Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ತಾಲಿಬಾನ್ ಆಡಳಿತದ ಪ್ರದೇಶಗಳಿಗೆ ಮಾನವೀಯ...

ತಾಲಿಬಾನ್ ಆಡಳಿತದ ಪ್ರದೇಶಗಳಿಗೆ ಮಾನವೀಯ ನೆರವು ವಿಸ್ತರಿಸಿದ ಭಾರತ ‌

ವಾರ್ತಾಭಾರತಿವಾರ್ತಾಭಾರತಿ11 Dec 2021 10:40 PM IST
share
ತಾಲಿಬಾನ್ ಆಡಳಿತದ ಪ್ರದೇಶಗಳಿಗೆ ಮಾನವೀಯ ನೆರವು ವಿಸ್ತರಿಸಿದ ಭಾರತ ‌

ಕಾಬೂಲ್, ಡಿ.11: ಅಫ್ಘಾನಿಸ್ತಾನದ ಮೇಲೆ ತಾಲಿಬಾನ್ ನಿಯಂತ್ರಣ ಸಾಧಿಸಿದ ಬಳಿಕ ಭಾರತ ರವಾನಿಸುತ್ತಿರುವ ಪ್ರಥಮ ಮಾನವೀಯ ನೆರವಿನಲ್ಲಿ ಶನಿವಾರ 1.6 ಮೆಟ್ರಿಕ್ ಟನ್‌ಗಳಷ್ಟು ಜೀವರಕ್ಷಕ ಔಷಧವನ್ನು ಮೊದಲ ಕಂತಿನಲ್ಲಿ ಪೂರೈಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಔಷಧ ವಸ್ತುಗಳ ಸರಕು ಹಾಗೂ 10 ಭಾರತೀಯರು, 94 ಅಫ್ಘಾನ್ ಪ್ರಜೆಗಳಿದ್ದ ವಿಮಾನ ಶುಕ್ರವಾರ ದಿಲ್ಲಿಯಿಂದ ಕಾಬೂಲ್‌ಗೆ ಪ್ರಯಾಣಿಸಿದೆ. ಈ ನೆರವು ಭಾರತದ ಜನರಿಂದ ದೊರಕಿರುವ ಉಡುಗೊರೆಯಾಗಿದ್ದು ಕಷ್ಟಕಾಲದಲ್ಲಿ ಅಫ್ಗಾನ್‌ನ ಹಲವು ಕುಟುಂಬಗಳಿಗೆ ನೆರವಾಗಲಿದೆ ಎಂದು ಅಫ್ಘಾನ್ ರಾಯಭಾರಿ ಫರೀದ್ ಮಮೂನ್‌ದ್ಝಾಯ್ ಹೇಳಿದ್ದಾರೆ.

ಅಫ್ಘಾನಿಸ್ತಾನದಲ್ಲಿರುವ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಭಾರತ ಸರಕಾರ ಮಾನವೀಯ ನೆರವಿನ ಪ್ರಥಮ ಕಂತಿನಲ್ಲಿ ಔಷಧ ವಸ್ತುಗಳನ್ನು ರವಾನಿಸಿದೆ. ಕಾಬೂಲ್‌ನಲ್ಲಿರುವ ವಿಶ್ವ ಆರೋಗ್ಯ ಸಂಸ್ಥೆಯ ಪ್ರತಿನಿಧಿಗಳಿಗೆ ಔಷಧ ಸರಕನ್ನು ಹಸ್ತಾಂತರಿಸಲಾಗುವುದು ಮತ್ತು ಕಾಬೂಲ್‌ನಲ್ಲಿ ನ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯಲ್ಲಿ ಬಳಸಲಾಗುವುದು ಎಂದು ಭಾರತದ ವಿದೇಶ ವ್ಯವಹಾರ ಸಚಿವಾಲಯ ಹೇಳಿದೆ.

ಅಫ್ಘಾನ್‌ನಲ್ಲಿರುವ ತೀವ್ರ ಮಾನವೀಯ ಬಿಕ್ಕಟ್ಟಿನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆ ದೇಶಕ್ಕೆ ಅಡೆತಡೆಯಿಲ್ಲದ ಮಾನವೀಯ ನೆರವು ಒದಗಿಸಬೇಕೆಂದು ಭಾರತ ಪ್ರತಿಪಾದಿಸುತ್ತಿದೆ. ಇದೇ ವೇಳೆ, ಅಫ್ಘಾನ್‌ನಲ್ಲಿ ಎಲ್ಲರನ್ನೂ ಒಳಗೊಂಡ ನೈಜ ಸರಕಾರ ರಚನೆಯಾಗಬೇಕು ಮತ್ತು ಆ ದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗೆ ಆಸ್ಪದ ನೀಡಬಾರದು ಎಂದು ಭಾರತ ಆಗ್ರಹಿಸುತ್ತಿದೆ.

ಭಾರತದಲ್ಲಿ ಸಿಕ್ಕಿಹಾಕಿಕೊಂಡಿದ್ದ ಅಲ್ಪಸಂಖ್ಯಾತ ಸಮುದಾಯದವರ ಸಹಿತ ಅಫ್ಘಾನ್ ಪ್ರಜೆಗಳು ಔಷಧ ಸರಕನ್ನು ಒಯ್ದ ವಿಮಾನದಲ್ಲಿ ಸ್ವದೇಶಕ್ಕೆ ಮರಳಿದ್ದಾರೆ. ಆಪರೇಷನ್ ದೇವಿಶಕ್ತಿ ಅಭಿಯಾನದಡಿ ಈ ಪ್ರಜೆಗಳನ್ನು ಕಾಬೂಲ್ ಗೆ ಕರೆದೊಯ್ಯಲಾಗಿದೆ. ಅಫ್ಘಾನ್ ಮೇಲೆ ತಾಲಿಬಾನ್‌ಗಳು ನಿಯಂತ್ರಣ ಸಾಧಿಸಿದ ಬಳಿಕ, ಅಲ್ಲಿರುವ ಭಾರತೀಯರನ್ನು ಹಾಗೂ ಅಫ್ಘಾನಿಸ್ತಾನೀಯರನ್ನು ತೆರವುಗೊಳಿಸುವ ಸಲುವಾಗಿ ಆಗಸ್ಟ್ 15ರಿಂದ ಆಪರೇಷನ್ ದೇವಿಶಕ್ತಿ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು ಆಗಸ್ಟ್‌ನಲ್ಲಿ438 ಭಾರತೀಯರ ಸಹಿತ 565 ಜನರನ್ನು ಸ್ಥಳಾಂತರಿಸಲಾಗಿದೆ.

ರಸ್ತೆ ಮಾರ್ಗವಾಗಿ ಪಾಕ್ ಮೂಲಕ ಅಫ್ಘಾನ್ ಗೆ 50,000 ಟನ್‌ಗಳಷ್ಟು ಗೋಧಿ ಮತ್ತು ಔಷಧ ಪೂರೈಸುವುದಾಗಿ ಭಾರತ ಈಗಾಗಲೇ ಘೋಷಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X