Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಆತ್ಮನಿರ್ಭರ್ ಭಾರತ್ ಯೋಜನೆ: ಸಾಲ...

ಆತ್ಮನಿರ್ಭರ್ ಭಾರತ್ ಯೋಜನೆ: ಸಾಲ ಮಂಜೂರಾತಿಯಲ್ಲಿ ಬ್ಯಾಂಕ್‌ಗಳ ಕಳಪೆ ಪ್ರದರ್ಶನ

ಜಿ.ಮಹಾಂತೇಶ್ಜಿ.ಮಹಾಂತೇಶ್11 Dec 2021 8:00 AM IST
share
ಆತ್ಮನಿರ್ಭರ್ ಭಾರತ್ ಯೋಜನೆ: ಸಾಲ ಮಂಜೂರಾತಿಯಲ್ಲಿ ಬ್ಯಾಂಕ್‌ಗಳ ಕಳಪೆ ಪ್ರದರ್ಶನ

ಬೆಂಗಳೂರು: ಆತ್ಮನಿರ್ಭರ್ ಭಾರತ್ ಯೋಜನೆಯಡಿಯಲ್ಲಿ ರಾಜ್ಯದಲ್ಲಿರುವ ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಜಿಇಸಿಎಲ್ (ಗ್ಯಾರಂಟೇಡ್ ಎಮರ್ಜೆನ್ಸಿ ಕ್ರೆಡಿಟ್ ಲೈನ್ ಲೋನ್)ಅಡಿಯಲ್ಲಿ ಸಾಲ ಮಂಜೂರಾತಿಯಲ್ಲಿ ಬ್ಯಾಂಕ್‌ಗಳು ಕಳಪೆ ಪ್ರದರ್ಶನ ತೋರಿವೆ.

ರಾಜ್ಯಮಟ್ಟದ ಬ್ಯಾಂಕರ್‌ಗಳ ಸಮಿತಿಯು 2021ರ ನವೆಂಬರ್ 12ರಂದು ನಡೆಸಿದ್ದ ಲೀಡ್ ಬ್ಯಾಂಕ್‌ಗಳ ಸಭೆಯಲ್ಲಿ ಆತ್ಮನಿರ್ಭರ್ ಭಾರತ್ ಯೋಜನೆಯಡಿಯಲ್ಲಿ ನೀಡಿರುವ ಸಾಲವನ್ನೂ ಪರಾಮರ್ಶಿಸಲಾಗಿದೆ. ಸಭೆಯ ನಡವಳಿಗಳು ‘the-file.in’ಗೆ ಲಭ್ಯವಾಗಿದೆ.

ಸದಸ್ಯ ಬ್ಯಾಂಕ್‌ಗಳು 2022ರ ಮಾರ್ಚ್ 31ರ ಅಂತ್ಯಕ್ಕೆ ಒಟ್ಟು4,50,000 ಕೋಟಿ ರೂ. ಸಾಲವನ್ನು ವಿತರಿಸಲು ಗುರಿ ನಿಗದಿಪಡಿಸಿಕೊಂಡಿದೆ. ಆದರೆ, 2021ರ ಸೆಪ್ಟಂಬರ್ 30ರ ಅಂತ್ಯಕ್ಕೆ ಜಿಇಸಿಎಲ್ ಅಡಿಯಲ್ಲಿ ಕೇವಲ

9, 595.85 ಕೋಟಿ ರೂ. ಸಾಲವನ್ನು (2,09,100 ಖಾತೆಗಳಿಗೆ) ಮಂಜೂರು ಮಾಡಿದೆ. ಈ ಯೋಜನೆಯಡಿಯಲ್ಲಿ ಒಟ್ಟು 11,082.45 ಕೋಟಿ ರೂ. ಸಾಲ ನೀಡಬೇಕಿತ್ತು. ಸೆಪ್ಟಂಬರ್‌ವರೆಗಿನ ಪ್ರಗತಿಯು ಕಳಪೆಯಾಗಿದೆ ಎಂದು ಬ್ಯಾಂಕರ್‌ಗಳ ಸಮಿತಿಯು ಅಸಮಾಧಾನ ವ್ಯಕ್ತಪಡಿಸಿರುವುದು ನಡವಳಿಯಿಂದ ತಿಳಿದು ಬಂದಿದೆ.

ಬಹುತೇಕ ಸದಸ್ಯ ಬ್ಯಾಂಕ್‌ಗಳು ಈ ಯೋಜನೆಯಡಿಯಲ್ಲಿ ಸಾಲಕ್ಕಾಗಿ ಸಲ್ಲಿಸಿರುವ ಅರ್ಜಿಗಳನ್ನು ವಿಲೇವಾರಿ ಮಾಡಿಲ್ಲ. ಅಲ್ಲದೆ ಬಹುತೇಕ ಎಂಎಸ್‌ಎಂಇಗಳಿಗೆ ಇಸಿಎಲ್‌ಜಿಎಸ್ ಯೋಜನೆಯ ಅರಿವಿಲ್ಲ. ಬ್ಯಾಂಕ್‌ಗಳು ಕೂಡ ಇದರ ಬಗ್ಗೆ ಹೆಚ್ಚಿನ ಪ್ರಚಾರವನ್ನೂ ಮಾಡಿಲ್ಲ ಎಂದು ಕಾಸಿಯಾ ಪ್ರತಿನಿಧಿ ಸಭೆಯಲ್ಲಿ ಮಾಹಿತಿ ನೀಡಿರುವುದು ನಡವಳಿಯಿಂದ ಗೊತ್ತಾಗಿದೆ. ಕೇಂದ್ರ ಸರಕಾರದ ಆತ್ಮ ನಿರ್ಭರ್ ಭಾರತ್ ಯೋಜನೆಯಡಿಯಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ಗಳಿಂದ ಸಾಲ ಪಡೆದ ಸೂಕ್ಷ್ಮ, ಸಣ್ಣ ಮತ್ತುಮಧ್ಯಮ ಕೈಗಾರಿಕೆಗಳಿಗೆ ಗ್ಯಾರಂಟೆಡ್ ಎಮರ್ಜೆನ್ಸಿ ಕ್ರೆಡಿಟ್ ಲೈನ್ ಲೋನ್ ಯೋಜನೆ ಜಾರಿಗೆ ತಂದಿದೆ.

ಈ ಯೋಜನೆಯ ಪ್ರಕಾರ 2020ರ ಫೆ.29ರಂದು ರಾಷ್ಟ್ರೀಕೃತ ಬ್ಯಾಂಕ್‌ಗಳಿಂದ ಸಾಲ ಪಡೆದ ಸೂಕ್ಷ್ಮ, ಸಣ್ಣ ಮತ್ತುಮಧ್ಯಮ ಕೈಗಾರಿಕೆಗಳ ಬಾಕಿ ಇರುವ ಮೊತ್ತ 25 ಕೋಟಿ ರೂ. ಗಿಂತ ಕಡಿಮೆ ಇದ್ದಲ್ಲಿ ಅಂತಹ ಘಟಕಗಳಿಗೆ ಈ ಬಾಕಿ ಮೊತ್ತದ ಶೇ.20ರಷ್ಟು ಮೊತ್ತವನ್ನು ಹೆಚ್ಚುವರಿ ಸಾಲವಾಗಿ ಯಾವುದೇ ಹೊಸ ಭದ್ರತೆ ಇಲ್ಲದೇ ನೀಡಲಾಗುವುದು. ಇದರ ಗರಿಷ್ಠ ಮೊತ್ತ 5 ಕೋಟಿ ರೂ. ಆಗಿರುತ್ತದೆ. ಈ ಸಾಲವನ್ನು 4 ವರ್ಷಗಳಲ್ಲಿ ಪಾವತಿಸಬೇಕು. ಬಡ್ಡಿ ದರವು ಶೇ.9.25ರಷ್ಟಿರುತ್ತದೆ.

ಈ ಯೋಜನೆಯಡಿಯಲ್ಲಿ ಕರ್ನಾಟಕದಲ್ಲಿ ಒಟ್ಟು 2,83,583 ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು 10,41,982.04 ಲಕ್ಷ ರೂ.ಗಳ ಜಿಇಸಿಎಲ್ ಸಾಲ ಪಡೆಯಲು ಅರ್ಹತೆ ಹೊಂದಿವೆ. 2020ರ ಸೆಪ್ಟಂಬರ್ ಅಂತ್ಯಕ್ಕೆ 1,30,993 ಕೈಗಾರಿಕೆಗಳಿಗೂ ಅಧಿಕ ಘಟಕಗಳಿಗೆ ರೂ. 5,68,122.81 ಲಕ್ಷಕ್ಕೂ ಅಧಿಕ ಮೊತ್ತದ ಸಾಲ ವಿತರಿಸಲಾಗಿತ್ತು. ಈ ಯೋಜನೆಗೆ ರಾಜ್ಯ ಸರಕಾರದಿಂದ ಯಾವುದೇ ಅನುದಾನ ನೀಡಲಾಗುವುದಿಲ್ಲ. ಎಂಎಸ್‌ಎಂಇಗಳಿಗೆ ನೀಡಬೇಕಾದ ಸಾಲವನ್ನು ಬ್ಯಾಂಕ್‌ಗಳೇ ತಮ್ಮ ನಿಧಿಯಿಂದ ನೀಡಬೇಕಾಗುತ್ತದೆ.

ಆತ್ಮನಿರ್ಭರ ಭಾರತ್ ಅಡಿಯಲ್ಲಿ ಬಿಡುಗಡೆ ಆಗಬಹುದಾದ ಹಣವನ್ನು ನಿರೀಕ್ಷಿಸಿ ಒಟ್ಟು 40,724.74 ಕೋಟಿ ರೂ. ಮೊತ್ತದಲ್ಲಿ ಅನುಷ್ಠಾನಗೊಳಿಸಬಹುದಾದ ವಿವಿಧ ಯೋಜನೆಗಳನ್ನು ಇತರೆ ಇಲಾಖೆಗಳು ಸಿದ್ಧಪಡಿಸಿಕೊಂಡಿವೆ. ಕೃಷಿ, ಸಾರಿಗೆ, ವಸತಿ, ರಿಯಲ್ ಎಸ್ಟೇಟ್, ಹೂಡಿಕೆ, ಉದ್ಯೋಗ ಸೃಷ್ಟಿ, ವಿದ್ಯುತ್ ಯೋಜನೆ ಸೇರಿದಂತೆ ಇನ್ನಿತರ ವಲಯಗಳಲ್ಲಿ ಯೋಜನೆಗಳ ನೀಲಿ ನಕ್ಷೆ ತಯಾರಿಸಿಟ್ಟುಕೊಂಡಿರುವ ಹಲವು ಇಲಾಖೆಗಳು ಇದಕ್ಕೆ ಸಂಬಂಧಿಸಿದಂತೆ ಕಾರ್ಯಸಾಧ್ಯತೆ ವರದಿಯನ್ನು ರೂಪಿಸಿವೆ.

ಹಿಂದಿನ ಕಾಂಗ್ರೆಸ್ ಸರಕಾರ 2018ರಲ್ಲಿ ಖಾಸಗಿ ಸಹಭಾಗಿತ್ವದಡಿಯಲ್ಲಿ ಕೈಗೆತ್ತಿಕೊಳ್ಳಲು ಮುಂದಾಗಿದ್ದ ಯೋಜನೆಗಳನ್ನೇ ಆತ್ಮನಿರ್ಭರ್ ಭಾರತ್ ಅಭಿಯಾನದಡಿಯಲ್ಲಿ ಅನುಷ್ಠಾನಕ್ಕೆ ಮುಂದಾಗಿವೆ.

ಹೂಡಿಕೆ ವಲಯ ಮತ್ತು ಉದ್ಯೋಗ ಸೃಷ್ಟಿ ವಲಯಕ್ಕೆ 33,323 ಕೋಟಿ ರೂ., ಫುಡ್ ಪಾರ್ಕ್ ಯೋಜನೆಗಳಿಗೆ 233 ಕೋಟಿ ರೂ., ಮೀನುಗಾರಿಕೆ ಯೋಜನೆಗೆ 120 ಕೋಟಿ ರೂ., ಆರೋಗ್ಯ ಸೇವೆ ಮೂಲ ಸೌಕರ್ಯಗಳಿಗೆ 6.32 ಕೋಟಿ ರೂ., ವಸತಿ ಯೋಜನೆಗೆ 536 ಕೋಟಿ ರೂ., ರಿಯಲ್ ಎಸ್ಟೇಟ್ ವಲಯಕ್ಕೆ 808.16 ಕೋಟಿ ರೂ., ವಿದ್ಯುತ್ ಯೋಜನೆಗಳಿಗೆ 1,300 ಕೋಟಿ ರೂ. ಮೊತ್ತದಲ್ಲಿ ಕಾರ್ಯ ಸಾಧ್ಯತೆ ವರದಿಯನ್ನು ಇಲಾಖೆಗಳು ಸಿದ್ಧಪಡಿಸಿಕೊಂಡಿರುವುದು ತಿಳಿದು ಬಂದಿದೆ.

ಕೊಪ್ಪಳದಲ್ಲಿ ರೈಸ್ ಟೆಕ್ನಾಲಾಜಿ ಪಾರ್ಕ್ ಸ್ಥಾಪಿಸಲು ಕಾರ್ಯ ಸಾಧ್ಯತೆ ವರದಿಯನ್ನು ಸಿದ್ಧಪಡಿಸುತ್ತಿರುವ ಕೃಷಿ ಮಾರಾಟ ಇಲಾಖೆ (ಎಪಿಎಂಸಿ)ಯು ಇದಕ್ಕಾಗಿ 122 ಕೋಟಿ ರೂ. ಯೋಜನಾ ವೆಚ್ಚವೆಂದು ಅಂದಾಜಿಸಿದೆ. ಅದೇ ರೀತಿ ಹಾವೇರಿಯಲ್ಲಿ ಮೆಕ್ಕೆಜೋಳ ಟೆಕ್ನಾಲಜಿ ಪಾರ್ಕ್‌ಗಾಗಿ 111 ಕೋಟಿ ರೂ. ಮೊತ್ತದಲ್ಲಿ ಅನುಷ್ಠಾನಗೊಳಿಸಬಹುದಾದ ಯೋಜನೆಯ ಪೂರ್ವ ಕಾರ್ಯ ಸಾಧ್ಯತೆ ವರದಿಯನ್ನು ಸಿದ್ಧಪಡಿಸಿರುವುದು ದಾಖಲೆಯಿಂದ ಗೊತ್ತಾಗಿದೆ.

ತುಮಕೂರು, ಶಿವಮೊಗ್ಗ, ದಾವಣಗೆರೆ, ವಿಜಯಪುರ ಮತ್ತು ಬೆಳಗಾವಿಯಲ್ಲಿ ಫುಡ್ ಪಾರ್ಕ್ ಅಭಿವೃದ್ಧಿಗಾಗಿ ಯೋಜಿಸಿರುವ ಇಲಾಖೆ ಈ ಸಂಬಂಧ ಇನ್ನೂ ಯೋಜನಾ ವೆಚ್ಚವನ್ನು ಅಂದಾಜಿಸಿಲ್ಲ. ಹಾಗೆಯೇ ಕಾರ್ಯ ಸಾಧ್ಯತೆಯನ್ನೂ ತಯಾರಿಸಿಲ್ಲ ಎಂಬುದು ತಿಳಿದು ಬಂದಿದೆ.

ಬೆಂಗಳೂರು (ಹೆಸರಘಟ್ಟ), ಮಂಡ್ಯ ಮತ್ತು ಚಿಕ್ಕಬಳ್ಳಾಪುರದಲ್ಲಿ ಒಟ್ಟು 2,000 ಮೆಟ್ರಿಕ್‌ಟನ್ ಸಾಮರ್ಥ್ಯದ ಶೀತಲೀಕರಣ ಕೇಂದ್ರಗಳಿಗೆ ಮೂಲ ಸೌಕರ್ಯಗಳಿಗಾಗಿ 300 ಕೋಟಿ ರೂ., ರಾಜ್ಯದ ವಿವಿಧೆಡೆ ಇರುವ ಉಗ್ರಾಣಗಳ ನಿರ್ವಹಣೆ ಮತ್ತು ಕಾರ್ಯಾಚರಣೆಗಾಗಿ 2,500 ಕೋಟಿ ರೂ., ಬೆಳಗಾವಿ, ವಿಜಯಪುರ, ಬಾಗಲಕೋಟೆ, ಧಾರವಾಡ ಮತ್ತು ಗದಗದಲ್ಲಿ ಕೃಷಿ ಉತ್ಪನ್ನಗಳ ಉತ್ಪಾದನೆ ಮತ್ತು ರಫ್ತು ವಹಿವಾಟು ಕೇಂದ್ರಗಳ ನಿರ್ಮಾಣಕ್ಕೆ 680 ಕೋಟಿ ರೂ., ಬೆಂಗಳೂರಿನಲ್ಲಿರುವ ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣ ಕೇಂದ್ರದ ಬಳಿ ಇರುವ ಬಳೇಪುರದಲ್ಲಿ ಸಾರಿಗೆ ಕೇಂದ್ರಕ್ಕೆ 597 ಕೋಟಿ ರೂ., ಹುಬ್ಬಳ್ಳಿ ಧಾರವಾಡದಲ್ಲಿ ಲಾಜಿಸ್ಟಿಕ್ ಪಾರ್ಕ್ ನಿರ್ಮಾಣಕ್ಕೆ 331 ಕೋಟಿ ರೂ. ಅಂದಾಜಿಸಿದೆ.

ಹಾರೋಹಳ್ಳಿ, ಹಾಸನ, ಮೈಸೂರು, ಮಂಗಳೂರು, ಶಿವಮೊಗ್ಗ, ಬೆಳಗಾವಿ, ಚಿತ್ರದುರ್ಗ ಜಿಲ್ಲೆಯಲ್ಲಿಯೂ ಲಾಜಿಸ್ಟಿಕ್ ಸಂಪರ್ಕಗಳ ಅಭಿವೃದ್ಧಿಗೆ ಯೋಜನೆ ರೂಪಿಸಿದೆಯಾದರೂ ಯೋಜನಾ ವೆಚ್ಚವನ್ನು ಅಂದಾಜಿಸಿಲ್ಲ. ಆದರೆ ಪೂರ್ವ ಕಾರ್ಯ ಸಾಧ್ಯತೆ ವರದಿಯನ್ನು ಪೂರ್ಣಗೊಳಿಸಿದೆ.

ಬೆಂಗಳೂರು ಪೂರ್ವ ತಾಲೂಕಿನ ಕನ್ನಮಂಗಲ ಹಾರ್ಟಿಕಲ್ಚರ್ ಫಾರ್ಮ್, ತುಮಕೂರಿನ ದೊಡ್ಡಸಾಗ್ಗೆರೆಯಲ್ಲಿ ಬಟಾನಿಕಲ್ ಗಾರ್ಡನ್, ಮೈಸೂರಿನ ಲಿಂಗಾಬುದಿ ಬಟಾನಿಕಲ್ ಗಾರ್ಡನ್, ಕೊಪ್ಪಳದ ಪಾಂಬವನ ಬಟಾನಿಕಲ್ ಗಾರ್ಡನ್ ಅಭಿವೃದ್ಧಿಗೊಳಸಲು ಯೋಜನೆ ರೂಪಿಸಿದೆಯಾದರೂ ಯೋಜನಾ ವೆಚ್ಚವನ್ನು ಅಂದಾಜಿಸಿಲ್ಲ. ಆದರೆ ತೋಟಗಾರಿಕೆ ಇಲಾಖೆ ಈ ಸಂಬಂಧ ಸಮಗ್ರ ಪರಿಕಲ್ಪನೆಯನ್ನು ರೂಪಿಸಿದೆ.

ಮಂಗಳೂರು ಮತ್ತು ಉಡುಪಿಯಲ್ಲಿ ಸೀ ಫುಡ್ ಪಾರ್ಕ್ ಗಾಗಿ 120 ಕೋಟಿ ರೂ. ಮೊತ್ತದಲ್ಲಿ ಯೋಜನೆ ರೂಪಿಸಿರುವ ಮೀನುಗಾರಿಕೆ ಇಲಾಖೆ, ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲೂ ಬೀಜೋತ್ಪಾದನಾ ಕೇಂದ್ರಗಳ ಫಾರ್ಮ್‌ಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲು ಉದ್ದೇಶಿಸಿದೆ. ಅದೇ ರೀತಿ ಖಾಸಗಿ ಸಹಭಾಗಿತ್ವದಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಮೀನುಗಾರಿಕೆ ಜಲಾಶಯ, ಅಕ್ವೇರಿಯಂ ಮೀನುಗಾರಿಕೆ ಬಂದರು ಮತ್ತು ತಂಗುದಾಣ ಕೇಂದ್ರಗಳನ್ನು ಸ್ಥಾಪಿಸುವ ಉದ್ದೇಶಿಸಿದ್ದರೂ ಈವರೆಗೂ ಕಾರ್ಯ ಸಾಧ್ಯತೆ ವರದಿಗಳು ಲಭ್ಯವಿಲ್ಲದಿರುವುದು ದಾಖಲೆಯಿಂದ ತಿಳಿದು ಬಂದಿದೆ.

ಕೋಲಾರ, ಶಿವಮೊಗ್ಗ ಮತ್ತು ಕಲಬುರಗಿಯಲ್ಲಿ ಜ್ಞಾನ ನಗರಿ ನಿರ್ಮಾಣ ಮತ್ತು ಇದಕ್ಕೆ ಮೂಲಸೌಕರ್ಯ ಕಲ್ಪಿಸಲು ಉದ್ದೇಶಿಸಿರುವ ಶಿಕ್ಷಣ ಇಲಾಖೆ, ಪೂರ್ವ ಕಾರ್ಯಸಾಧ್ಯತೆ ವರದಿಯನ್ನು ತಯಾರಿಸಿದೆ. ಆದರೆ ಯೋಜನಾ ವೆಚ್ಚ ಎಷ್ಟೆಂದು ಅಂದಾಜಿಸಿಲ್ಲ.

ಕಾರ್ಯ ಸಾಧ್ಯತೆ ವರದಿಯನ್ನು ತಯಾರಿಸಿಲ್ಲ

ಆತ್ಮನಿರ್ಭರ್ ಭಾರತ್ ಯೋಜನೆಯಡಿಯಲ್ಲಿ ಹಂಚಿಕೆ ಮಾಡಲು ಒಟ್ಟು ಮೊತ್ತದ ಪೈಕಿ ಬಳ್ಳಾರಿ ಜಿಲ್ಲೆಯಲ್ಲಿ ಉದ್ದೇಶಿತ ಇಂಡಸ್ಟ್ರಿಯಲ್ ಪಾರ್ಕ್ ಯೋಜನೆಗೆ ಸಿಂಹಪಾಲು ದೊರೆತಿದೆ. ಇದಕ್ಕಾಗಿ 30,345 ಕೋಟಿ ರೂ. ಮೊತ್ತದ ಯೋಜನೆ ರೂಪಿಸಿರುವ ಹೂಡಿಕೆ ವಲಯವು ಕಾರ್ಯ ಸಾಧ್ಯತೆ ವರದಿಯನ್ನು ತಯಾರಿಸಿಟ್ಟುಕೊಂಡಿದೆ. ರಾಯಚೂರು, ಬೀದರ್ ಸೇರಿದಂತೆ ಹಿಂದುಳಿದ ಮತ್ತು ಅತ್ಯಂತ ಹಿಂದುಳಿದ ಜಿಲ್ಲೆಗಳಲ್ಲಿ ಹೂಡಿಕೆ ಮತ್ತು ಉದ್ಯೋಗ ಸೃಷ್ಟಿ ಯೋಜನೆ ಸಂಬಂಧ ಇಲಾಖೆಗಳು ಕಾರ್ಯ ಸಾಧ್ಯತೆ ವರದಿಯನ್ನು ತಯಾರಿಸಿಲ್ಲ. ಆತ್ಮನಿರ್ಭರ್ ಯೋಜನೆಯಡಿಯಲ್ಲಿ ಹಂಚಿಕೆಯಾಗುವ ಮೊತ್ತವನ್ನು ರಾಜ್ಯದ ಹಿಂದಿನ ಸರಕಾರಗಳು ರೂಪಿಸಿದ್ದ ಹಲವು ಯೋಜನೆಗಳಿಗೆ ಬಿಡುಗಡೆ ಮಾಡುವ ಉದ್ದೇಶ ಹೊಂದಿದೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X