Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಮಿತ್‌ ಶಾ ಕಚೇರಿ ಸಂಖ್ಯೆಯನ್ನು ನಕಲಿಸಿ...

ಅಮಿತ್‌ ಶಾ ಕಚೇರಿ ಸಂಖ್ಯೆಯನ್ನು ನಕಲಿಸಿ ನಟಿ ಜಾಕ್ವೆಲಿನ್‌ ಗೆ ಕರೆ ಮಾಡಿದ್ದ ವಂಚನೆ ಆರೋಪಿ ಸುಕೇಶ್‌ ಚಂದ್ರಶೇಖರ್

ವಾರ್ತಾಭಾರತಿವಾರ್ತಾಭಾರತಿ14 Dec 2021 1:54 PM IST
share
ಅಮಿತ್‌ ಶಾ ಕಚೇರಿ ಸಂಖ್ಯೆಯನ್ನು ನಕಲಿಸಿ ನಟಿ ಜಾಕ್ವೆಲಿನ್‌ ಗೆ ಕರೆ ಮಾಡಿದ್ದ ವಂಚನೆ ಆರೋಪಿ ಸುಕೇಶ್‌ ಚಂದ್ರಶೇಖರ್

ಹೊಸದಿಲ್ಲಿ: ವಂಚನೆ ಆರೋಪ ಎದುರಿಸುತ್ತಿರುವ ಸುಕೇಶ್ ಚಂದ್ರಶೇಖರ್ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರ ಸ್ನೇಹ ಸಂಪಾದಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕಚೇರಿ ಸಂಖ್ಯೆಯನ್ನು ನಕಲಿಸಿ ಕರೆ ಮಾಡಿದ್ದ ಹಾಗೂ ತಾನು  ತಮಿಳುನಾಡಿನ ಮಾಜಿ ಸೀಎಂ ಜಯಲಲಿತಾ ಅವರ ರಾಜಕೀಯ ಕುಟುಂಬಕ್ಕೆ ಸೇರಿದವನು ಎಂದು ಹೇಳಿಕೊಂಡಿದ್ದ ಎಂದು  ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆತನ ವಿರುದ್ಧ ಸಲ್ಲಿಸಲಾಗಿರುವ ಚಾರ್ಜ್ ಶೀಟ್‍ನಲ್ಲಿ ಜಾರಿ ನಿರ್ದೇಶನಾಲಯ ಹೇಳಿದೆ.

ಚಂದ್ರಶೇಖರ್ ತನ್ನನ್ನು ಶೇಖರ್ ರತ್ನವೇಲ್ ಎಂದು ಪರಿಚಯಿಸಿದ್ದ ಎಂದು ನಟಿ ಜಾಕ್ವೆಲಿನ್ ನೀಡಿದ ಹೇಳಿಕೆಯನ್ನು ನಿರ್ದೇಶನಾಲಯ ಈಗಾಗಲೇ ದಾಖಲಿಸಿಕೊಂಡಿದೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆಗೆ ಸಂಬಂಧಿಸಿದ ವಿಶೇಷ ನ್ಯಾಯಾಲಯದಲ್ಲಿ ಚಾರ್ಜ್‍ಶೀಟ್ ಸಲ್ಲಿಸಲಾಗಿದ್ದು ಚಂದ್ರಶೇಖರ್, ಆತನ ಪತ್ನಿ ಲೀನಾ ಮರಿಯಾ ಪೌಲ್ ಮತ್ತು ಆರು ಮಂದಿ ಇತರರನ್ನು ಅದರಲ್ಲಿ ಹೆಸರಿಸಲಾಗಿದೆ.

"ಡಿಸೆಂಬರ್(2020) ಮತ್ತು ಜನವರಿ 2021 ನಡುವೆ ಆತ  ಜಾಕ್ವೆಲಿನ್ ಅವರನ್ನು ಸಂಪರ್ಕಿಸಲು ಹಲವು ಬಾರಿ ಯತ್ನಿಸಿದ್ದ ಹಾಗೂ ಆಕೆಗೆ ಹಲವು ಕರೆಗಳು ಬರುತ್ತಿದ್ದುದರಿಂದ ಈತ ಯಾರೆಂದು ಖಚಿತವಿರಲಿಲ್ಲ. ನಂತರ ಜಾಕ್ವೆಲಿನ್ ಅವರ ಮೇಕಪ್ ಕಲಾವಿದ ಶಾನ್ ಮುತ್ತತ್ತಿಲ್ ಅವರನ್ನು  ಗೃಹ ಸಚಿವ ಅಮಿತ್ ಶಾ ಅವರ ಕಚೇರಿ ಸಂಪರ್ಕಿಸಿ ಶೇಖರ್ ಒಬ್ಬ ಪ್ರಮುಖ ವ್ಯಕ್ತಿ ಮತ್ತು ಆತ ಜಾಕ್ವೆಲಿನ್ ಜತೆ ಮಾತನಾಡಲು ಇಚ್ಛಿಸುತ್ತಾರೆ ಎಂದು ತಿಳಿಸಲಾಗಿತ್ತು ಆದರೆ ತನಿಖೆಯಿಂದ ಇದೊಂದು ಸ್ಪೂಫ್ ಕಾಲ್ ಎಂದು ತಿಳಿದು ಬಂದಿತ್ತು" ಎಂದು ಜಾರಿ ನಿರ್ದೇಶನಾಲಯ ಹೇಳಿದೆ.

ನಂತರ ಜಾಕ್ವೆಲಿನ್ ಆತನನ್ನು ಸಂಪರ್ಕಿಸಿದಾಗ ಆತ ಸನ್ ಟಿವಿ ಮಾಲೀಕ ಎಂದು ತನ್ನ ಕುಟುಂಬದೊಂದಿಗೆ ಪರಿಚಯಿಸಿದ್ದ ಹಾಗೂ ತಾನು ಜಯಲಲಿತಾ ಕುಟುಂಬಕ್ಕೆ ಸೇರಿದವನು ಹಾಗೂ ಚೆನ್ನೈನವನು, ಜಾಕ್ವೆಲಿನ್ ದಕ್ಷಿಣದ ಚಿತ್ರಗಳಲ್ಲಿ ನಟಿಸಬೇಕು ಎಂದು ಹೇಳಿದ್ದನೆಂದು ಇಡಿ ಹೇಳಿದೆ.

ನಟಿ ತನಗೆ ಆತನಿಂದ ಮೂರು ಡಿಸೈನರ್ ಬ್ಯಾಗ್, ಎರಡು ಡಿಸೈನರ್ ಜಿಮ್ ಉಡುಗೆ, ಒಂದು ಜತೆ ಲೂಯಿ ವಿಟೋನ್ ಶೂ, ಎರಡು ಜತೆ ವಜ್ರದ ಕಿವಿಯೋಲೆ ಹಾಗೂ ಮೂರು ಬ್ರೇಸ್‍ಲೆಟ್‍ಗಳು ಉಡುಗೊರೆಯಾಗಿ ದೊರಕಿತ್ತು ಎಂದು ತನ್ನ ಎರಡು ಹೇಳಿಕೆಗಳಲ್ಲಿ ನಟಿ ತಿಳಿಸಿದ್ದಾರೆ.

ಆತ ಈ ವರ್ಷದ ಆಗಸ್ಟ್ ತಿಂಗಳಿನಲ್ಲಿ ದಿಲ್ಲಿ ಪೊಲೀಸರಿಂದ ಬಂಧನಕ್ಕೊಳಗಾಗುವ ತನಕ ಆಕೆಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಎಂದೂ ಜಾರಿ ನಿರ್ದೇಶನಾಲಯ ಕಂಡುಕೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X