Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಧಾರ್ಮಿಕ ವ್ಯವಹಾರಗಳ ಮೇಲೆ ಸರಕಾರದ ಬಿಗಿ...

ಧಾರ್ಮಿಕ ವ್ಯವಹಾರಗಳ ಮೇಲೆ ಸರಕಾರದ ಬಿಗಿ ನಿಯಂತ್ರಣ: ಚೀನಾ ಅಧ್ಯಕ್ಷ ಕ್ಸಿ ಜಿಂಪಿಂಗ್ ಕರೆ

ವಾರ್ತಾಭಾರತಿವಾರ್ತಾಭಾರತಿ6 Dec 2021 8:59 PM IST
share
ಧಾರ್ಮಿಕ ವ್ಯವಹಾರಗಳ ಮೇಲೆ ಸರಕಾರದ ಬಿಗಿ ನಿಯಂತ್ರಣ: ಚೀನಾ ಅಧ್ಯಕ್ಷ ಕ್ಸಿ ಜಿಂಪಿಂಗ್ ಕರೆ

ಬೀಜಿಂಗ್, ಡಿ.6: ದೇಶದ ಭದ್ರತೆಗೆ ಕಸುವು ತುಂಬುವ ಉದ್ದೇಶದಿಂದ ಧಾರ್ಮಿಕ ವ್ಯವಹಾರಗಳ ಮೇಲೆ ಸರಕಾರದ ನಿಯಂತ್ರಣವನ್ನು ಬಿಗಿಗೊಳಿಸಲು ಹೆಚ್ಚಿನ ಕ್ರಮಗಳ ಅಗತ್ಯವಿದೆ ಮತ್ತು ಧಾರ್ಮಿಕ ನಂಬಿಕೆಗಳನ್ನು ಚೀನಾ ಸಂಸ್ಕೃತಿಯ ಪ್ರಭಾವದಡಿ ತರುವ ಅಗತ್ಯವಿದೆ ಎಂದು ಚೀನಾದ ಅಧ್ಯಕ್ಷ ಕ್ಸಿ ಜಿಂಪಿಂಗ್ ಹೇಳಿದ್ದಾರೆ. 

2019ರಲ್ಲಿ ಚೀನಾ ಸರಕಾರ ಪ್ರಕಟಿಸಿರುವ ಶ್ವೇತಪತ್ರದ ಪ್ರಕಾರ, ದೇಶದಲ್ಲಿ ಸುಮಾರು 200 ಮಿಲಿಯನ್ ಧಾರ್ಮಿಕ ಅನುಯಾಯಿಗಳಿದ್ದು ಇವರಲ್ಲಿ ಟಿಬೆಟ್ ನ ಬೌದ್ಧ ಧರ್ಮೀಯರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಉಳಿದಂತೆ 20 ಮಿಲಿಯನ್ ಮುಸ್ಲಿಮರು, 38 ಮಿಲಿಯನ್ ಪ್ರೊಟೆಸ್ಟೆಂಟ್ ಕ್ರೈಸ್ತರು, 6 ಮಿಲಿಯನ್ ಕ್ಯಾಥೊಲಿಕ್ ಕೈಸ್ತರು ಇದ್ದಾರೆ. ಅಲ್ಲದೆ ಸುಮಾರು 1,40,000 ಪ್ರಾರ್ಥನಾ ಮಂದಿರಗಳಿವೆ. ಕ್ಸಿನ್‌ಜಿಯಾಂಗ್ ಪ್ರಾಂತದಲ್ಲಿ ಉಯಿಗರ್ ಮುಸ್ಲಿಮರ ವಿರುದ್ಧ ಚೀನಾ ಅನುಸರಿಸುವ ದಮನಕಾರಿ ನೀತಿ ಜನಾಂಗಹತ್ಯೆಗೆ ಕಾರಣವಾಗುತ್ತಿದೆ ಎಂಬ ಆರೋಪವಿದೆ. ಧರ್ಮಗಳನ್ನು ಚೀನಾದ ಸಂಸ್ಕೃತಿಯ ಪ್ರಭಾವದಡಿ ತರಬೇಕಿದೆ. 

ಸೈದ್ಧಾಂತಿಕವಾಗಿ ನಾಸ್ತಿಕವಾಗಿ ಉಳಿದಿರುವ ಚೀನಾ ಕಮ್ಯುನಿಸ್ಟ್ ಪಕ್ಷದ ಮಾರ್ಗದರ್ಶನದಡಿ ಕಾರ್ಯ ನಿರ್ವಹಿಸುವಂತೆ ದಿಗ್ದರ್ಶನ ನೀಡಬೇಕಾಗಿದೆ. ಧಾರ್ಮಿಕ ಮುಖಂಡರ ಪ್ರಜಾಸತ್ತಾತ್ಮಕ ಮೇಲ್ವಿಚಾರಣೆ ಸುಧಾರಿಸುವ ಅಗತ್ಯವಿದೆ ಮತ್ತು ಧಾರ್ಮಿಕ ಕಾರ್ಯಗಳನ್ನು ದೇಶದ ಕಾನೂನಿನ ವ್ಯಾಪ್ತಿಯೊಳಗೆ ತರಬೇಕಿದೆ. ಆನ್‌ಲೈನ್  ಮೂಲಕ ನಡೆಯುವ ಧಾರ್ಮಿಕ ವ್ಯವಹಾರಗಳನ್ನು ಚೀನಾದ ತತ್ವಗಳಡಿ ತರಬೇಕಾಗಿದೆ ಎಂದು ಧಾರ್ಮಿಕ ವ್ಯವಹಾರಗಳ ಕುರಿತು ನಡೆದ ಸಮಾವೇಶದಲ್ಲಿ ಕ್ಸಿ ಜಿಂಪಿಂಗ್ ಪ್ರತಿಪಾದಿಸಿದ್ದಾರೆ. 

ಧಾರ್ಮಿಕ ನಂಬಿಕೆಯ ಸ್ವಾತಂತ್ರ್ಯದ ಕುರಿತು ಪಕ್ಷದ ನೀತಿಯನ್ನು ಸಂಪೂರ್ಣವಾಗಿ ಮತ್ತು ನಿಷ್ಟೆಯಿಂದ ಜಾರಿಗೆ ತರಬೇಕು. ಧಾರ್ಮಿಕ ವಲಯಗಳ ಜನರು ಮತ್ತು ಧಾರ್ಮಿಕ ಭಕ್ತರೊಂದಿಗೆ ಸರಕಾರವನ್ನು ಸಂಪರ್ಕಿಸುವ ಸೇತುವೆಯಾಗಿ ಧಾರ್ಮಿಕ ಗುಂಪುಗಳು ಕಾರ್ಯನಿರ್ವಹಿಸಬೇಕು ಎಂದವರು ಹೇಳಿದರು. 2016ರ ಬಳಿಕ ಮೊದಲ ಬಾರಿಗೆ ನಡೆದ ಸಮಾವೇಶದಲ್ಲಿ ದೇಶದ ಉನ್ನತ ಮುಖಂಡರು ಪಾಲ್ಗೊಂಡಿದ್ದು ಮುಂದಿನ ಕೆಲ ವರ್ಷಗಳಲ್ಲಿ ಚೀನಾದ ಧಾರ್ಮಿಕ ವ್ಯವಹಾರ ಹಾಗೂ ಅದರ ನಿಯಂತ್ರಣ ಕ್ರಮದ ಬಗ್ಗೆ ಮಾನದಂಡವನ್ನು ರೂಪಿಸುವ ಚರ್ಚೆ ನಡೆಸಿದ್ದಾರೆ ಎಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X