Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ವಿಶ್ವದ ಸಂಪೂರ್ಣ ಕಾಗದ ರಹಿತ, ಡಿಜಿಟಲ್...

ವಿಶ್ವದ ಸಂಪೂರ್ಣ ಕಾಗದ ರಹಿತ, ಡಿಜಿಟಲ್ ನಗರವಾಗಿ ದುಬೈ

ವಾರ್ತಾಭಾರತಿವಾರ್ತಾಭಾರತಿ13 Dec 2021 8:37 AM IST
share
ವಿಶ್ವದ ಸಂಪೂರ್ಣ ಕಾಗದ ರಹಿತ, ಡಿಜಿಟಲ್ ನಗರವಾಗಿ ದುಬೈ

ದುಬೈ: ವಿಶ್ವದ ಪ್ರಥಮ ಕಾಗದ ರಹಿತ ನಗರವಾಗಿ ದುಬೈ ಹೊರಹೊಮ್ಮಿದೆ. ದುಬೈ ನಗರವನ್ನು ಶೇಕಡ 100ರಷ್ಟು ಕಾಗದ ರಹಿತ ನಗರವಾಗಿ ಸರ್ಕಾರ ಅಭಿವೃದ್ಧಿಪಡಿಸಿದೆ ಎಂದು ಎಮಿರೇಟ್‌ನ ದೊರೆ ಶೇಖ್ ಹಮೀದ್ ಬಿನ್ ಮೊಹ್ಮದ್ ಬಿನ್ ರಶೀದ್ ಅಲ್ ಮಕ್ಟೂನ್ ಪ್ರಕಟಿಸಿದ್ದಾರೆ. ಇದರಿಂದ 1.3 ಶತಕೋಟಿ ದಿರ್ಹಮ್ (350 ದಶಲಕ್ಷ ಡಾಲರ್) ಉಳಿತಾಯವಾಗಲಿದ್ದು, 14 ದಶಲಕ್ಷ ಮಾನವ ಗಂಟೆಗಳು ಉಳಿಯಲಿವೆ ಎಂದು ಅವರು ಹೇಳಿದ್ದಾರೆ.

ದುಬೈ ನಗರದ ಎಲ್ಲ ಆಂತರಿಕ ಮತ್ತು ಬಾಹ್ಯ ವಹಿವಾಟುಗಳು ಮತ್ತು ಸರ್ಕಾರಿ ಪ್ರಕ್ರಿಯೆಗಳು ಇದೀಗ ಶೇಕಡ 100ರಷ್ಟು ಡಿಜಿಟಲ್ ಆಗಿರುತ್ತವೆ ಹಾಗೂ ಸಮಗ್ರ ಡಿಜಿಟಲ್ ಸರ್ಕಾರಿ ಸೇವೆಗಳ ಪ್ಲಾಟ್‌ಫಾರಂ ಮೂಲಕ ಇದನ್ನು ನಿರ್ವಹಿಸಲಾಗುತ್ತಿದೆ.

"ಈ ಗುರಿಯನ್ನು ಸಾಧಿಸಿರುವುದು ತನ್ನ ಎಲ್ಲ ಆಯಾಮಗಳಲ್ಲಿ ಡಿಜಿಟಲೀಕೃತ ಜೀವನವನ್ನು ಸಾಧಿಸುವ ದುಬೈ ಪಯಣದಲ್ಲಿ ಮೈಲುಗಲ್ಲಾಗಿದೆ. ಈ ಪಯಣ ಅನುಶೋಧನೆ, ಸೃಜನಶೀಲತೆ ಮತ್ತು ಭವಿಷ್ಯದ ಗುರಿಯ ಮೂಲವನ್ನು ಹೊಂದಿದ ಪಯಣವಾಗಿತ್ತು" ಎಂದು ಶೇಕ್ ಹಮ್ದನ್ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಈ ಸಾಧನೆಯು ವಿಶ್ವದ ಅಗ್ರಗಣ್ಯ ಡಿಜಿಟಲ್ ರಾಜಧಾನಿಯಾಗಿ ದುಬೈ ಸ್ಥಾನಮಾನವನ್ನು ದೃಢಪಡಿಸಿದೆ ಮತ್ತು ಗ್ರಾಹಕರ ಸಂತೋಷ ವಿಸ್ತತಗೊಳಿಸುವ ನಿಟ್ಟಿನಲ್ಲಿ ಸರ್ಕಾರಿ ಕಾರ್ಯಾಚಣೆಗಳನ್ನು ಮತ್ತು ಸೇವೆಗಳನ್ನು ವಿನ್ಯಾಸಗೊಳಿಸುವಲ್ಲಿ ದುಬೈ ಮಾದರಿಯಾಗಿದೆ ಎಂದು ಅವರು ವಿವರಿಸಿದ್ದಾರೆ.

ಅಮೆರಿಕ, ಬ್ರಿಟನ್, ಯೂರೋಪ್ ಹಾಗೂ ಕೆನಡಾ, ಸರ್ಕಾರಿ ಪ್ರಕ್ರಿಯೆ ಹಾಗೂ ನಾಗರಿಕರ ಗುರುತಿಸುವಿಕೆ ಸೇರಿದಂತೆ ಸರ್ಕಾರಿ ಸೇವೆಗಳನ್ನು ದೊಡ್ಡಪ್ರಮಾಣದಲ್ಲಿ ಡಿಜಿಟಲೀಕರಿಸುವ ಯೋಜನೆಯನ್ನು ಪ್ರಕಟಿಸಿವೆ. ಆದರೆ ಇವು ಸೈಬರ್ ದಾಳಿಗೆ ತುತ್ತಾಗುವ ಅಪಾಯವಿದೆ ಎಂಬ ಅಭಿಪ್ರಾಯಗಳೂ ಕೇಳಿಬರುತ್ತಿವೆ. ಮುಂದಿನ ಐದು ದಶಕಗಳಲ್ಲಿ ದುಬೈ, ಡಿಜಿಟಲ್ ಜೀವನದ ಸೃಷ್ಟಿ ಮತ್ತು ವಿಸ್ತರಣೆಗಾಗಿ ಅತ್ಯಾಧುನಿಕ ಕಾರ್ಯತಂತ್ರಗಳನ್ನು ಅನುಷ್ಠಾನಕ್ಕೆ ತರಲು ಸರ್ಕಾರ ಉದ್ದೇಶಿಸಿದೆ ಎಂದು ದುಬೈ ದೊರೆ ಪ್ರಕಟಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X