Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಹನ್ನೊಂದನೆ ದಿನಕ್ಕೆ ಕಾಲಿಟ್ಟ...

ಬೆಂಗಳೂರು: ಹನ್ನೊಂದನೆ ದಿನಕ್ಕೆ ಕಾಲಿಟ್ಟ ಐಟಿಐ ಗುತ್ತಿಗೆ ನೌಕರರ ಧರಣಿ

ಐದು ಸಂಘಟನೆಗಳಿಂದ ನೌಕರರ ಪ್ರತಿಭಟನೆಗೆ ಬೆಂಬಲ

ವಾರ್ತಾಭಾರತಿವಾರ್ತಾಭಾರತಿ11 Dec 2021 10:56 PM IST
share
ಬೆಂಗಳೂರು: ಹನ್ನೊಂದನೆ ದಿನಕ್ಕೆ ಕಾಲಿಟ್ಟ ಐಟಿಐ ಗುತ್ತಿಗೆ ನೌಕರರ ಧರಣಿ

ಬೆಂಗಳೂರು, ಡಿ.11: ನಗರದ ಕೆ.ಆರ್.ಪುರಂ ಬಳಿಯಿರುವ ಕೇಂದ್ರ ಸರಕಾರ ಒಡೆತನದ ಐಟಿಐ ಕಾರ್ಖಾನೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ಪ್ರತಿಭಟನೆ ಹನ್ನೊಂದನೆ ದಿನಕ್ಕೆ ಕಾಲಿಟ್ಟಿದೆ. ಡಿ.1ರಂದು ಕಾರ್ಖಾನೆಯ ಆಡಳಿತ ಮಂಡಳಿಯು ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದ 80ಜನ ನೌಕರರನ್ನು ಯಾವುದೇ ನೋಟಿಸ್ ನೀಡದೆ ಕೆಲಸದಿಂದ ಕೈಬಿಟ್ಟಿದೆ. ಆದುದರಿಂದ ನೌಕರರು ಒಗ್ಗೂಡಿ ಕಾರ್ಖಾನೆಯ ಆವರಣದಲ್ಲಿ ಪ್ರತಿಭಟನೆ ನೆಡಸುತ್ತಿದ್ದಾರೆ. 

ಐಟಿಐ ಕಾರ್ಖಾನೆಯು ದೇಶದ ರಕ್ಷಣಾ ವ್ಯವಸ್ಥೆ, ದೂರ ಸಂಪರ್ಕ ಸೇರಿದಂತೆ ಹಲವಾರು ಕ್ಷೇತ್ರಗಳಿಗೆ ಕೊಡುಗೆ ನೀಡುತ್ತಿದೆ. ಇದಕ್ಕೆ ಕಾರಣವಾಗಿರುವ ಕಾರ್ಮಿಕರನ್ನು ಕೇಂದ್ರ ಸರಕಾರವು ಕಡೆಗಣಿಸಿರುವುದು ಸರಿಯಲ್ಲ. ಕಳೆದ ಮೂರು ದಶಕಗಳ ಹಿಂದೆ ಕಾರ್ಖಾನೆಯಲ್ಲಿ ಮಹಿಳಾ ಸಹಕಾರ ಸಂಘದಿಂದ ಕಾರ್ಮಿಕರನ್ನು ಕೆಲಸಕ್ಕೆ ತೆಗೆದುಕೊಳ್ಳಲಾಗಿತ್ತು. ದಶಕಗಳಿಂದಲೂ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ನೌಕರರಿಗೆ ಸೇವಾ ಭದ್ರತೆ ನೀಡಬೇಕಾಗುತ್ತದೆ ಎಂಬ ಕಾರಣಕ್ಕಾಗಿ ಕಳೆದ ವರ್ಷ ಪಿಎಸ್‍ಎಸ್ ಕಂಪನಿಗೆ ನೌಕರರನ್ನು ಸೇರ್ಪಡೆ ಮಾಡಿದೆ. 

ಈಗ ದೆಹಲಿ ಮೂಲದ ಸಾಯಿ ಕಮ್ಯುನಿಕೇಷನ್ ಕಂಪನಿಗೆ ಒತ್ತಾಯಪೂರ್ವಕವಾಗಿ ಕಾರ್ಮಿಕರನ್ನು ಸೇರ್ಪಡೆ ಮಾಡಲಾಗುತ್ತಿದೆ. ಇದು ಕಾರ್ಮಿಕರ ಭವಿಷ್ಯಕ್ಕೆ ಮಾರಕವಾಗಿದ್ದು, ನೂತನ ಗುತ್ತಿಗೆ ಕಂಪನಿಗೆ ಸೇರಿಕೊಡರೆ ಕಾರ್ಮಿಕರ ಸೇವಾನುಭವವನ್ನು ಪರಿಗಣಿಸುವುದಿಲ್ಲ. ಸುಮಾರು 5ರಿಂದ 30 ವರ್ಷಗಳವರೆಗೂ ದುಡಿಸಿಕೊಂಡು ಈಗ ಕಾರ್ಮಿಕರನ್ನು ಅತಂತ್ರಗೊಳಿಸಲಾಗಿದೆ ಎಂದು ಎಐಸಿಸಿಟಿಯು ಸಂಘಟನೆಯ ಮುಖ್ಯಸ್ಥೆ ಮೈತ್ರೀಯಿ ಕೃಷ್ಣನ್ ಆರೋಪಿಸಿದ್ದಾರೆ.

ಶನಿವಾರದಂದು ರಾಜ್ಯದ ಅಂಬೇಡ್ಕರ್ ಸ್ಲಂ ನಿವಾಸಿಗಳ ಹೋರಾಟ ಸಂಘ, ಮಹಿಳಾ ಸಂಘ ಸೇರಿದಂತೆ ನಗರದ ಐದು ಸಂಘಟಣೆಗಳು ನೌಕರರ ಪ್ರತಿಭಟನೆಗೆ ಬೆಂಬಲ ನೀಡಿವೆ. ಕಾರ್ಮಿಕರನ್ನು ಪುನಃ ಕೆಲಸಕ್ಕೆ ಸೇರಿಸಿಕೊಳ್ಳುವವರೆಗೂ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ಮಾಡಲಾಗುವುದು. ಮುಂದಿನ ದಿನಗಳಲ್ಲಿ ನೂರಾರು ಕಾರ್ಮಿಕರೊಂದಿಗೆ ರ್ಯಾಲಿ, ಧರಣಿ ನಡೆಸಿ, ರಾಷ್ಟ್ರೀಯತೆಯ ಹೆಸರಿನಲ್ಲಿ ಆಳುತ್ತಿರುವ ಕೇಂದ್ರ ಸರಕಾರದ ಬಂಡವಾಳಶಾಹಿ ಧೋರಣೆಯ ಮುಖವಾಡವನ್ನು ದೇಶದ ಜನರಿಗೆ ತೋರಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಸರಕಾರಿ ಒಡೆತನದ ಕಾರ್ಖಾನೆಯೊಂದು ಕಾರ್ಮಿಕರಿಗೆ ಸೇವಾ ಭದ್ರತೆಯನ್ನು ನೀಡಲಾಗದೆ, ಗುತ್ತಿಗೆ ಕಂಪನಿಗಳ ಮೊರೆ ಹೋಗುತ್ತಿರುವುದು ಹೊಸದೇನು ಅಲ್ಲ. ಕಾರ್ಮಿಕರನ್ನು ಕಾರ್ಖಾನೆಯ ಆಡಳಿತ ಮಂಡಳಿ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳುತ್ತದೆ. ಆಯ್ಕೆಯಾದ ಕಾರ್ಮಿಕರನ್ನು ಕಾರ್ಖಾನೆಗಳ ಉತ್ಪಾದನಾ, ಮಾರುಕಟ್ಟೆ ವಿಭಾಗಗಳಿಗೆ ಕೆಲಸಕ್ಕೆ ನೇಮಿಸುತ್ತದೆ. ಆದರೆ ಕಾರ್ಮಿಕರಿಗೆ ಕೆಲವೊಂದು ಸವಲತ್ತುಗಳನ್ನು ನೀಡಬೇಕು ಎಂಬ ಕಾರಣಕ್ಕಾಗಿ ಗುತ್ತಿಗೆ ಕಂಪನಿಯ ಮೂಲಕ ಅವರಿಗೆ ಸಂಬಳ ಪಾವತಿ ಮಾಡಲಾಗುವುದು. ಹೀಗೆ ಸರಕಾರವು ಕಾರ್ಮಿಕ ವಿರೋಧಿ ನೀತಿಯನ್ನು ಅನುಸರಿಸುತ್ತ ಬಂಡವಾಳಶಾಹಿಯನ್ನು ಬೆಳೆಸುತ್ತಿದೆ. 

-ಮೈತ್ರೀಯಿ ಕೃಷ್ಣನ್, ಮುಖ್ಯಸ್ಥೆ, ಎಐಸಿಸಿಟಿಯು ಸಂಘಟನೆ.  

ಲಾಕ್ ಡೌನ್ ಸಮಯದಲ್ಲಿ ಐಟಿಐ ಕಾರ್ಖಾನೆಯು ಸಂಬಳವನ್ನು ಪಾವತಿಸಿರಲಿಲ್ಲ. ಇದನ್ನು ಪ್ರಶ್ನಿಸಿ ಪ್ರಾದೇಶಿಕ ಕಾರ್ಮಿಕ ಆಯುಕ್ತರ ಬಳಿ ದಾವೆ ಹೂಡಲಾಯಿತು. ಅಲ್ಲಿ ವಿಚಾರಣೆ ನಡೆಸಿ ಕಾರ್ಮಿಕರ ಪರವಾಗಿ ತೀರ್ಪು ನೀಡಿದರು. ಅಲ್ಲದೇ ಕಳೆದ ಮೂರು ದಶಕಗಳಿಂದ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರನ್ನು ಖಾಯಂಗೊಳಿಸಬೇಕು ಎಂದು ಆಡಳಿತ ಮಂಡಳಿಯನ್ನು ಮನವಿ ಮಾಡಲಾಯಿತು. ಮಂಡಳಿ ಅದನ್ನು ತಿರಸ್ಕರಿಸಿದ ಕಾರಣ ಈ ವಿಚಾರವಾಗಿ ಆಯುಕ್ತರಿಗೆ ದೂರು ನೀಡಲಾಗಿದೆ. ವಿಚಾರಣೆ ನಡೆಯುವವರೆಗೂ ಕಾರ್ಮಿಕರ ಸೇವಾ ಷರತ್ತುಗಳನ್ನು ಬದಲಿಸಬಾರದು ಎಂದು ಆಯುಕ್ತರು ಐಟಿಐ ಆಡಳಿತ ಮಂಡಳಿಗೆ ಆದೇಶಿಸಿದ್ದರೂ, ಅದನ್ನು ಲೆಕ್ಕಿಸದೆ ನಮ್ಮನ್ನು ಕೆಲಸದಿಂದ ತೆಗೆಯಲಾಗಿದೆ. 

-ಪಳಿನಿ, ಪೀಲ್ಡ್ ಇಂಜಿನಿಯರ್, ಐಟಿಐ ಬೆಂಗಳೂರು 

ದಶಕಗಳಿಂದ ಕೆಲಸ ಮಾಡುತ್ತಿದ್ದೇವೆ. ನಮಗೆ ಯಾವುದೇ ಸೇವಾ ಭದ್ರತೆಯನ್ನು ಐಟಿಐ ಕಾರ್ಖಾನೆ ನೀಡುತ್ತಿಲ್ಲ. ಕಳೆದ ಎರಡು ವರ್ಷಗಳಿಂದ ಗುತ್ತಿಗೆ ಕಂಪನಿಗಳಿಗೆ ನಮ್ಮನ್ನು ಮಾರಾಟ ಮಾಡುತ್ತಿದ್ದಾರೆ. ಈಗ ದೆಹಲಿ ಮೂಲದ ಸಾಯಿ ಕಮ್ಯುನಿಕೇಷನ್ ಗುತ್ತಿಗೆ ಕಂಪನಿಯಲ್ಲಿ ಹೊಸದಾಗಿ ಕಾರ್ಮಿಕರು ರಿಜಿಸ್ರ್ಟೇಷನ್ ಮಾಡಿಕೊಳ್ಳಬೇಕು ಎಂದು ಐಟಿಐ ಆಡಳಿತ ಮಂಡಲಿ ತಿಳಿಸಿದೆ. ಇದರಿಂದ ನಮ್ಮ ಸೇವಾನುಭವವು ಶೂನ್ಯವಾಗಲಿದೆ. ಹೊಸದಾಗಿ ರಿಜಿಸ್ಟ್ರೇಷನ್ ಮಾಡಿಕೊಳ್ಳಲು ಸಾಯಿ ಕಮ್ಯುನಿಕೇಷನ್‍ಗೆ ಜಿಎಸ್‍ಟಿ ಸೇರಿದಂತೆ 900 ರೂ.ಗಳನ್ನು ಪಾವತಿಸಬೇಕಾಗಿದೆ. 

-ಅರುಣ್ ಕುಮಾರ್, ಮಿಷನ್ ಆಪರೇಟರ್, ಐಟಿಐ ಬೆಂಗಳೂರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X