ಬೆಂಗಳೂರು: ಯುವ ಕಾಂಗ್ರೆಸ್ ನಿಂದ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ
ಬೆಂಗಳೂರು, ಡಿ.9: ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಜನ್ಮದಿನದ ಹಿನ್ನೆಲೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದ ಬಾಣಸವಾಡಿಯಲ್ಲಿ ಗುರುವಾರ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಸರ್ವಜ್ಞ ನಗರದ ಬಾಣಸವಾಡಿ ವಾರ್ಡ್ನ 70ಕ್ಕೂ ಅಧಿಕ ಗರ್ಭಿಣಿಯರಿಗೆ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್, ಕೆಪಿವೈಸಿಸಿ ಅಧ್ಯಕ್ಷ ಎಂ.ಎಸ್.ರಕ್ಷಾ ರಾಮಯ್ಯ ಬಾಗೀನ ನೀಡಿ ಗೌರವಿಸಿದರು.
ದೊಡ್ಡ ಬಾಣಸವಾಡಿಯ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ತಾಯ್ತನದ ನಿರೀಕ್ಷೆಯಲ್ಲಿರುವ ಗರ್ಭೀಣಿಯರು ರೇಷ್ಮೆ ಸೀರೆ ಉಟ್ಟಿದ್ದರು. ಪ್ರತಿಯೊಬ್ಬರೂ ಹೂ ಮುಡಿದು ಭಾರತೀಯ ಸಂಪ್ರದಾಯದ ಪ್ರತೀಕವಾಗಿ ಕಂಗೊಳಿಸಿದರು. ನೆರೆ ಹೊರೆ, ಸ್ನೇಹಿತೆಯರ ಜತೆ ಸಾಮೂಹಿಕ ಸೀಮಂತ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಂಭ್ರಮಿಸಿದರು.
ಜವಾಹರ್ ಬಾಲಭವನದ ಅಧ್ಯಕ್ಷ ಜೆ.ಸಿರಿಲ್ಪ್ರಭು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಘು ದೇವರಾಜ್ ಮತ್ತಿತರ ಯುವ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು.
Next Story