Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಕೆ-203 ಒಪ್ಪಂದಕ್ಕೆ ಭಾರತ-ರಷ್ಯಾ ಸಹಿ:...

ಎಕೆ-203 ಒಪ್ಪಂದಕ್ಕೆ ಭಾರತ-ರಷ್ಯಾ ಸಹಿ: ಮಿಲಿಟರಿ ಸಹಕಾರಕ್ಕೆ 10 ವರ್ಷಗಳ ಒಪ್ಪಂದ ನವೀಕರಣ

ವಾರ್ತಾಭಾರತಿವಾರ್ತಾಭಾರತಿ6 Dec 2021 11:28 PM IST
share
ಎಕೆ-203 ಒಪ್ಪಂದಕ್ಕೆ ಭಾರತ-ರಷ್ಯಾ ಸಹಿ: ಮಿಲಿಟರಿ ಸಹಕಾರಕ್ಕೆ 10 ವರ್ಷಗಳ ಒಪ್ಪಂದ ನವೀಕರಣ

ಹೊಸದಿಲ್ಲಿ,ಡಿ.6: ಸಣ್ಣ ಶಸ್ತ್ರಾಸ್ತ್ರಗಳು ಮತ್ತು ಮಿಲಿಟರಿ ಸಹಕಾರ ಸೇರಿದಂತೆ ಹಲವಾರು ಒಪ್ಪಂದಗಳು,ಗುತ್ತಿಗೆ ಕರಾರುಗಳು ಮತ್ತು ಶಿಷ್ಟಾಚಾರಗಳಿಗೆ ಭಾರತ ಮತ್ತು ರಷ್ಯಾ ಸಹಿ ಹಾಕಿವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ಇಲ್ಲಿ ರಷ್ಯಾದ ರಕ್ಷಣಾ ಸಚಿವ ಸೆರ್ಗಿ ಶೋಯುಗು ಅವರೊಂದಿಗೆ ಮಾತುಕತೆಗಳ ಬಳಿಕ ತಿಳಿಸಿದರು.

‘ಭಾರತಕ್ಕೆ ರಷ್ಯಾದ ಬಲವಾದ ಬೆಂಬಲವನ್ನು ದೇಶವು ಶ್ಲಾಘಿಸುತ್ತದೆ. ನಮ್ಮ ಸಹಕಾರವು ಇಡೀ ಪ್ರದೇಶಕ್ಕೆ ಶಾಂತಿ,ಸಮೃದ್ಧಿ ಮತ್ತು ಸ್ಥಿರತೆಯನ್ನು ತರುತ್ತದೆ ಎಂದು ನಾವು ಆಶಿಸಿದ್ದೇವೆ’ ಎಂದು ಸಿಂಗ್ ಟ್ವೀಟಿಸಿದ್ದಾರೆ.
‌
ಶೋಯಿಗು ಅವರೊಂದಿಗಿನ ಮಾತುಕತೆಗಳನ್ನು ‘ಉತ್ಪಾದಕ,ಫಲಪ್ರದ ಮತ್ತು ಗಣನೀಯ ’ಎಂದು ಬಣ್ಣಿಸಿದ ಸಿಂಗ್,ಭಾರತವು ರಷ್ಯಾದೊಂದಿಗೆ ತನ್ನ ವಿಶೇಷ ಮತ್ತು ವಿಶಿಷ್ಟ ವ್ಯೆಹಾತ್ಮಕ ಪಾಲುದಾರಿಕೆಯನ್ನು ಗೌರವಿಸುತ್ತದೆ ಎಂದು ಹೇಳಿದರು.

2021-31ರ ಅವಧಿಗಾಗಿ ಮಿಲಿಟರಿ-ತಾಂತ್ರಿಕ ಸಹಕಾರ ವ್ಯವಸ್ಥೆಯಡಿ ಇಂಡೋ-ರಷ್ಯಾ ಪ್ರೈ.ಲಿ.ಮೂಲಕ 5,000 ಕೋ.ರೂ.ವೆಚ್ಚದಲ್ಲಿ 6,01,427 ಎಕೆ-203 ಅಸಾಲ್ಟ್ ರೈಫಲ್ಗಳ ಖರೀದಿ ಒಪ್ಪಂದಗಳಿಗೆ ಭಾರತ ಮತ್ತು ರಷ್ಯಾ ಸೋಮವಾರ ಸಹಿ ಹಾಕಿವೆ.
ಕಲಾಶ್ನಿಕೋವ್ ಸರಣಿಯಲ್ಲಿ ಸಣ್ಣ ಶಸ್ತ್ರಾಸ್ತ್ರಗಳ ತಯಾರಿಕೆ ಕ್ಷೇತ್ರದಲ್ಲಿ 2019,ಫೆ.18ರ ಒಪ್ಪಂದಕ್ಕೆ ತಿದ್ದುಪಡಿಯನ್ನು ತರುವ ಕುರಿತು ಶಿಷ್ಟಾಚಾರಕ್ಕೂ ಉಭಯ ದೇಶಗಳು ಸಹಿ ಹಾಕಿವೆ.

ಸುಷ್ಮಾ ಸ್ವರಾಜ್ ಭವನದಲ್ಲಿ ನಡೆದ ಮಾತುಕತೆಗಳಲ್ಲಿ ಸಿಂಗ್ ಅವರೊಂದಿಗೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಹಾಗೂ ಶೋಯಿಗು ಮತ್ತು ರಷ್ಯಾದ ವಿದೇಶಾಂಗ ಸಚಿವ ಸೆರ್ಗಿ ಲಾವ್ರೋವ್ ಪಾಲ್ಗೊಂಡಿದ್ದರು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರವಿಂದ ಬಾಗ್ಚಿ ಟ್ವೀಟಿಸಿದ್ದಾರೆ.

ಭಾರತವು ಎದುರಿಸುತ್ತಿರುವ ಸವಾಲುಗಳು ಮತ್ತು ಭಾರತಕ್ಕೆ ಹೆಚ್ಚು ಅಗತ್ಯವಾಗಿರುವ ರಷ್ಯಾದೊಂದಿಗೆ ನಿಕಟ ಮಿಲಿಟರಿ ಮತ್ತು ಮಿಲಿಟರಿ ತಾಂತ್ರಿಕ ಸಹಭಾಗಿತ್ವದ ಬಗ್ಗೆ ಚರ್ಚಿಸುವ ಅವಕಾಶ ನನಗೆ ಲಭಿಸಿತ್ತು. ಸಾಂಕ್ರಾಮಿಕ,ನಮ್ಮ ನೆರೆಯಲ್ಲಿ ಅಸಾಧಾರಣ ಮಿಲಿಟರೀಕರಣ ಮತ್ತು ಯುದ್ಧ ಸನ್ನದ್ಧತೆ ಹಾಗೂ 2020ರ ಬೇಸಿಗೆಯ ಆರಂಭದಿಂದ ನಮ್ಮ ಉತ್ತರದ ಗಡಿಯಲ್ಲಿ ಅಪ್ರಚೋದಿತ ಆಕ್ರಮಣ ಹಲವಾರು ಸವಾಲುಗಳನ್ನು ಒಡ್ಡಿವೆ.

-ರಾಜನಾಥ್ ಸಿಂಗ್,ರಕ್ಷಣಾ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X