ಮುಂದಿನ ವರ್ಷದಿಂದ ಹರ್ಯಾಣ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಪಾಠ : ಮನೋಹರ್ ಲಾಲ್ ಕಟ್ಟರ್

ಚಂಡೀಗಢ : ಹರ್ಯಾಣಾದ ಶಾಲೆಯ ವಿದ್ಯಾರ್ಥಿಗಳು ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲೆಗಳಲ್ಲಿ ಭಗವದ್ಗೀತೆಯ ಶ್ಲೋಕಗಳನ್ನು ಪಠಿಸಲಿದ್ದಾರೆ ಎಂದು ರಾಜ್ಯದ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ಹೇಳಿದ್ದಾರೆ.
ಶನಿವಾರ ಕುರುಕ್ಷೇತ್ರದಲ್ಲಿ ಅಂತರಾಷ್ಟ್ರೀಯ ಗೀತಾ ಮಹೋತ್ಸವದ ಅಂಗವಾಗಿ ಆಯೋಜಿಸಲಾದ ವಿಚಾರಸಂಕಿರಣದಲ್ಲಿ ಅವರು ಮಾತನಾಡುತ್ತಿದ್ದರು.
ಭಗವದ್ಗೀತೆಗೆ ಸಂಬಂಧಿಸಿದ ಪುಸ್ತಕಗಳನ್ನು ಐದನೇ ಮತ್ತು ಆರನೇ ತರಗತಿ ವಿದ್ಯಾರ್ಥಿಗಳಿಗೆ ಕಲಿಸಲಾಗುವುದು ಎಂದು ಎರಡು ವಾರ ಪರ್ಯಂತ ನಡೆಯಲಿರುವ ಈ ಮಹೋತ್ಸವದಲ್ಲಿ ಅವರು ಹೇಳಿದರು.
ಭಗವದ್ಗೀತೆ ಜೀವನಕ್ಕೊಂದು ದಿಕ್ಕು ನೀಡುತ್ತದೆ. ಯುವಜನತೆ ಭಗವದ್ಗೀತೆಯ ಸಂದೇಶವನ್ನು ತಮ್ಮ ಜೀವನದಲ್ಲಿ ಅಳವಡಿಸಬೇಕು. ಒಂದು ಶ್ಲೋಕದ ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಯಶಸ್ಸು ಸಾಧಿಸಲು ಅದು ಸಾಕು ಎಂದು ಅವರು ಹೇಳಿದರು.
ಈ ಸಮಾರಂಭದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಕೂಡ ಉಪಸ್ಥಿತರಿದ್ದರು.
ಗೀತೆಯ ಶ್ಲೋಕಗಳನ್ನು ಶಾಲೆಯಲ್ಲಿ ಮುಂದಿನ ವರ್ಷದಿಂದ ವಿದ್ಯಾರ್ಥಿಗಳು ಪಠಿಸಲಿದ್ದಾರೆಂಬ ಮುಖ್ಯಮಂತ್ರಿಯ ಹೇಳಿಕೆಯನ್ನು ಅವರ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್ನಲ್ಲೂ ಟ್ವೀಟ್ ಮಾಡಲಾಗಿದೆ.