Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆದಾಯ ಮತ್ತು ಸಂಪತ್ತಿನ ಜಾಗತಿಕ...

ಆದಾಯ ಮತ್ತು ಸಂಪತ್ತಿನ ಜಾಗತಿಕ ಅಸಮಾನತೆಗಳನ್ನು ಹೆಚ್ಚಿಸಿದ ಕೋವಿಡ್: ವರದಿ

ವಾರ್ತಾಭಾರತಿವಾರ್ತಾಭಾರತಿ7 Dec 2021 11:12 PM IST
share
ಆದಾಯ ಮತ್ತು ಸಂಪತ್ತಿನ ಜಾಗತಿಕ ಅಸಮಾನತೆಗಳನ್ನು ಹೆಚ್ಚಿಸಿದ ಕೋವಿಡ್: ವರದಿ

ಹೊಸದಿಲ್ಲಿ,ಡಿ.7: ಆದಾಯ ಮತ್ತು ಸಂಪತ್ತಿನ ಜಾಗತಿಕ ಅಸಮಾನತೆಗಳು ಹೇಗೆ ಉಳಿದುಕೊಂಡಿವೆ ಮತ್ತು ಕೋವಿಡ್ ಸಾಂಕ್ರಾಮಿಕವು ಅವುಗಳನ್ನು ಹೇಗೆ ಹೆಚ್ಚಿಸಿದೆ ಎನ್ನುವುದನ್ನು ವರ್ಲ್ಡ್ ಇನ್ಈಕ್ವಲಿಟಿ ಲ್ಯಾಬ್ ಮಂಗಳವಾರ ಬಿಡುಗಡೆಗೊಳಿಸಿರುವ ವರದಿಯು ಪ್ರಮುಖವಾಗಿ ಬಿಂಬಿಸಿದೆ.

ಕೋವಿಡ್ ಬಿಕ್ಕಟ್ಟು ಅತ್ಯಂತ ಶ್ರೀಮಂತರು ಮತ್ತು ಇತರರ ನಡುವಿನ ಅಸಮಾನತೆಗಳನ್ನು ಉಲ್ಬಣಗೊಳಿಸಿದೆ. ಆದಾಗ್ಯೂ ಶ್ರೀಮಂತ ರಾಷ್ಟ್ರಗಳಲ್ಲಿ ಸರಕಾರದ ಹಸ್ತಕ್ಷೇಪವು ಬಡತನದಲ್ಲಿ ಬೃಹತ್ ಏರಿಕೆಯನ್ನು ತಡೆದಿದೆ,ಆದರೆ ಬಡ ರಾಷ್ಟ್ರಗಳಲ್ಲಿ ಹೀಗಾಗಿಲ್ಲ. ಇದು ಬಡತನದ ವಿರುದ್ಧ ಹೋರಾಟದಲ್ಲಿ ಸಾಮಾಜಿಕ ಸ್ಥಿತಿಗಳ ಮಹತ್ವವನ್ನು ತೋರಿಸುತ್ತದೆ ಎಂದು ವಿಶ್ವ ಅಸಮಾನತೆ ವರದಿ 2022ರ ಅಗ್ರ ಲೇಖಕ ಲುಕಾಸ್ ಚಾನ್ಸೆಲ್ ಅವರು ಹೇಳಿದ್ದಾರೆ.

ಪ್ರಪಂಚದಾದ್ಯಂತದಿಂದ ತೀರ ಇತ್ತೀಚಿನ ಅಸಮಾನತೆ ದತ್ತಾಂಶಗಳನ್ನು ಸಂಚಯಿಸುವುದು ವರದಿಯ ಮುಖ್ಯ ಉದ್ದೇಶವಾಗಿದೆ. ಇದು ಯಾವಾಗಲೂ ಸುಲಭವಲ್ಲ,ಏಕೆಂದರೆ ಭಾರತ ಸೇರಿದಂತೆ ಕೆಲವು ದೇಶಗಳು ವಿಶ್ವಾಸಾರ್ಹ ಮಾಹಿತಿಯ ಲಭ್ಯತೆಯನ್ನು ಕಷ್ಟಕರವಾಗಿಸಿವೆ. ಕಳೆದ ಮೂರು ವರ್ಷಗಳಲ್ಲಿ ಭಾರತ ಸರಕಾರವು ಬಿಡುಗಡೆಗೊಳಿಸಿರುವ ಅಸಮಾನತೆ ದತ್ತಾಂಶಗಳ ಗುಣಮಟ್ಟವು ಗಂಭೀರವಾಗಿ ಹದಗೆಟ್ಟಿದೆ ಮತ್ತು ಇದು ಇತ್ತೀಚಿನ ಅಸಮಾನತೆ ಬದಲಾವಣೆಗಳನ್ನು ನಿರ್ಣಯಿಸುವುದನ್ನು ವಿಶೇಷ ಕಷ್ಟಕರವಾಗಿಸಿದೆ ಎಂದು ವರದಿಯು ಬೆಟ್ಟು ಮಾಡಿದೆ.

 ಸರಕಾರದ ಬೆಂಬಲದ ಕೊರತೆ ಮತ್ತು ಕಲ್ಯಾಣ ಯೋಜನೆಗಳನ್ನು ಕೈಬಿಟ್ಟಿರುವುದು ಪ್ರಪಂಚದಲ್ಲಿ ಅಸಮಾನತೆಗಳನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವನ್ನು ಹೊಂದಿವೆ ಎಂದು ವರದಿಯು ಹೇಳಿದೆ. ಇದು ಭಾರತದ ಪಾಲಿಗೂ ನಿಜವಾಗಿದೆ ಎಂದು ಆರ್ಥಿಕ ತಜ್ಞರಾದ ಅಭಿಜಿತ್ ಬ್ಯಾನರ್ಜಿ ಮತ್ತು ಎಶ್ತರ್ ಡುಫ್ಲೊ ಅವರು ವರದಿಯ ಮುನ್ನುಡಿಯಲ್ಲಿ ಬೆಟ್ಟು ಮಾಡಿದ್ದಾರೆ. ಖಾಸಗಿ ಕ್ಷೇತ್ರದ ನೇತೃತ್ವದ ಬೆಳವಣಿಗೆಗೆ ಅವಕಾಶ ಕಲ್ಪಿಸಲು ಚೀನಾ ಮತ್ತು ಭಾರತದಂತಹ ದೇಶಗಳು ಸರಕಾರಿ ನಿಯಂತ್ರಣವನ್ನು ಸಡಿಲಗೊಳಿಸಿದಾಗ ಅಸಮಾನತೆಯ ಬಗ್ಗೆ ಚಿಂತಿಸದಿರಿ ಎಂದು ಸಮರ್ಥಿಸಿಕೊಳ್ಳಲು ಅವೇ ಸಿದ್ಧಾಂತಗಳನ್ನು ಹರಿಬಿಡಲಾಗುತ್ತದೆ. ಈ ವರದಿಯ ಆಧಾರದಲ್ಲಿ ಹೇಳುವುದಾದರೆ ಪರಿಣಾಮವಾಗಿ ಭಾರತವು ಇಂದು ಪ್ರಪಂಚದಲ್ಲಿಯೇ ಅತ್ಯಂತ ಹೆಚ್ಚಿನ ಅಸಮಾನತೆಗಳನ್ನು ಹೊಂದಿರುವ ರಾಷ್ಟ್ರಗಳಲ್ಲೊಂದಾಗಿದೆ ಮತ್ತು ಚೀನಾ ಶೀಘ್ರವೇ ಆ ಸಾಲಿಗೆ ಸೇರುವ ಅಪಾಯದಲ್ಲಿದೆ ಎಂದು ಬ್ಯಾನರ್ಜಿ ಮತ್ತು ಡುಫ್ಲೊ ತಮ್ಮ ಮುನ್ನುಡಿಯಲ್ಲಿ ಬರೆದಿದ್ದಾರೆ.
 ‌
ಜಗತ್ತಿನ ಜನಸಂಖ್ಯೆಯ ಅರ್ಧದಷ್ಟು ಕಡುಬಡವರು ಯಾವುದೇ ಸಂಪತ್ತನ್ನು ಹೊಂದಿರುವುದಿಲ್ಲ,ಒಟ್ಟು ಸಂಪತ್ತಿನ ಶೇ.2ರಷ್ಟು ಹೊಂದಿದ್ದರೆ ಅದೇ ದೊಡ್ಡದು. ಇದಕ್ಕೆ ವ್ಯತಿರಿಕ್ತವಾಗಿ ಜಾಗತಿಕ ಜನಸಂಖ್ಯೆಯ ಶೇ.10ರಷ್ಟು ಅತ್ಯಂತ ಶ್ರೀಮಂತರು ಒಟ್ಟು ಸಂಪತ್ತಿನ ಶೇ.76ರಷ್ಟನ್ನು ಹೊಂದಿದ್ದಾರೆ. 1995ರಿಂದ ಬಿಲಿಯನೇರ್‌ಗಳ ಜಾಗತಿಕ ಸಂಪತ್ತಿನಲ್ಲಿ ಶೇ.1ರಿಂದ ಶೇ.3ಕ್ಕೂ ಅಧಿಕ ಏರಿಕೆಯಾಗಿದೆ. ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಈ ಏರಿಕೆ ಇನ್ನಷ್ಟು ಹೆಚ್ಚಾಗಿದೆ. ವಾಸ್ತವದಲ್ಲಿ 2020 ಜಾಗತಿಕ ಬಿಲಿಯನೇರ್ಗಳ ಸಂಪತ್ತಿನ ಪಾಲಿನ ತೀವ್ರ ಹೆಚ್ಚಳವನ್ನು ದಾಖಲಿಸಿದೆ ಎಂದು ವರದಿಯು ತಿಳಿಸಿದೆ.

ನಿರಂತರ ಮತ್ತು ಹೆಚ್ಚುತ್ತಿರುವ ಬಡತನವು ಅನಿವಾರ್ಯವೇನಲ್ಲ ಎಂದು ಬೆಟ್ಟು ಮಾಡಿರುವ ವರದಿಯು,ವಾಸ್ತವದಲ್ಲಿ ಅದು ರಾಜಕೀಯ ಆಯ್ಕೆಯಾಗಿದೆ. ಅಸಮಾನತೆಗಳನ್ನು ತಗ್ಗಿಸಲು ತೆಗೆದುಕೊಳ್ಳಬಹುದಾದ ಹಲವಾರು ಕ್ರಮಗಳಿವೆ ಎಂದು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X