Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಡಗಿಗೆ ಮೂರು ಬಾರಿ ಭೇಟಿ ನೀಡಿದ್ದ...

ಕೊಡಗಿಗೆ ಮೂರು ಬಾರಿ ಭೇಟಿ ನೀಡಿದ್ದ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್

ವಾರ್ತಾಭಾರತಿವಾರ್ತಾಭಾರತಿ8 Dec 2021 10:07 PM IST
share
ಕೊಡಗಿಗೆ ಮೂರು ಬಾರಿ ಭೇಟಿ ನೀಡಿದ್ದ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್

ಮಡಿಕೇರಿ ಡಿ.8 : ದೇಶದ ಸೇನಾಕ್ಷೇತ್ರಕ್ಕೆ ಅತಿಹೆಚ್ಚು ಸೈನಿಕರನ್ನು ನೀಡಿದ ಹೆಗ್ಗಳಿಕೆಯ ಕೊಡಗು ಜಿಲ್ಲೆಗೆ 'ಚೀಫ್ ಆಫ್ ಡಿಫೆನ್ಸ್ ಸ್ಟಾಫ್' (ಸಿಡಿಎಸ್) ಬಿಪಿನ್ ರಾವತ್ ಅವರು, ಮೂರು ಬಾರಿ ಭೇಟಿ ನೀಡಿದ್ದರು. 2016, 2017 ಮತ್ತು 2020 ರಲ್ಲಿ ಬಂದಿದ್ದ ಅವರು ಯೋಧರ ನಾಡಿನ ಮೇಲಿನ ಅಭಿಮಾನವನ್ನು ತೋರಿದ್ದರು.

ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಮತ್ತು ಜನರಲ್ ಕೆ.ಎಸ್. ತಿಮ್ಮಯ್ಯ ಅವರ ಬಗ್ಗೆ ವಿಶೇಷ ಗೌರವವನ್ನು ಹೊಂದಿದ್ದ ಸಿಡಿಎಸ್ ರಾವತ್ ಅವರು ತಾವು ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ, ಕೊಡಗಿಗೆ ಬರುವ ಯಾವುದೇ ಅವಕಾಶವನ್ನು ತಪ್ಪಿಸಿಕೊಳ್ಳುತ್ತಿರಲಿಲ್ಲ.  ಸೈನ್ಯದ ದಕ್ಷಿಣ ವಲಯದಿಂದ ಕೊಡಗಿನ ಬಿಟ್ಟಂಗಾಲದಲ್ಲಿ 2016 ರಲ್ಲಿ ನಡೆದ ‘ಆರ್ಮ್ಡ್ ಫೋರ್ಸಸ್ ಗಾಲ್ಫ್’ ಪಂದ್ಯಾವಳಿಯನ್ನು ಉದ್ಘಾಟಿಸಲು ಮತ್ತು ಮಡಿಕೇರಿಯಲ್ಲಿ ನಡೆದ ಸೈನಿಕರ ಸಮಾವೇಶದಲ್ಲಿ ಪಾಲ್ಗೊಳ್ಳಲು ಅಂದು ಲೆಫ್ಟಿನೆಂಟ್ ಜನರಲ್ ಹುದ್ದೆಯಲ್ಲಿದ್ದ ಬಿಪಿನ್ ರಾವತ್ ಅವರು ಕೊಡಗು ಜಿಲ್ಲೆಗೆ ಪ್ರಥಮ ಬಾರಿಗೆ ಭೇಟಿ ನೀಡಿದ್ದರು.

 ನಂತರ 2017 ರಲ್ಲಿ ಅಂದಿನ ಭಾರತೀಯ ಸೈನ್ಯದ ಮುಖ್ಯಸ್ಥರಾಗಿದ್ದ ಜನರಲ್ ದಲ್ಬೀರ್ ಸಿಂಗ್ ಅವರೊಂದಿಗೆ ಜಿಲ್ಲೆಗೆ ಆಗಮಿಸಿದ್ದರು. ಆ ಸಂದರ್ಭವೆ ಬಿಪಿನ್ ರಾವತ್ ಅವರು ಜನರಲ್ ತಿಮ್ಮಯ್ಯ ಮ್ಯೂಸಿಯಂ ಸ್ಥಾಪನೆಗೆ ಅಗತ್ಯ ನೆರವನ್ನು ನೀಡುವ ಆಶ್ವಾಸನೆಯನ್ನು ನೀಡಿದ್ದಲ್ಲದೆ, ಅದರಂತೆ ನಡೆದುಕೊಂಡದ್ದು ವಿಶೇಷ.

ಗೋಣಿಕೊಪ್ಪಲಿನ ಕಾವೇರಿ ಕಾಲೇಜು ಆವರಣದಲ್ಲಿ ಸ್ಥಾಪಿಸಲಾಗಿದ್ದ ಫೀ.ಮಾ. ಕೆ.ಎಂ. ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಪ್ರತಿಮೆಗಳ ಅನಾವರಣ ಸಮಾರಂಭಕ್ಕೆ ಜನರಲ್ ಬಿಪಿನ್ ರಾವತ್ ಅವರು ಆಗಮಿಸಿ, ಮಹಾನ್ ಸೇನಾನಿಗಳ ಪ್ರತಿಮೆಗಳನ್ನು ಅನಾವರಣಗೊಳಿಸಿದ್ದರು.

ನಂತರದ ದಿನಗಳಲ್ಲಿ ಫೀ.ಮಾ.ಕಾರ್ಯಪ್ಪ ಮತ್ತು ಜ.ತಿಮ್ಮಯ್ಯ ಫೋರಂ ಪದಾಧಿಕಾರಿಗಳು ಬಿಪಿನ್ ರಾವತ್ ಅವರನ್ನು ಸಂಪರ್ಕಿಸಿ ಜನರಲ್ ತಿಮ್ಮಯ್ಯ ಮ್ಯೂಸಿಯಂ ಉದ್ಘಾಟನೆಗೆ ರಾಷ್ಟ್ರಪತಿಗಳನ್ನು ಕರೆತರಬೇಕೆನ್ನುವ ಮನವಿಯನ್ನು ಮಾಡಿಕೊಂಡಿದ್ದರು. ಅದಕ್ಕೆ ಸ್ಪಂದಿಸಿ ಜನರಲ್ ಬಿಪಿನ್ ರಾವತ್ ಅವರು ನೀಡಿದ ಸಹಕಾರದಿಂದ 2021 ರಲ್ಲಿ ಮಡಿಕೇರಿಯ ಜನರಲ್ ತಿಮ್ಮಯ್ಯ ಮ್ಯೂಸಿಯಂ ಉದ್ಘಾಟನಾ ಸಮಾರಂಭಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಆಗಮಿಸಿದ್ದರು. ಅಲ್ಲದೆ ರಾವತ್ ಅವರು ಕೂಡ ಜೊತೆಯಲ್ಲಿದ್ದರು.

ಸಿಡಿಎಸ್ ಬಿಪಿನ್ ರಾವತ್ ಅವರ ತಂದೆ ಲಕ್ಷ್ಮಣ ಸಿಂಗ್ ರಾವತ್ ಮತ್ತು ಕೊಡಗಿನ ಲೆಫ್ಟಿನೆಂಟ್ ಜನರಲ್ ಬಿ.ಸಿ.ನಂದ ಅವರು ಸಮಕಾಲೀನರು. ಈ ಹಿನ್ನೆಲೆಯಲ್ಲಿ ಬಿಪಿನ್ ರಾವತ್ ಅವರು ಕೊಡಗಿಗೆ ಆಗಮಿಸಿದ ಅಂದರ್ಭ ಅವರಿಗೆ ಬಿ.ಸಿ. ನಂದ ಅವರು ಕೊಡವರ ಸಾಂಪ್ರದಾಯಿಕ ‘ಪೀಚೆಕತ್ತಿ’ಯನ್ನು ನೀಡಿ ‘ಈ ಪೀಚೆ ಕತ್ತಿಯನ್ನು ತಂದೆ ಮಗನಿಗೆ ನೀಡುವಂತದ್ದು. ನಿನ್ನ ತಂದೆ ಮತ್ತು ನಾನು ಸಮಕಾಲೀನರಾಗಿರುವುದರಿಂದ, ತಂದೆಯ ಸ್ಥಾನದಲ್ಲಿರುವ ನಾನು ನಿನಗೆ ಪೀಚೆಕತ್ತಿ ನೀಡುತ್ತಿದ್ದೇನೆ’ ಎಂದು ಹೇಳಿರುವ ಹೃದಯ ಸ್ಪರ್ಷಿ ಘಟನೆಯನ್ನು ನಿವೃತ್ತ ಮೇಜರ್ ಬಿ.ಎ.ನಂಜಪ್ಪ ನೆನಪನ್ನು ಹಂಚಿಕೊಂಡಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X