ಬಿಪಿನ್ ರಾವತ್ ನಿಧನ ಕುರಿತು ಆಕ್ಷೇಪಾರ್ಹ ಬರಹದ ಆರೋಪ: ಮೈಸೂರಿನ ವ್ಯಕ್ತಿ ಬಂಧನ
ಬೆಂಗಳೂರು, ಡಿ.12: ಸಿಡಿಎಸ್ ಬಿಪಿನ್ ರಾವತ್ ಸಾವಿನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಬರಹ ಪ್ರಕಟಿಸಿದ ಆರೋಪ ಸಂಬಂಧ ಓರ್ವನನ್ನು ಇಲ್ಲಿನ ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮೈಸೂರು ಮೂಲದ ಟಿ.ಕೆ. ವಸಂತ್ ಕುಮಾರ್(40)ರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಬಂಧಿತ ಆರೋಪಿ ಲ್ಯಾಬ್ ಟೆಕ್ನಿಷಿಯನ್ ಆಗಿ, ಖಾಸಗಿ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ. ಇತ್ತೀಚೆಗೆ ವಸಂತ್ ಫೇಸ್ಬುಕ್ನಲ್ಲಿ ಆಕ್ಷೇಪಾರ್ಹ ಬರಹ ಪ್ರಕಟಿಸಿದ್ದರು. ಇದರನ್ವಯ ಐಪಿಸಿ ಸೆಕ್ಷನ್ 505ರಡಿಯಲ್ಲಿ ಎಫ್ಐಆರ್ ದಾಖಲಿಸಿ ಬಂಧನ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Next Story