ಉಡುಪಿ: ‘ಭವ್ಯ ಕಾಶಿ ದಿವ್ಯ ಕಾಶಿ’ ನೇರ ಪ್ರಸಾರ ವೀಕ್ಷಣೆಯ ಉದ್ಘಾಟನೆ
ಉಡುಪಿ, ಡಿ.13: ಉಡುಪಿ ನಗರ ಬಿಜೆಪಿ ಆಶ್ರಯದಲ್ಲಿ ಉಡುಪಿ ಪೇಜಾವರ ಮಠದ ಪ್ರಾಂಗಣದಲ್ಲಿ ಡಿ.13ರಂದು ನಡೆದ ನವೀಕೃತ ಕಾಶಿ ವಿಶ್ವನಾಥಧಾಮ ’ಭವ್ಯ ಕಾಶಿ ದಿವ್ಯ ಕಾಶಿ’ ಇದರ ಉದ್ಘಾಟನೆಯ ನೇರ ಪ್ರಸಾರ ಕಾರ್ಯಕ್ರಮವನ್ನು ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಪ್ರಧಾನಿಯಾಗಿ ಕಂಡ ಕನಸು ಮತ್ತು ಜನತೆಗೆ ನೀಡಿದ ವಾಗ್ದಾನದಂತೆ ಅವರ ಕಲ್ಪನೆಯ ಭವ್ಯ ವಾರಣಾಸಿ ರೂಪಾಂತರ ಗೊಳ್ಳುತ್ತಿದೆ. ಕಾಶಿ ವಿಶ್ವನಾಥಧಾಮ ಲೋಕಾರ್ಪಣೆ ಭಾರತೀಯ ಐತಿಹಾಸಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಗತ ವೈಭವವನ್ನು ಮತ್ತೆ ಸಾದರಪಡಿಸುವಲ್ಲಿ ಹೊಸ ಮೈಲಿಗಲ್ಲಾಗಲಿದೆ. ನವ ಭಾರತ ನಿರ್ಮಾಣದ ಪರಿಕಲ್ಪನೆಯ ಪ್ರಮುಖ ಘಟ್ಟ ಇದಾಗಿದ್ದು ಪ್ರತಿಯೊಬ್ಬ ಭಾರತೀಯನ ಮನಸಲ್ಲಿ ಭಾರತೀಯತೆಯ ನೈಜ ರೂಪದ ಅನಾವರಣದ ಬಗ್ಗೆ ಹೊಸ ಆತ್ಮವಿಶ್ವಾಸ ಮತ್ತು ಆಶಾದಾಯಕ ಭಾವನೆ ಮೂಡಿಸುವಲ್ಲಿ ಈ ಸಂದರ್ಭ ಸಾಕ್ಷಿಭೂತವಾಗಲಿದೆ ಎಂದರು.
ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ, ನಗರಸಭಾ ಅಧ್ಯಕ್ಷೆ ಸುಮಿತ್ರಾ ನಾಯಕ್, ನಗರಸಭಾ ಸದಸ್ಯರಾದ ಮಾನಸ ಸಿ.ಪೈ, ರಜನಿ ಹೆಬ್ಬಾರ್, ಸುಂದರ್ ಕಲ್ಮಾಡಿ, ಜಯಂತಿ ಪೂಜಾರಿ, ರಶ್ಮಿ ಆರ್.ಭಟ್, ಅಶೋಕ್ ನಾಯ್ಕ್, ಗಿರಿಧರ್ ಆಚಾರ್ಯ, ಹರೀಶ್ ಶೆಟ್ಟಿ, ಚಂದ್ರಶೇಖರ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸುಪ್ರಸಾದ್ ಶೆಟ್ಟಿ, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಂ. ಅಂಚನ್, ನಗರ ಯುವ ಮೋರ್ಚಾ ಅಧ್ಯಕ್ಷ ರೋಷನ್ ಶೆಟ್ಟಿ, ಪೆರಂಪಳ್ಳಿ ವಾಸುದೇವ ಭಟ್ ಉಪಸ್ಥಿತರಿದ್ದರು.
ಭವ್ಯ ಕಾಶಿ ದಿವ್ಯ ಕಾಶಿ ಕಾರ್ಯಕ್ರಮದ ಉಡುಪಿ ನಗರ ಸಂಚಾಲಕ ಬಾಲಕೃಷ್ಣ ಶೆಟ್ಟಿ ಸಂಯೋಜಿಸಿದರು. ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್ ಸ್ವಾಗತಿಸಿ, ಮಂಜುನಾಥ್ ಮಣಿಪಾಲ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
‘ಹಿಂದೂ ಪರಂಪರೆಯ ಪುನಶ್ಚೇತನಕ್ಕೆ ನಾಂದಿ’
ಪ್ರಾಚೀನ ಕಾಶೀ ನಗರದ ಪುನರುತ್ಥಾನ ಸನಾತನ ಹಿಂದೂ ಪರಂಪರೆಯ ಪುನಶ್ಚೇತನಕ್ಕೆ ನಾಂದಿ ಹಾಡಿದೆ ಎಂದು ಕೈವಲ್ಯ ಮಠಾದೀಶ ಶ್ರೀಶಿವಾನಂದ ಸರಸ್ವತಿ ಸ್ವಾಮೀಜಿ ಹೇಳಿದ್ದಾರೆ.
ಡಿ.13ರಂದು ಭವ್ಯ ಕಾಶೀ ದಿವ್ಯ ಕಾಶೀ ಕಾರ್ಯಕ್ರಮದ ಅಂಗವಾಗಿ ಬಿಜೆಪಿ ಕಾಪು ಮಂಡಲ ವತಿಯಿಂದ ಸಂಸ್ಥಾನ ಗೌಡ ಪಾದಾಚಾರ್ಯರ ಆತ್ರಾಡಿ ಶಾಖಾ ಮಠದಲ್ಲಿ ನಡೆದ ಕಾಶೀ ಕಾರಿಡಾರ್ ಉದ್ಘಾಟನೆಯ ನೇರ ಪ್ರಸಾರ ವೀಕ್ಷಣೆಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್, ಅನಿಲ್ ಶೆಟ್ಟಿ ಮಾಂಬೆಟ್ಟು, ಸತ್ಯಾನಂದ ನಾಯಕ್, ಅಶೋಕ್ ನಾಯಕ್, ಜಯರಾಮ್ ಪ್ರಭು, ರಮೇಶ್ ಸಾಲ್ವಂಕರ್, ನಿತ್ಯಾನಂದ ನಾಯಕ್ ನರಸಿಂಗೆ, ಸುಭಾಸ್ ನಾಯ್ಕ್, ವಿಜೇತ್ ಕುಮಾರ್ ಬೆಳ್ಳರ್ಪಾಡಿ, ಸುರೆೀಶ್ ಸೆರ್ವೆಗಾರ್ ಉಪಸ್ಥಿತರಿದ್ದರು.