Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿರಮ್ ಇನ್ಸ್ಟಿಟ್ಯೂಟ್‌ ನಿಂದ 6...

ಸಿರಮ್ ಇನ್ಸ್ಟಿಟ್ಯೂಟ್‌ ನಿಂದ 6 ತಿಂಗಳಲ್ಲಿ ಮಕ್ಕಳಿಗೆ ಕೋವಿಡ್ ಲಸಿಕೆ: ಪೂನಾವಾಲ

ವಾರ್ತಾಭಾರತಿವಾರ್ತಾಭಾರತಿ14 Dec 2021 11:22 PM IST
share
ಸಿರಮ್ ಇನ್ಸ್ಟಿಟ್ಯೂಟ್‌ ನಿಂದ 6 ತಿಂಗಳಲ್ಲಿ ಮಕ್ಕಳಿಗೆ ಕೋವಿಡ್ ಲಸಿಕೆ: ಪೂನಾವಾಲ

ಹೊಸದಿಲ್ಲಿ, ಡಿ. 14: ಮುಂದಿನ 6 ತಿಂಗಳಲ್ಲಿ ಸಿರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್ಐಐ)   ಮಕ್ಕಳಿಗೆ ಕೋವಿಡ್ ಲಸಿಕೆ ಬಿಡುಗಡೆ ಮಾಡಲಿದೆ ಎಂದು ಕಂಪೆನಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅದಾರ್ ಪೂನಾವಾಲ ಮಂಗಳವಾರ ಹೇಳಿದ್ದಾರೆ. ‌

ಕೈಗಾರಿಕಾ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಪೂನಾವಾಲ, ‘‘ಲಸಿಕೆ ಕೊವೋವ್ಯಾಕ್ಸ್ ಪರೀಕ್ಷೆಯ ಹಂತದಲ್ಲಿದೆ. ಈ ಲಸಿಕೆ ಮೂರು ವರ್ಷಗಳ ವರೆಗೆ ಮಕ್ಕಳಿಗೆ ಎಲ್ಲಾ ರೀತಿಯಿಂದಲೂ ರಕ್ಷಣೆ ನೀಡಲಿದೆ. ಪ್ರಸಕ್ತ ಇರುವ ಕೋವಿಶೀಲ್ಡ್ ಹಾಗೂ ಇತರ ಕೋವಿಡ್ ಲಸಿಕೆಗಳು 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಅನುಮೋದಿಸಲಾಗಿದೆ’’ ಎಂದಿದ್ದಾರೆ. ‘‘ನಾವು ಮಕ್ಕಳಲ್ಲಿ ತೀವ್ರವಾದ ಕಾಯಿಲೆಯನ್ನು ನೋಡಿಲ್ಲ. ಅದೃಷ್ಟವಶಾತ್ ಮಕ್ಕಳ ವಿಷಯದಲ್ಲಿ ಯಾವುದೇ ರೀತಿಯ ಆತಂಕ ಇಲ್ಲ. ಆದರೂ 6 ತಿಂಗಳಲ್ಲಿ ಮಕ್ಕಳಿಗೆ ಲಸಿಕೆ ಬಿಡುಗಡೆ ಮಾಡಲಿದ್ದೇವೆ. ಇದು ಮಕ್ಕಳಿಗೆ 3 ವರ್ಷಗಳ ವರೆಗೆ ರಕ್ಷಣೆ ನೀಡುವ ನಿರೀಕ್ಷೆ ಇದೆ’’ ಎಂದು ಪೂನಾವಾಲ ಹೇಳಿದ್ದಾರೆ. 

ಪರವಾನಿಗೆ ಪಡೆದುಕೊಂಡ ಹಾಗೂ ಲಸಿಕೆಗಳು ಶೀಘ್ರದಲ್ಲಿ ಲಭ್ಯವಾಗುವ ಎರಡು ಕಂಪೆನಿಗಳು ಈಗಾಗಲೇ ಭಾರತದಲ್ಲಿ ಇವೆ ಎಂದು ಅವರು ಉಲ್ಲೇಖಿಸಿದರು. ‘‘ಹೌದು, ಅನ್ನಿಸುತ್ತದೆ. ನೀವು ನಿಮ್ಮ ಮಕ್ಕಳನ್ನು ಕರೆದುಕೊಂಡು ಹೋಗಿ ಲಸಿಕೆ ಹಾಕಬೇಕು. ಇದರಿಂದ ಯಾವುದೇ ಅಪಾಯ ಇಲ್ಲ. ಈ ಲಸಿಕೆಗಳು ಸುರಕ್ಷಿತ, ಪರಿಣಾಮಕಾರಿ ಎಂದು ಸಾಬೀತಾಗಿದೆ. ಯಾವುದೇ ರೀತಿಯಿಂದಲೂ ನಿಮ್ಮ ಮಕ್ಕಳಿಗೆ ಲಸಿಕೆ ನೀಡಬೇಕು ಎಂದು ನೀವು ಬಯಸಿದರೆ, ಈ ಬಗ್ಗೆ ಸರಕಾರದ ಘೋಷಣೆಗೆ ಕಾಯಿರಿ. ಅನಂತರ ಮುಂದುವರಿಯಿರಿ’’ ಎಂದು ಅವರು ಹೇಳಿದ್ದಾರೆ. 

‘‘ಮಕ್ಕಳಿಗೆ ನಮ್ಮ ಕೊವೋವ್ಯಾಕ್ಸ್ ಲಸಿಕೆ ಆರು ತಿಂಗಳಲ್ಲಿ ಬಿಡುಗಡೆಯಾಗಲಿದೆ. ಕೊವೋವ್ಯಾಕ್ಸ್ ಪರೀಕ್ಷೆಯ ಹಂತದಲ್ಲಿದೆ. ಲಸಿಕೆ ಕಾರ್ಯ ನಿರ್ವಹಿಸಲಿದೆ ಹಾಗೂ ಸೋಂಕು ರೋಗಗಳ ವಿರುದ್ಧ ಮಕ್ಕಳಿಗೆ ರಕ್ಷಣೆ ನೀಡಲಿದೆ ಎಂಬುದನ್ನು ಸಾಕಷ್ಟು ದತ್ತಾಂಶ ತಿಳಿಸಿದೆ’’ ಎಂದು ಪೂನಾವಾಲ ಅವರು ಹೇಳಿದ್ದಾರೆ. ‘‘ಒಮೈಕ್ರಾನ್ನಿಂದ ಏನಾಗುತ್ತದೆ ಎಂದು ನನಗೆ ತಿಳಿದಿಲ್ಲ. ಆದರೆ, ಇದುವರೆಗೆ ಈ (ಕೋವಿಡ್) ವೈರಸ್ ಮಕ್ಕಳ ಮೇಲೆ ಕೆಟ್ಟ ಪರಿಣಾಮ ಉಂಟು ಮಾಡಿಲ್ಲ. ಮಕ್ಕಳ ದೇಹ, ಜೀವಕೋಶ ಹಾಗೂ ಅವರ ಶ್ವಾಸಕೋಶ ಉತ್ತಮವಾಗಿ ಚೇತರಿಸಿಕೊಳ್ಳುತ್ತದೆ ಎಂಬುದು ನನ್ನ ಭಾವನೆ’’ ಎಂದು ಪೂನಾವಲ್ಲಾ ಹೇಳಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X