Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಪ್ಪಿನಂಗಡಿ: ಪ್ರತಿಭಟನೆಯ ವೇಳೆ...

ಉಪ್ಪಿನಂಗಡಿ: ಪ್ರತಿಭಟನೆಯ ವೇಳೆ ಪೊಲೀಸರಿಂದ ಲಾಠಿಚಾರ್ಜ್; ಹಲವು ಮಂದಿಗೆ ಗಂಭೀರ ಗಾಯ

ವಾರ್ತಾಭಾರತಿವಾರ್ತಾಭಾರತಿ14 Dec 2021 10:48 PM IST
share
ಉಪ್ಪಿನಂಗಡಿ: ಪ್ರತಿಭಟನೆಯ ವೇಳೆ ಪೊಲೀಸರಿಂದ ಲಾಠಿಚಾರ್ಜ್; ಹಲವು ಮಂದಿಗೆ ಗಂಭೀರ ಗಾಯ

ಉಪ್ಪಿನಂಗಡಿ, ಡಿ.14: ಇಲ್ಲಿನ ಹಳೆಗೇಟ್‌ನ ಸುಬ್ರಹ್ಮಣ್ಯ ಕ್ರಾಸ್ ಬಳಿ ಇತ್ತೀಚೆಗೆ ನಡೆದ ತಲವಾರು ದಾಳಿ ಪ್ರಕರಣಕ್ಕೆ ಸಂಬಂಧಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಮೂವರು ಮುಖಂಡರನ್ನು ತನಿಖೆಗೆಂದು ಕರೆದು ಬಳಿಕ ಬಂಧಿಸಿದ್ದಾರೆಂದು ಆರೋಪಿಸಿ ಸಂಘಟನೆಯ ಕಾರ್ಯಕರ್ತರು ಮಂಗಳವಾರ ಪೊಲೀಸ್ ಠಾಣೆಯ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದರಿಂದ 10ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆ ವಿವರ: ಹಳೆಗೇಟ್ ತಲವಾರು ದಾಳಿ ಪ್ರಕರಣಕ್ಕೆ ಸಂಬಂಧಿಸಿ ಪಿಎಫ್‌ಐ ಉಪ್ಪಿನಂಗಡಿ ವಲಯ ಸಮಿತಿಯ ಅಧ್ಯಕ್ಷ ಅಬ್ದುಲ್ ಹಮೀದ್ ಮೆಜೆಸ್ಟಿಕ್, ಎಸ್‌ಡಿಪಿಐ ನೆಕ್ಕಿಲಾಡಿ ಗ್ರಾಮ ಸಮಿತಿ ಅಧ್ಯಕ್ಷ ಝಕರಿಯ ಕೊಡಿಪ್ಪಾಡಿ ಹಾಗೂ ಉಪ್ಪಿನಂಗಡಿ ಬ್ಲಾಕ್ ಸಮಿತಿ ಅಧ್ಯಕ್ಷ ಮುಸ್ತಫ ಲತೀಫಿ ಎಂಬವರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದಿದ್ದರು. ಈ ಸುದ್ದಿ ತಿಳಿದು ಪಿಎಫ್‌ಐ ಹಾಗೂ ಎಸ್‌ಡಿಪಿಐ ಕಾರ್ಯಕರ್ತರು ಬೆಳಗ್ಗೆಯೇ ಪೊಲೀಸ್ ಠಾಣೆಯ ಮುಂದೆ ಜಮಾಯಿಸಿ ಪೊಲೀಸ್ ವಶದಲ್ಲಿದ್ದವರನ್ನು ಬಿಡುಗಡೆಗೊಳಿಸುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದರು. ಸಂಜೆಯವರೆಗೂ ಪ್ರತಿಭಟನೆ ಮುಂದುವರಿದಾಗ ಡಿವೈಎಸ್ಪಿ ಡಾ. ಗಾನಾ ಕುಮಾರಿ ಸ್ಥಳಕ್ಕಾಗಮಿಸಿ ಪ್ರತಿಭಟನಾನಿರತ ನಾಲ್ಕೈದು ಮುಖಂಡರನ್ನು ಮಾತುಕತೆಗೆ ಆಹ್ವಾನಿಸಿದರಲ್ಲದೆ ವಶಕ್ಕೆ ಪಡೆದವರನ್ನು ಬಿಡುಗಡೆಗೊಳಿಸುವ ಭರವಸೆ ನೀಡಿದರು. ಅದರಂತೆ ಪ್ರತಿಟನಕಾರರು ಸ್ಥಳದಿಂದ ನಿರ್ಗಮಿಸಿದರು ಎಂದು ತಿಳಿದು ಬಂದಿದೆ.

ಮುಂದುವರಿದ ಪ್ರತಿಭಟನೆ, ಲಾಠಿಚಾಜ್:
ಸಂಜೆ ವೇಳೆ ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದ ಮೂವರು ಪಿಎಫ್‌ಐ ಮುಖಂಡರ ಪೈಕಿ ಓರ್ವನನ್ನು ಮಾತ್ರ ಬಿಡುಗಡೆಗೊಳಿಸಿದರು. ಇದು ತಿಳಿಯುತ್ತಿದ್ದಂತೆ ಮತ್ತೆ ಠಾಣೆಯೆದುರು ಜಮಾಯಿಸಿದ ಪಿಎಫ್‌ಐ ಕಾರ್ಯಕರ್ತರು ಪೊಲೀಸ್ ವಶದಲ್ಲಿರುವ ಉಳಿದಿಬ್ಬರನ್ನೂ ಬಿಡುಗಡೆಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ರಾತ್ರಿಯೂ ಪ್ರತಿಭಟನೆ ಮುಂದುವರಿದಿತ್ತು. 9 ಗಂಟೆ ಸುಮಾರಿಗೆ ಪ್ರತಿಭಟನಾಕಾರರರನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದರು. ಇದರಿಂದ 10ಕ್ಕೂ ಅಧಿಕ ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಮೂವರು ಪೊಲೀಸರೂ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸಂಜೆ ವೇಳೆ ಸ್ಥಳಕ್ಕಾಗಮಿಸಿದ್ದ ಪುತ್ತೂರು ತಹಶೀಲ್ದಾರ್ ಟಿ.ರಮೇಶ್ ಬಾಬು 144 ಸೆಕ್ಷನ್ ಜಾರಿಗೊಳಿಸಿದ್ದರು. ಈ ಹಿನ್ನೆಲೆಯಲ್ಲಿ ಆ ಬಳಿಕವೂ ಪ್ರತಿಭಟನೆ ಮುಂದುವರಿಸಿದ್ದರಿಂದ ಪೊಲೀಸರು ಲಾಠಿಚಾರ್ಜ್ ನಡೆಸಿ ಗುಂಪನ್ನು ಚದುರಿಸಿದ್ದಾರೆ ಎಂದು ತಿಳಿದು ಬಂದಿದೆ.

ಸದ್ಯ ಉಪ್ಪಿನಂಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ರಾಜ್ಯ ಹಾಗೂ ದ.ಕ. ಜಿಲ್ಲಾ ಮೀಸಲು ಪೊಲೀಸ್ ಪಡೆಯ ತುಕಡಿಗಳನ್ನು ನಿಯೋಜಿಸಲಾಗಿದೆ.

ಪಿಎಫ್ಐ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ಖಂಡನೆ:

"ಉಪ್ಪಿನಂಗಡಿ ಪೊಲೀಸರು ರಾತೋರಾತ್ರಿ ಅಮಾಯಕರನ್ನು ಬಂಧಿಸಿದ್ದಲ್ಲದೇ, ಬಂಧಿತರ ಬಿಡುಗಡೆಗಾಗಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರ‌ ಮೇಲೆ ಬರ್ಬರವಾಗಿ ಲಾಠಿಚಾರ್ಜ್ ನಡೆಸಿದ್ದಾರೆ. ಪ್ರತಿಭಟನಕಾರರ ಮೇಲೆ ದಬ್ಬಾಳಿಕೆ ನಡೆಸಿದ ಪೊಲೀಸರ ಕ್ರೌರ್ಯವನ್ನು ನಾಗರಿಕ ಸಮುದಾಯ ಒಂದಾಗಿ ಖಂಡಿಸಬೇಕು. ಇದು ನ್ಯಾಯಕ್ಕಾಗಿ ಎದ್ದು ನಿಲ್ಲಬೇಕಾದ ಸಮಯ" ಎಂದು ಯಾಸಿರ್ ಹಸನ್ ಟ್ವೀಟ್ ಮಾಡಿದ್ದಾರೆ.

"ಕೆಲವು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಮಾಯಕರ ಮೇಲೆ ಹಲ್ಲೆ ನಡೆಯುತ್ತಿದ್ದು, ಆ ಮೂಲಕ ಅಶಾಂತಿಯ ವಾತಾವರಣ ಸೃಷ್ಟಿಸಲು ಪ್ರಯತ್ನಿಸುತ್ತಿರುವುದು ನಿಜಕ್ಕೂ ಆತಂಕಕಾರಿ ಮಾತ್ರವಲ್ಲದೆ ಇಂತಹ ಬೆಳವಣಿಗೆ ಖಂಡನೀಯವಾಗಿದೆ"

- ಅಮೀನ್ ಅಹ್ಸನ್, ದ.ಕ.ಜಿಲ್ಲಾ ಸಂಚಾಲಕ, ಜಮಾಅತೆ ಇಸ್ಲಾಮೀ ಹಿಂದ್

ಉಪ್ಪಿನಂಗಡಿ ಪೊಲೀಸರು ರಾತೋರಾತ್ರಿ ಅಮಾಯಕರನ್ನು ಬಂಧಿಸಿದ್ದಲ್ಲದೇ, ಬಂಧಿತರ ಬಿಡುಗಡೆಗಾಗಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರ‌ ಮೇಲೆ ಬರ್ಬರವಾಗಿ ಲಾಠಿಚಾರ್ಜ್ ನಡೆಸಿದ್ದಾರೆ. ಪ್ರತಿಭಟನಕಾರರ ಮೇಲೆ ದಬ್ಬಾಳಿಕೆ ನಡೆಸಿದ ಪೊಲೀಸರ ಕ್ರೌರ್ಯವನ್ನು ನಾಗರಿಕ ಸಮುದಾಯ ಒಂದಾಗಿ ಖಂಡಿಸಬೇಕು. ಇದು ನ್ಯಾಯಕ್ಕಾಗಿ ಎದ್ದು ನಿಲ್ಲಬೇಕಾದ ಸಮಯ. pic.twitter.com/u6X7MOFwXj

— Yasir Hasan (State President, PFI Kar) (@yhpfi) December 14, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X