ

ಮತೀಯ ಕಾರಣದಿಂದ ನಡೆದ ಹತ್ಯೆಯಲ್ಲಿ ಕಾಂಗ್ರೆಸ್ ಪಕ್ಷದ ಯಾವುದೇ ಪಾತ್ರ ಇಲ್ಲದೆ ಇದ್ದರೂ ಪಕ್ಷದ ವಿರುದ್ಧ ಬಿಜೆಪಿ ಅಪಪ್ರಚಾರ ನಡೆಸಿದೆ. ಶ್ರಂಗೇರಿ ಶಾರದ ದೇವಸ್ಥಾನದಿಂದ ಕಾನೂನು ಬಾಹಿರವಾಗಿ ಮೂರುವರೆ ಕೋಟಿ ಹಣವನ್ನು ಕಲ್ಲಡ್ಕದ ಸಂಸ್ಥೆಗೆ  ವರ್ಗಾವಣೆ ಮಾಡಿರುವುದನ್ನ ನಾನು ವಿರೋಧಿಸಿದಾಗ ಕಾಂಗ್ರೆಸ್  ಮಕ್ಕಳಿಗೆ ಊಟ ಕೊಡುವುದಕ್ಕೆ ವಿರೋಧ ಮಾಡಿದೆ ಎಂದು ಬಿಜೆಪಿ ಪಕ್ಷದವರು ಅಪಪ್ರಚಾರ ಮಾಡಿದ್ದಾರೆ. ಆದರೆ ಕಾಂಗ್ರೆಸ್ ಯಾವುದೇ ಸಂದರ್ಭದಲ್ಲಿ ಬಡ ಮಕ್ಕಳಿಗೆ ದೇವಸ್ಥಾನದ ಮೂಲಕ ಅನ್ನ ವಿತರಣೆ ಮಾಡುವ ಕೆಲಸಕ್ಕೆ ಪ್ರೋತ್ಸಾಹ ನೀಡುತ್ತಾ ಬಂದಿದೆ ಹೊರತು ವಿರೋಧಿಸಿಲ್ಲ ಎಂದು ರಮಾನಾಥ ರೈ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ದ.ಕ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಕಾಂಗ್ರೆಸ್ ಪದಾಧಿಕಾರಿಗಳಾದ ಶಾಹುಲ್ ಹಮೀದ್, ಕೋಡಿಜಾಲ್ ಇಬ್ರಾಹಿಂ, ಶಾಲೆಟ್ ಪಿಂಟೋ, ಲುಕ್ಮಾನ್ ಬಂಟ್ವಾಳ, ಪದ್ಮನಾಭ ನರಿಂಗಾನ, ಹರಿನಾಥ್, ಸುರೇಂದ್ರ ಕಾಂಬ್ಳಿ, ವಿಶ್ವಾಸ್ ದಾಸ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X