Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಇಂಡಿಯಾ ಫ್ರೆಟರ್ನಿಟಿ ಫೋರಂ-ರಿಯಾದ್...

ಇಂಡಿಯಾ ಫ್ರೆಟರ್ನಿಟಿ ಫೋರಂ-ರಿಯಾದ್ ವತಿಯಿಂದ ಕ್ರೀಡಾಕೂಟ; ಚಾಂಪಿಯನ್ ಪಟ್ಟ ಮುಡಿಗೇರಿಸಿದ ಕರ್ನಾಟಕ ತಂಡ

ವಾರ್ತಾಭಾರತಿವಾರ್ತಾಭಾರತಿ14 Dec 2021 7:45 PM IST
share
ಇಂಡಿಯಾ ಫ್ರೆಟರ್ನಿಟಿ ಫೋರಂ-ರಿಯಾದ್ ವತಿಯಿಂದ ಕ್ರೀಡಾಕೂಟ; ಚಾಂಪಿಯನ್ ಪಟ್ಟ ಮುಡಿಗೇರಿಸಿದ ಕರ್ನಾಟಕ ತಂಡ

ರಿಯಾದ್: ಇಂಡಿಯಾ ಫ್ರೆಟರ್ನಿಟಿ ಫೋರಂ ರಿಯಾದ್ ರೀಜನಲ್ ಸಮಿತಿ ವತಿಯಿಂದ ಬೃಹತ್ ಕ್ರೀಡಾಕೂಟ "Winter Sports meet 2021" ಇತ್ತೀಚೆಗೆ ರಿಯಾದ್ ನ ಸುಲೈ ನಲ್ಲಿ ನಡೆಯಿತು.

ಇಂಡಿಯಾ ಫ್ರೆಟರ್ನಿಟಿ ಫೋರಂ ರಿಯಾದ್ ರೀಜನಲ್ ಅಧ್ಯಕ್ಷರಾದ ಬಶೀರ್ ಇಂಗಾಪುಝ ಅವರು ಸಮವಸ್ತ್ರವನ್ನು ಆಯಾ ರಾಜ್ಯ ನಾಯಕರಿಗೆ ಹಸ್ತಾಂತರಿಸುವ ಮೂಲಕ ಕಾರ್ಯಕ್ರಮಕ್ಕೆ ಸಾಂಕೇತಿಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಸ್ತುತ ಸಮಯದಲ್ಲಿ ಆರೋಗ್ಯದ ಮಹತ್ವವನ್ನು ಒತ್ತಿ ಹೇಳಿದರು. ವಿಶೇಷವಾಗಿ ತಮ್ಮ ಕುಟುಂಬ ಮತ್ತು ಮನೆಯಿಂದ ದೂರವಿರುವ ಅನಿವಾಸಿಗರು ಅರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಲು ಮನವಿ ಮಾಡಿದರು.

ಕ್ರೀಡಾಕೂಟದಲ್ಲಿ ಭಾಗವಹಿಸಿದ ಕೇರಳ, ಕರ್ನಾಟಕ, ತಮಿಳುನಾಡು ಮತ್ತು ಉತ್ತರ ರಾಜ್ಯಗಳ ರಾಜ್ಯಾಧ್ಯಕ್ಷರು ತಮ್ಮ ರಾಜ್ಯದ ಕ್ರೀಡಾ ನಾಯಕರಿಗೆ ಕ್ರೀಡಾ ಧ್ವಜಗಳನ್ನು ಹಸ್ತಾಂತರಿಸುವುದರ ಮೂಲಕ ವರ್ಣರಂಜಿತ ಪಥ ಸಂಚಲನಕ್ಕೆ ಚಾಲನೆ ನೀಡಿದರು.

ಕಬಡ್ಡಿ, ಹಗ್ಗಜಗ್ಗಾಟ, ಕ್ರಿಕೆಟ್, ವಾಲಿಬಾಲ್, ಫುಟ್‌ಬಾಲ್, ಶಾಟ್‌ಪುಟ್, ಉರಿಯಡಿ, ರಿಲೇ ರೇಸ್ ಸೇರಿದಂತೆ ಹಲವಾರು ಆಕರ್ಷಕ ಕ್ರೀಡೆಗಳನ್ನು ಹಮ್ಮಿಕೊಳ್ಳಲಾಯಿತು.

ಫುಟ್ಬಾಲ್ ಫೈನಲ್ ಪಂದ್ಯಾಟದಲ್ಲಿ ಕರ್ನಾಟಕ ತಂಡದ ವಿರುದ್ಧ ಕೇರಳ ಜಯಗಳಿಸಿದರೆ, ಸಾಕಷ್ಟು ಕುತೂಹಲ ಕೆರಳಿಸಿದ ವಾಲಿಬಾಲ್ ಫೈನಲ್ ಪಂದ್ಯಾಟದಲ್ಲಿ ತಮಿಳುನಾಡು ತಂಡವನ್ನು ಸೋಲಿಸುವ ಮೂಲಕ ಕರ್ನಾಟಕ ತಂಡವು ವಿಜಯಶಾಲಿಯಾಯಿತು.

ಕ್ರಿಕೆಟ್ ಫೈನಲ್ ಸೆಣಸಾಟದಲ್ಲಿ ಕೇರಳ ತಂಡವನ್ನೂ, ಹಗ್ಗಜಗ್ಗಾಟ ದಲ್ಲಿ ತಮಿಳುನಾಡು, ಕಬಡ್ಡಿಯಲ್ಲಿ ಉತ್ತರ ರಾಜ್ಯ ತಂಡವನ್ನು ಪರಾಜಯಗೊಳಿಸಿ ಅತ್ಯುತ್ತಮ ಪ್ರದರ್ಶನ ತೋರಿಸಿದ ಕರ್ನಾಟಕ ತಂಡವು "Winter Sports meet 2021" ನ ಚಾಂಪಿಯನ್ ಆಗಿ ಹೊರಹೊಮ್ಮಿತು.

ಐವತ್ತು ವರ್ಷದ ಮೇಲ್ಪಟ್ಟರವರಿಗೆ, ಮಹಿಳೆಯರಿಗೆ ಮತ್ತು ಚಿಣ್ಣರಿಗಾಗಿ ವಿವಿಧ ಸ್ವಾರಸ್ಯಕರ ಕ್ರೀಡೆಗಳನ್ನೂ ಆಯೋಜಿಸಲಾಗಿತ್ತು.

ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು.

ವೇದಿಕೆಯಲ್ಲಿ ಕ್ರೀಡಾಕೂಟದ ಸಂಯೋಜಕರಾದ ಜುನೇದ್ ಅನ್ಸಾರಿ, ಉದ್ಯಮಿಯಾದ ಜವಾಹರ್ ನಿಜಾಮ್, ಇಂಡಿಯಾ ಫ್ರೆಟರ್ನಿಟಿ ಫೋರಂ-ರಿಯಾದ್ ರೀಜನಲ್ ಸಮಿತಿಯ ಅಧ್ಯಕ್ಷರಾದ ಬಶೀರ್ ಇಂಗಾಪುಝ, ಉತ್ತರ ರಾಜ್ಯಗಳ ಅಧ್ಯಕ್ಷರಾದ ಮುಹಮ್ಮದ್ ಜಾವಿದ್, ತಮಿಳುನಾಡು ರಾಜ್ಯಾಧ್ಯಕ್ಷರಾದ ನಿಸಾರ್ ಅಹಮದ್, ಕರ್ನಾಟಕ ರಾಜ್ಯದ ಅಧ್ಯಕ್ಷರಾದ ತಾಜುದ್ದೀನ್, ಕೇರಳ ರಾಜ್ಯದ ಅಧ್ಯಕ್ಷರಾದ ಅನ್ಸಾರ್, ಇಂಡಿಯನ್ ಸೋಶಿಯಲ್ ಫೋರಂ ಸೆಂಟ್ರಲ್ ಕಮಿಟಿ ರಿಯಾದ್ ನ ಅಧ್ಯಕ್ಷರಾದ ಬಶೀರ್ ಕಾರಂತೂರು, ಇಂಡಿಯಾ ಫ್ರೆಟರ್ನಿಟಿ ಫೋರಂ-ರಿಯಾದ್ ರೀಜನಲ್ ಸಮಿತಿಯ ಸದಸ್ಯರಾದ ಹಾರಿಸ್ ಮಂಗಳೂರು ಮತ್ತು ಹಲವು ಗಣ್ಯರು ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇಂಡಿಯಾ ಫ್ರೆಟರ್ನಿಟಿ ಫೋರಂ ರಿಯಾದ್ ನ ಸಾರ್ವಜನಿಕ ಸಂಪರ್ಕ ವಿಭಾಗದ ಮುಖ್ಯಸ್ಥರಾಗಿರುವ ಹಾರಿಸ್ ವಾವಡ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X