Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಾರಿಗೆ ನಿಗಮಗಳಲ್ಲಿ ಮಾನವೀಯತೆ ಕೊರತೆ:...

ಸಾರಿಗೆ ನಿಗಮಗಳಲ್ಲಿ ಮಾನವೀಯತೆ ಕೊರತೆ: ಸಾರಿಗೆ ನೌಕರರ ಆರೋಪ

ವಾರ್ತಾಭಾರತಿವಾರ್ತಾಭಾರತಿ13 Dec 2021 7:51 PM IST
share

ಬೆಂಗಳೂರು, ಡಿ.13: ಕಳೆದ ಎರಡು ವರ್ಷಗಳಿಂದ ರಾಜ್ಯದ ಸಾರಿಗೆ ನಿಗಮಗಳಲ್ಲಿ ಮಾನವೀಯತೆ ಕೊರತೆ ಎದ್ದು ಕಾಣುತ್ತಿದ್ದು, ಉಸಿರುಗಟ್ಟುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಸಾರಿಗೆ ನಿಗಮಗಳಲ್ಲಿ ದಿನದಿಂದ ದಿನಕ್ಕೆ ಕಾರ್ಮಿಕ ಶೋಷಣೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಹಂತ-ಹಂತವಾಗಿ ಧರಣಿ ಮಾಡಲಾಗುವುದು ಎಂದು ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳಿಯ ಮಹಾ ಪ್ರಧಾನ ಕಾರ್ಯದರ್ಶಿ ಬಿ. ಜಯದೇವರಾಜ ಅರಸು ತಿಳಿಸಿದ್ದಾರೆ.

ಸೋಮವಾರ ಪ್ರೆಸ್‍ಕ್ಲಬ್‍ನಲ್ಲಿ ಮಾತನಾಡಿದ ಅವರು, ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿರುವ ಸಾರಿಗೆ ನಿಗಮಗಳ ನೌಕರರ ಜೀವನ ಇಂದು ದುಸ್ತರವಾಗಿದೆ. ಮಾನವೀಯತೆಯನ್ನು ಮರೆತ ಸರಕಾರವು ಅವರನ್ನು ಶೋಷಣೆ ಮಾಡುತ್ತಿದೆ. ಇದನ್ನು ಖಂಡಿಸಿ, ನಿಗಮಗಳ ಕೇಂದ್ರ ಕಚೇರಿಗಳ ಆವರಣದಲ್ಲಿ ಡಿ.28ರಂದು ಶಾಂತಿಯುತ ಧರಣಿ ನಡೆಸಲಾಗುವುದು. ಈ ಶಾಂತಿಯುತ ಹೋರಾಟಕ್ಕೆ ಸರಕಾರವು ಸ್ಪಂದಿಸದಿದ್ದರೆ, ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದರು.

ಸರಕಾರವು ಸಾರಿಗೆ ನೌಕರರಿಗೆ ಸರಕಾರದ 6ನೇ ವೇತನ ಪಾವತಿಸಬೇಕು. ವಜಾ ಮಾಡಿರುವ ನೌಕರರನ್ನು ಪುನಾಃ ಕೆಲಕ್ಕೆ ಸೇರಿಸಿಕೊಳ್ಳಬೇಕು. ಸಾರಿಗೆ ನೌಕರರ ಮೇಲೆ ದಾಖಲಾಗಿರುವ ಪೊಲೀಸ್ ಮೊಕದಮೆಗಳನ್ನು ಹಿಂಪಡೆಯಬೇಕು. ಕಾನೂನುಬಾಹಿರವಾಗಿ ಮಾಡಿದ ವರ್ಗಾವಣೆಯನ್ನು ರದ್ದು ಮಾಡಬೇಕು. ಪೂರ್ಣ ಪ್ರಮಾಣದ ವೇತನವನ್ನು ನೀಡಬೇಕು, ಎಂದು ಬೇಡಿಕೆಯಿಟ್ಟ ಅವರು, ಬೇಡಿಕೆ ಈಡೇರದಿದ್ದರೆ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಸರಕಾರಕ್ಕೆ ಎಚ್ಚರಿಕೆ ನೀಡಿದರು. 

ಕಣ್ಮುಚ್ಚಿ ಕುಳಿತ ಸರಕಾರ

ಕಳೆದ ವರ್ಷ ಡಿಸೆಂಬರ್ ಮತ್ತು 2021ರ ಏಪ್ರಿಲ್ ತಿಂಗಳಲ್ಲಿ ಮುಷ್ಕರನಿರತ ಸಾವಿರಾರು ಅಮಾಯಕ ಸಾರಿಗೆ ನೌಕರರನ್ನು ಸರಾಕಾರವು ಕಾನೂನುಬಾಹಿರವಾಗಿ ವಜಾಗೊಳಿಸಲಾಗಿದೆ. ವಜಾಗೊಂಡಿರುವ ನೌಕಕರಲ್ಲಿ ಬಹುತೇಕ ಮಂದಿ ಯುವ ಕಾರ್ಮಿಕರಾಗಿದ್ದು, ಅವರ ಭವಿಷ್ಯ ಈಗ ಹಾಳಾಗಿದೆ. ಅಲ್ಲದೆ, ಕೆಲವರ ಮೇಲೆ ಪೊಲೀಸ್ ಮೊಕದಮೆಗಳನ್ನು ಹೂಡಲಾಗಿದ್ದು, ಅವರ ಜೀವನ ದುಸ್ತರವಾಗಿದೆ. ಪ್ರಸ್ತುತ ಸೇವೆ ಸಲ್ಲಿಸುತ್ತಿರುವ ಸಾರಿಗೆ ನೌಕರರಿಗೆ ನಿಗಮಗಳು ಅರ್ಧ ಸಂಬಳವನ್ನು ಪಾವತಿ ಮಾಡುತ್ತಿದ್ದು, ಸರಕಾರಕ್ಕೆ ಇದು ತಿಳಿದಿದ್ದರೂ ಕಣ್ಮುಚ್ಚಿ ಕುಳಿತಿರುವುದಾರೂ ಏಕೆ?  

-ಡಾ. ಕೆ.ಎಸ್. ಶರ್ಮಾ, ಅಧ್ಯಕ್ಷರು, ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X