Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕ್ಷೇತ್ರದ ಅಭಿವೃದ್ದಿಗೆ ಆಗ್ರಹಿಸಿ...

ಕ್ಷೇತ್ರದ ಅಭಿವೃದ್ದಿಗೆ ಆಗ್ರಹಿಸಿ ಸುವರ್ಣಸೌಧಕ್ಕೆ ಡಿ.12ಕ್ಕೆ ಪಾದಯಾತ್ರೆ: ಶಾಸಕಿ ಅಂಜಲಿ ನಿಂಬಾಳ್ಕರ್

ವಾರ್ತಾಭಾರತಿವಾರ್ತಾಭಾರತಿ6 Dec 2021 10:53 PM IST
share
ಕ್ಷೇತ್ರದ ಅಭಿವೃದ್ದಿಗೆ ಆಗ್ರಹಿಸಿ ಸುವರ್ಣಸೌಧಕ್ಕೆ ಡಿ.12ಕ್ಕೆ ಪಾದಯಾತ್ರೆ: ಶಾಸಕಿ ಅಂಜಲಿ ನಿಂಬಾಳ್ಕರ್

ಬೆಳಗಾವಿ, ಡಿ. 6: ಅಕಾಲಿಕ ಮಳೆಯಿಂದ ಆಗಿರುವ ಹಾನಿ ಹಾಗೂ ಬೆಳೆ ನಷ್ಟಕ್ಕೆ ಪರಿಹಾರ, ಹದಗೆಟ್ಟ ರಸ್ತೆ, ಶಾಲೆಗಳ ಅಭಿವೃದ್ಧಿಗೆ ಆಗ್ರಹಿಸಿ ವಿಧಾನ ಮಂಡಲ ಅಧಿವೇಶನದ ಹಿನ್ನೆಲೆಯಲ್ಲಿ ಸರಕಾರದ ಗಮನ ಸೆಳೆಯಲು ಡಿ.12ಕ್ಕೆ ಖಾನಾಪುರದಿಂದ ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ಪಾದಯಾತ್ರೆ ನಡೆಸಲಾಗುವುದು ಎಂದು ಖಾನಾಪುರ ಕ್ಷೇತ್ರದ ಶಾಸಕಿ ಅಂಜಲಿ ನಿಂಬಾಳ್ಕರ್ ತಿಳಿಸಿದ್ದಾರೆ.

ಸೋಮವಾರ ಖಾನಾಪುರದಲ್ಲಿನ ತನ್ನ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಾನಾಪುರ ಕ್ಷೇತ್ರದ ಅಭಿವೃದ್ಧಿಗೆ ಆಗ್ರಹಿಸಿ ಸುವರ್ಣಸೌಧ ಚಲೋ ಪಾದಯಾತ್ರೆಗೆ ನಿರ್ಧರಿಸಲಾಗಿದೆ. ಡಿ.12ರ ಮಧ್ಯಾಹ್ನ 3 ಗಂಟೆಗೆ ಪಾದಯಾತ್ರೆ ಆರಂಭಿಸಲಾಗುವುದು. ಖಾನಾಪುರದಿಂದ ಬೆಳಗಾವಿಯ ಸುವರ್ಣ ವಿಧಾನಸೌಧವರೆಗೆ 40 ಕಿಮೀ ಪಾದಯಾತ್ರೆ ನಡೆಯಲಿದೆ ಎಂದರು.

ಪಾದಯಾತ್ರೆ ಮಾಡಿ ಡಿ.13 ಕ್ಕೆ ಪಾದಯಾತ್ರೆ ಸುವರ್ಣಸೌಧ ತಲುಪಲಿದೆ. ತಾಲೂಕಿನಲ್ಲಿ ಅಕಾಲಿಕ ಮಳೆಯಿಂದ ಒಟ್ಟಾರೆ 3,632 ಹೆಕ್ಟೇರ್ ಪ್ರದೇಶ ಭತ್ತ ಹಾನಿಯಾಗಿದೆ. ಎನ್‍ಡಿಆರ್‍ಎಫ್ ನಿಯಮಾವಳಿ ಪ್ರಕಾರ ಪ್ರತಿ ಎಕರೆಗೆ 2,720 ರೂ.ಪರಿಹಾರ ನೀಡಲಾಗುತ್ತದೆ. ಆದರೆ, 1 ಎಕರೆ ಭತ್ತ ಬೆಳೆಯಲು 15 ಸಾವಿರ ರೂ.ಗೂ ಹೆಚ್ಚು ಹಣ ಖರ್ಚಾಗುತ್ತದೆ. ರೈತರಿಗೆ ಪರಿಹಾರ ನೀಡುವಲ್ಲಿ ಸರಕಾರದ ಜವಾಬ್ದಾರಿ ಇಲ್ಲವೇ? ಎಂದು ಅವರು ಪ್ರಶ್ನಿಸಿದರು.

ತಾಲೂಕಿನಲ್ಲಿ 66 ಶಾಲೆಗಳಿದ್ದು ಒಟ್ಟು 255 ಶಾಲೆಯ ಕೊಠಡಿಗಳು ಮಳೆಯಿಂದ ಹಾನಿಯಾಗಿವೆ. ನೂರಕ್ಕೂ ಮನೆಗಳು ಬಿದ್ದಿವೆ. ಆದರೆ, ಸರಕಾರ ಕೇವಲ ಪರಿಹಾರ ಘೋಷಣೆ ಮಾಡಿ ಕೈತೊಳೆದುಕೊಂಡಿದೆ. ಆದರೆ, ಒಬ್ಬರಿಗೂ ಈವರೆಗೂ ಪರಿಹಾರ ನೀಡಿಲ್ಲ. ಒಂದು ಕಡೆ ಕೋವಿಡ್, ಮತ್ತೊಂದು ಕಡೆ ಪೆಟ್ರೋಲ್, ಡೀಸೆಲ್ ಸಹಿತ ಅಗತ್ಯ ವಸ್ತುಗಳ ಬೆಲೆ ಏರಿಕೆ ಸಂಕಷ್ಟದಿಂದ ಜನತೆ ಬೇಸತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕಿನಲ್ಲಿ ರಸ್ತೆ, ಸೇತುವೆ ಸಂಪೂರ್ಣ ಹದಗೆಟ್ಟಿದೆ. ಖಾನಾಪುರ ಕ್ಷೇತ್ರದಲ್ಲಿ ಹೆಚ್ಚಿನ ಭಾಗ ಅರಣ್ಯ ಪ್ರದೇಶದಲ್ಲಿದ್ದು ಇರುವ ರಸ್ತೆಗಳನ್ನು ದುರಸ್ತಿ ಮಾಡಲು ಸಾಧ್ಯವಾಗದೆ ಜನತೆ ಹಲವು ಕಿಲೋಮೀಟರ್ ದೂರ ಕಾಲ್ನಾಡಿಗೆಯಲ್ಲೆ ಸಂಚಾರ ಮಾಡಬೇಕಿದೆ. ಹೀಗಾಗಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ನೆರವು ನೀಡಬೇಕು. ಜೊತೆಗೆ ಅಕಾಲಿಕ ಮಳೆ ಹಾನಿಗೆ ಕೂಡಲೇ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಪಾದಯಾತ್ರೆ ನಡೆಸಲಾಗುವುದು ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X