Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಹಾರ ವಸ್ತುವಿನ ಅಂಶಗಳು ಸಸ್ಯಜನ್ಯವೇ,...

ಆಹಾರ ವಸ್ತುವಿನ ಅಂಶಗಳು ಸಸ್ಯಜನ್ಯವೇ, ಪ್ರಾಣಿ ಜನ್ಯವೇ ಎಂಬುದನ್ನು ಬಹಿರಂಗಪಡಿಸಿ: ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ14 Dec 2021 3:08 PM IST
share
ಆಹಾರ ವಸ್ತುವಿನ ಅಂಶಗಳು ಸಸ್ಯಜನ್ಯವೇ, ಪ್ರಾಣಿ ಜನ್ಯವೇ ಎಂಬುದನ್ನು ಬಹಿರಂಗಪಡಿಸಿ: ಹೈಕೋರ್ಟ್

ಹೊಸದಿಲ್ಲಿ, ಡಿ. 14: ಎಲ್ಲಾ ಆಹಾರ ಉದ್ಯಮ ನಿರ್ವಾಹಕರು ಯಾವುದೇ ಆಹಾರ ವಸ್ತು ತಯಾರಿಸಲು ಬಳಸಲಾದ ಎಲ್ಲ ಅಂಶಗಳನ್ನು ಸಂಪೂರ್ಣವಾಗಿ ಬಹಿರಂಗಪಡಿಸಬೇಕು ಎಂದು ದಿಲ್ಲಿ ಉಚ್ಚ ನ್ಯಾಯಾಲಯ ಹೇಳಿದೆ. ತಾವು ಏನು ಸೇವಿಸುತ್ತಿದ್ದೇವೆ ಎಂದು ತಿಳಿಯಲು ಪ್ರತಿಯೊಬ್ಬರಿಗೂ ಹಕ್ಕಿದೆ ಎಂದು ದಿಲ್ಲಿ ಉಚ್ಚ ನ್ಯಾಯಾಲಯ ಪ್ರತಿಪಾದಿಸಿದೆ. 

ಆಹಾರ ವಸ್ತುಗಳ ಅಂಶಗಳ ಕೋಡ್ ಹೆಸರನ್ನು ಮಾತ್ರ ಬಹಿರಂಗಪಡಿಸಿದರೆ ಸಾಲದು. ಬದಲಾಗಿ ಆಹಾರ ವಸ್ತುಗಳಲ್ಲಿ ಅವುಗಳ ಶೇಕಡವಾರು ಪರಿಗಣಿಸದೆ ಅದು ಸಸ್ಯ ಮೂಲವೇ ಅಥವಾ ಪ್ರಾಣಿ ಮೂಲವೇ ಅಥವಾ ಪ್ರಯೋಗಶಾಲೆಯಲ್ಲಿ ಉತ್ಪಾದಿಸಲಾಗಿದೆಯೋ ಎಂಬುದನ್ನು ಬಹಿರಂಗಪಡಿಸಬೇಕು ಎಂದು ನ್ಯಾಯಾಲಯ ತಿಳಿಸಿದೆ. 

ಸಂದರ್ಭಾನುಸಾರ ಎಲ್ಲಾ ಅಂಶಗಳನ್ನು ಯಾವ ಅಳತೆಯಲ್ಲಿ ಬಳಸಲಾಗಿದ್ದರೂ ಅದು ಸಸ್ಯ ಮೂಲವೇ, ಪ್ರಾಣಿ ಮೂಲವೇ ಎಂಬುದನ್ನು ತಕ್ಕಮಟ್ಟಿಗೆ ಬಹಿರಂಗಪಡಿಸಬೇಕು ಎಂದು ನ್ಯಾಯಮೂರ್ತಿಗಳಾದ ವಿಪಿನ್ ಸಂಘಿ ಹಾಗೂ ಜಸ್ಮೀತ್ ಸಿಂಗ್ ಅವರನ್ನು ಒಳಗೊಂಡ ನ್ಯಾಯಪೀಠ ಹೇಳಿದೆ.

 ಆಹಾರ ಉದ್ಯಮ ನಿರ್ವಾಹಕರು ಅಗತ್ಯತೆಗಳನ್ನು ಅನುಸರಿಸಲು ವಿಫಲವಾದರೆ ಆಹಾರ ಸೇವಿಸುವ ಸಾರ್ವಜನಿಕರ ಮೂಲಭೂತ ಹಕ್ಕುಗಳ ಉಲ್ಲಂಘನೆಯ ಆರೋಪದಲ್ಲಿ ಕಾನೂನು ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂದು ನ್ಯಾಯಾಲಯ ತಿಳಿಸಿದೆ. ತಮ್ಮ ತಿಳಿಯುವ ಹಕ್ಕಿಗೆ ಗೌರವ ನೀಡಬೇಕು ಎಂದು ಆಗ್ರಹಿಸಿ ಸರಕಾರೇತರ ಟ್ರಸ್ಟ್ ರಾಮ್ ಗೋ ರಕ್ಷಕ ದಳ ಸಲ್ಲಿಸಿದ್ದ ಮನವಿಯ ವಿಚಾರಣೆ ನಡೆಸಿ ನ್ಯಾಯಾಲಯ ಈ ಆದೇಶ ನೀಡಿತು. ಆಹಾರ ಉತ್ಪನ್ನಗಳ ಹಾಗೂ ಪ್ರಸಾಧನ ಸಾಮಗ್ರಿಗಳ ಲೇಬಲಿಂಗ್ ಕುರಿತಂತೆ ಅಸ್ತಿತ್ವದಲ್ಲಿರುವ ಕ್ರಮಗಳನ್ನು ಕಟ್ಟುನಿಟ್ಟಿನಲ್ಲಿ ಅನುಸರಿಸುವಂತೆ ಟ್ರಸ್ಟ್ ನ್ಯಾಯಾಲಯವನ್ನು ಆಗ್ರಹಿಸಿತು. 

ಇತರ ಎಲ್ಲಾ ವಸ್ತುಗಳಿಗೆ ಕೂಡ ಈ ನಿಯಮವನ್ನು ಕಡ್ಡಾಯಗೊಳಿಸಬೇಕು ಎಂದು ಅದು ಮನವಿ ಮಾಡಿತು. ಟ್ರಸ್ಟ್ನ ಸದಸ್ಯರು ಸಿಖ್ಖ್ ಧರ್ಮದ ನಾಮಧಾರಿ ಪಂಥದ ಅನುಯಾಯಿಗಳು. ಅವರು ಕಟ್ಟುನಿಟ್ಟಾಗಿ ಸಸ್ಯಾಹಾರ ಪಾಲಿಸುತ್ತಿರುವವರು ಎಂದು ನ್ಯಾಯಾಲಯಕ್ಕೆ ತಿಳಿಸಲಾಯಿತು. ಕಟ್ಟುನಿಟ್ಟಿನ ಸಸ್ಯಾಹಾರ ಪ್ರತಿಪಾದಿಸುವವರು. ಸಸ್ಯಹಾರವನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿರುವವರಿಗೆ ಮಾರುಕಟ್ಟೆಯಲ್ಲಿ ಬಳಕೆಗೆ ಯೋಗ್ಯವಾದ ಯಾವ ಉತ್ಪನ್ನಗಳು ಲಭ್ಯವಿವೆ ಎಂದು ತಿಳಿದಿಲ್ಲ. ಯಾಕೆಂದರೆ, ತಿನ್ನಬಹುದಾದ ಉತ್ಪನ್ನಗಳು ಸೇರಿದಂತೆ ಬಹಳಷ್ಟು ಉತ್ಪನ್ನಗಳು ಒಂದೋ ಪ್ರಾಣಿ ಮೂಲದ ಅಂಶವನ್ನು ಒಳಗೊಂಡಿರುತ್ತದೆ ಅಥವಾ ಅದನ್ನು ಸ್ಪಷ್ಟವಾಗಿ ಸಸ್ಯಾಹಾರ ಎಂದು ಪ್ರತಿಪಾದಿಸಲು ಸಾಧ್ಯವಾಗದ ರೀತಿಯಲ್ಲಿ ಸಂಸ್ಕರಣೆಗೆ ಒಳಗಾಗಿರುತ್ತದೆ ಎಂದು ದೂರುದಾರರು ನ್ಯಾಯಾಲಯಕ್ಕೆ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X