Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ತಾಲಿಬಾನ್ ಆಡಳಿತಕ್ಕೇರಿದ ಬಳಿಕ ಅಫ್ಘಾನ್...

ತಾಲಿಬಾನ್ ಆಡಳಿತಕ್ಕೇರಿದ ಬಳಿಕ ಅಫ್ಘಾನ್ ನಲ್ಲಿ 100ಕ್ಕೂ ಅಧಿಕ ಕಾನೂನುಬಾಹಿರ ಹತ್ಯೆ: ವಿಶ್ವಸಂಸ್ಥೆ

ಹತ್ಯೆಯಾದವರಲ್ಲಿ ಹೆಚ್ಚಿನವರು ಅಫ್ಘಾನ್ ಪಡೆಗಳ ಮಾಜಿ ಯೋಧರು, ಸಿಬ್ಬಂದಿ

ವಾರ್ತಾಭಾರತಿವಾರ್ತಾಭಾರತಿ14 Dec 2021 9:25 PM IST
share
ತಾಲಿಬಾನ್ ಆಡಳಿತಕ್ಕೇರಿದ ಬಳಿಕ ಅಫ್ಘಾನ್ ನಲ್ಲಿ 100ಕ್ಕೂ ಅಧಿಕ ಕಾನೂನುಬಾಹಿರ ಹತ್ಯೆ: ವಿಶ್ವಸಂಸ್ಥೆ

ಜಿನೇವಾ,ಡಿ.2: ಈ ವರ್ಷದ ಆಗಸ್ಟ್‌ನಲ್ಲಿ ತಾಲಿಬಾನ್ ಅಧಿಕಾರ ಹಿಡಿದ ಬಳಿಕ ಅಫ್ಘಾನಿಸ್ತಾನದಲ್ಲಿ  100ಕ್ಕೂ ಅಧಿಕ ಕಾನೂನುಬಾಹಿರ ಹತ್ಯೆಗಳು ನಡೆದಿರುವ ಬಗ್ಗೆ ವಿಶ್ವಸನೀಯವಾದ ಮಾಹಿತಿ ತನಗೆ ಲಭ್ಯವಾಗಿರುವುದಾಗಿ ವಿಶ್ವಸಂಸ್ಥೆ ಮಂಗಳವಾರ ತಿಳಿಸಿದೆ. ಇವುಗಳಲ್ಲಿ ಬಹುತೇಕ ಹತ್ಯೆಗಳನ್ನು ತಾಲಿಬಾನ್ ನಡೆಸಿದೆಯೆಂದು ವಿಶ್ವಸಂಸ್ಥೆ ಆರೋಪಿಸಿದೆ.

ಆಗಸ್ಟ್ 15ರ ಬಳಿಕ ತಾಲಿಬಾನ್ ಆಡಳಿತಗಾರರು ಅಫ್ಘಾನ್ ಸೈನಿಕರು ಹಾಗೂ ಹಿಂದಿನ ಆಡಳಿತದಲ್ಲಿ ಸೇವೆ ಸಲ್ಲಿಸಿದವರಿಗೆ ಸಾರ್ವತ್ರಿಕ ಕ್ಷಮಾದಾನವನ್ನು ಘೋಷಿಸಿರುವ ಹೊರತಾಗಿಯೂ ಇಂತಹ ಹತ್ಯೆಗಳು ನಡೆಯುತ್ತಿರುವ ಬಗ್ಗೆ ನಿರಂತರವಾಗಿ ಬರುತ್ತಿರುವ ವರದಿಗಳಿಂದ ತಾನು ಕಳವಳಗೊಂಡಿರುವುದಾಗಿ ವಿಶ್ವಸಂಸ್ಥೆಯ ಮಾನವಹಕ್ಕುಗಳ ಉಪವರಿಷ್ಠೆ ನದಾ ಅಲ್ ನಶಾಫ್ ತಿಳಿಸಿದ್ದಾರೆ.
 
"ಈ ವರ್ಷದ ಆಗಸ್ಟ್ ಹಾಗೂ ನವೆಂಬರ್ ನಡುವೆ, ಅಫ್ಘಾನಿಸ್ತಾನದ ಮಾಜಿ ರಾಷ್ಟ್ರೀಯ ಭದ್ರತಾ ಪಡೆಗಳ ಯೋಧರು ಸೇರಿದಂತೆ ಮಾಜಿ ಸರಕಾರದ ಜೊತೆ ನಂಟು ಹೊಂದಿರುವ 100ಕ್ಕೂ ಅಧಿಕ ಮಂದಿಯ ಹತ್ಯೆಗಳು ನಡೆದಿರುವ ಬಗ್ಗೆ ವಿಶ್ವಸನೀಯ ದೂರುಗಳನ್ನು ವಿಶ್ವಸಂಸ್ಥೆ ಸ್ವೀಕರಿಸಿದೆ" ಎಂದು ನದಾ ಅಲ್-ನಶೀಫ್ ಅವರು ವಿಶ್ವಸಂಸ್ಥೆಯ ಮಾನವಹಕ್ಕುಗಳ ಮಂಡಳಿಗೆ ತಿಳಿಸಿದರು.

 ಈ ರೀತಿಯ ಹತ್ಯೆಗಳಲ್ಲಿ ಕನಿಷ್ಠ 72ನ್ನು ತಾಲಿಬಾನ್ ನಡೆಸಿದೆಯೆಂದು ನದಾ ಆರೋಪಿಸಿದ್ದಾರೆ. "ಹಲವಾರು ಪ್ರಕರಣಗಳಲ್ಲಿ ಶವಗಳನ್ನು ಸಾರ್ವಜನಿಕವಾಗಿ ಪ್ರದರ್ಶಿಸಿಸಲಾಗಿದೆ. ಇದರಿಂದಾಗಿ ಗಣನೀಯ ಪ್ರಮಾಣದ ಜನರಲ್ಲಿ ಭೀತಿಯು ಉಲ್ಬಣಗೊಂಡಿದೆ" ಎಂದು ಆಕೆ ತಿಳಿಸಿದರು.
 
ಅಫ್ಘಾನಿಸ್ತಾನದಲ್ಲಿ ಇತ್ತೀಚೆಗೆ ನಡೆದಿದೆಯೆನ್ನಲಾದ 47 ಕಾನೂನುಬಾಹಿರ ಹತ್ಯೆಗಳನ್ನು ದಾಖಲಿಸಿರುವ ಮಾನವಹಕ್ಕುಗಳ ವರದಿ ಪ್ರಕಟವಾದ ಬಳಿಕ ಅಮೆರಿಕ ಹಾಗೂ ಇತರ ದೇಶಗಳು ತಾಲಿಬಾನ್ ವಿರುದ್ಧ ತೀವ್ರ ಟೀಕಾಪ್ರಹಾರ ನಡೆಸಿದ್ದವು.
   
ಆಗಸ್ಟ್ ಮಧ್ಯದಿಂದ ಹಿಡಿದು ಅಕ್ಟೋಬರ್ ತಿಂಗಳವರೆಗಿನ ಅವಧಿಯಲ್ಲಿ ತಾಲಿಬಾನ್ ಪಡೆಗಳಿಗೆ ಶರಣಾಗತರಾದ ಅಥವಾ ಬಂಧಿತರಾದ ಅಫ್ಘಾನಿಸ್ತಾನದ ರಾಷ್ಟ್ರೀಯ ಭದ್ರತಾ ಪಡೆಗಳ ಮಾಜಿ ಸದಸ್ಯರು, ಇತರ ಸೇನಾ ಸಿಬ್ಬಂದಿ, ಪೊಲೀಸರು ಹಾಗೂ ಗುಪ್ತಚರ ಏಜೆಂಟರು ಹತ್ಯೆಯಾದವರಾಗಿದ್ದಾರೆಂದು ವರದಿ ತಿಳಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X