Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶೌರ್ಯ, ಶೌರ್ಯೇತರ ಪ್ರಶಸ್ತಿ ಪಡೆದ ಯೋಧರ...

ಶೌರ್ಯ, ಶೌರ್ಯೇತರ ಪ್ರಶಸ್ತಿ ಪಡೆದ ಯೋಧರ ಅನುದಾನ ಹೆಚ್ಚಳ: ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ16 Dec 2021 4:06 PM IST
share
ಶೌರ್ಯ, ಶೌರ್ಯೇತರ ಪ್ರಶಸ್ತಿ ಪಡೆದ ಯೋಧರ ಅನುದಾನ ಹೆಚ್ಚಳ: ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ

ಬೆಳಗಾವಿ, ಡಿಸೆಂಬರ್ 16: ಶೌರ್ಯ ಹಾಗೂ ಶೌರ್ಯೇತರ  ಪ್ರಶಸ್ತಿ ಪಡೆದ ಯೋಧರಿಗೆ ರಾಜ್ಯ ಸರ್ಕಾರ ನೀಡುವ ಅನುದಾನ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. 

ಅವರು ಇಂದು ಬೆಳಗಾವಿಯಲ್ಲಿ ವಿಜಯ್ ದಿವಸ್ ಅಂಗವಾಗಿ ಮುಖ್ಯಮಂತ್ರಿ  ಮರಾಠಾ ಲೈಟ್ ಇನ್ಫೆಂಟ್ರಿ ರೆಜಿಮೆಂಟ್ ನ ತರಬೇತಿ ಶಾಲೆಯ ಯುದ್ಧ ಸ್ಮಾರಕಕ್ಕೆ ಗೌರವ ಸಲ್ಲಿಸಿದ ನಂತರ ಮಾತನಾಡುತ್ತಿದ್ದರು. 

ಪರಮವೀರಚಕ್ರ ಪಡೆದವರಿಗೆ  25 ಲಕ್ಷದಿಂದ  1.5 ಕೋಟಿ ರೂ.ಗಳಿಗೆ, ಮಹಾವೀರಚಕ್ರ ವಿಜೇತರಿಗೆ 12 ಲಕ್ಷಕ್ಕೆ ಬದಲಾಗಿ 1.00 ಕೋಟಿ ರೂ.ಗಳು, ಅಶೋಕ ಚಕ್ರ ಪಡೆ ದವರಿಗೆ 25 ಲಕ್ಷ.ರೂಗಳಿಗೆ ಬದಲಾಗಿ 1.5 ಕೋಟಿ ರೂ.ಗಳು, ಕೀರ್ತಿ ಚಕ್ರ ಪಡೆವರಿಗೆ 1.00 ಕೋಟಿ ರೂ.ಗಳು, ವೀರಚಕ್ರ ವಿಜೇತರಿಗೆ 50 ಲಕ್ಷ ರೂ.ಗಳು,  ಶೌರ್ಯ ಚಕ್ರ ವಿಜೇತರಿಗೆ 50 ಲಕ್ಷ ರೂ.ಗಳು, ಸೇನಾ/ನೌಕಾ/ ವಾಯು ಸೇನಾ ಮೇಡಲ್ ಪಡೆದವರಿಗೆ 15 ಲಕ್ಷ ರೂ.ಗಳು, ಮೆನ್ ಶನ್ ಎನ್.ಡಿ.ಎಸ್ ಪ್ಯಾಚ್ ಪಡೆದವರಿಗೆ 15 ಲಕ್ಷ ರೂ.ಗಳಿಗೆ ಹೆಚ್ಚಿಸಿ ಆದೇಶವನ್ನು ಹೊರಡಿಸಲಾಗಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು. 

ಪ್ರಶಸ್ತಿ ವಿಜೇತರಿಗೆ  ಸುಮಾರು ಐದು ಪಟ್ಟು ಅನುದಾನವನ್ನು ಹೆಚ್ವಿಸಲಾಗಿದೆ. ಅವರ ಬಹಳ ವರ್ಷಗಳ ಬೇಡಿಕೆಯನ್ನು ಈಡೇರಿಸಿ ಆದೇಶವನ್ನು ಹೊರಡಿಸಿದೆ. ಇದು ಸೇನೆಗೆ ನಾವು ಸಲ್ಲಿಸುವ ಗೌರವ. ನಿವೃತ್ತ ರಾದ ಮೇಲೆ ಉತ್ತಮ ಜೀವನ ನಡೆಸಲು ಹಾಗೂ  ಸಾವನ್ನಪ್ಪಿದಾಗ ಸಹಾಯ ಮಾಡುತ್ತಾ ಬಂದಿದ್ದೇವೆ. ಪ್ರಶಸ್ತಿ ಪಡೆದಾಗಲು ಅವರನ್ನು ಗೌರವಿಸುವ ನಿಟ್ಟಿನಲ್ಲಿ ಅನುದಾನವನ್ನು ಹೆಚ್ವಿಸಲಾಗಿದೆ ಎಂದರು. 

ದೇಶದ ತಾಂತ್ರಿಕ ಅಭಿವೃದ್ಧಿಗೆ ಸೇನಾಪಡೆಗಳ ಕೊಡುಗೆ

ಸೇನಾಪಡೆಗಳು ದೇಶದ ರಕ್ಷಣೆ ಮಾತ್ರವಲ್ಲದೆ ಆಂತರಿಕ ಭದ್ರತೆಯನ್ನು ಕಾಪಾಡುವಲ್ಲಿಯೂ ಮಹತ್ವದ ಪಾತ್ರ ವಹಿಸುತ್ತದೆ. ದೇಶದ  ತಾಂತ್ರಿಕ ಬೆಳವಣಿಗೆ ಯಲ್ಲಿಯೂ ಸೇನಾಪಡೆಗಳು ಪ್ರಮುಖವಾದ ಪಾತ್ರವನ್ನು ನಿರ್ವಹಿಸುತ್ತವೆ. ಸೇನೆಯ ಬಗ್ಗೆ ನಮಗೆ ಅತ್ಯಂತ ಹೆಮ್ಮೆ ಇದೆ. ಪ್ರತಿ ಬಾರಿಯೂ ಗಡಿಯುದ್ದಕ್ಕೂ ಅವರು ಸವಾಲುಗಳನ್ನು ಎದುರಿಸುತ್ತಾರೆ  ಪೂರ್ವ , ಪಶ್ಚಿಮ, ಉತ್ತರ ಗಡಿಗಳಾಗಲಿ, ಅವರಿಗೆ ಎದುರಾದ ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸಿ, ಶತ್ರುಪಡೆಗಳನ್ನು ಸೋಲಿಸಿದ್ದಾರೆ. 

ವಿಶೇಷವಾಗಿ 1971 ರಲ್ಲಿ ನಡೆದ ಇಂಡೋ- ಪಾಕಿಸ್ತಾನ ಯುದ್ಧವು ನಮ್ಮ ಸೇನಾಪಡೆಯ ಶಕ್ತಿ, ಬುದ್ದಿವಂತಿಕೆ, ಶೌರ್ಯ ಹಾಗೂ ಮೂರು ರಕ್ಷಣಾ ಪಡೆಗಳ ನಡುವಿನ ಸಮನ್ವಯಕ್ಕೆ ಸಾಕ್ಷಿಯಾಗಿದೆ ಎಂದರು. 

ಮಧ್ಯರಾತ್ರಿ ನಡೆದ ದಾಳಿಗೆ ವಾಯುಪಡೆ, ನೌಕಾ, ಸೇನಾ ಪಡೆಗಳು ಎಚ್ಚೆತ್ತು ಯುದ್ಧಕ್ಕೆ ಪ್ರತ್ಯುತ್ತರ ನೀಡಿತು. 13 ದಿನಗಳ ಕಾಲ ನಡೆದ ಯುದ್ಧದಲ್ಲಿ 3863 ಯೋಧರು ಸಾವಿಗೀಡಾಗಿ, 9000 ಕ್ಕೂ ಹೆಚ್ಚು ಯೋಧರು ಗಾಯಾಳುಗಳಾದರು. ಪಾಕಿಸ್ತಾನದ 90000 ಕ್ಕೂ ಹೆಚ್ವು  ಸೈನಿಕರು ಶರಣಾಗಿ, ಭಾರತ ಜಯ ಗಳಿಸಿತು. ಇದು ಅತ್ಯುತ್ತಮ ಯುದ್ಧ ನಿರ್ವಹಣೆ ಯ ಪ್ರತೀಕ ಎಂದರು.  

1971 ರಲ್ಲಿ ಭಾರತದ ಮಿಲಿಟರಿ ಶಕ್ತಿಯನ್ನು ಇಡೀ ವಿಶ್ವವೇ ತಿರುಗಿ ನೋಡುವಂತಾಯಿತು. ಯುದ್ಧದಲ್ಲಿ ಮಡಿದವರ ಶೌರ್ಯಕ್ಕೆ ಮುಖ್ಯಮಂತ್ರಿಗಳು ನಮನ ಸಲ್ಲಿಸುವುದು ನಮ್ಮ ಕರ್ತವ್ಯ ಎಂದರು.

ಮಿಲಿಟರಿಯಲ್ಲಿ ತಂತ್ರಜ್ಞಾನ ಬಳಕೆ

ಇತ್ತೀಚೆಗೆ ವಿಶ್ವದಲ್ಲಿ ತಂತ್ರಜ್ಞಾನ ಬಳಕೆ  ಮಿಲಿಟರಿಯಲ್ಲಿ  ಹೆಚ್ಚಾಗಿದೆ. ತಂತ್ರಜ್ಞಾನಕ್ಕೆ ಸಂಬಂಧಿಸಿದಂತೆ ಭಾರತವೂ ಯಾವ ದೇಶಕ್ಕೂ ಕಡಿಮೆಯಿಲ್ಲ. ನಮ್ಮ ಪ್ರಧಾನಿಗಳೂ ಸಹ ಈ ನಿಟ್ಟಿನಲ್ಲಿ ಭಾರತವನ್ನು ಸಶಕ್ತಗೊಳಿಸಿದ್ದಾರೆ. 

ವಿಜಯ ದಿವಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದು ಹೆಮ್ಮೆಯ ಸಂಗತಿಯಾಗಿದೆ. ಬಾಂಗ್ಲಾದೇಶವೂ  ತನ್ನ ಸ್ವಾತಂತ್ರ್ಯ ದಿನವನ್ನು ಆಚರಿಸಿಕೊಳ್ಳಲು ಸಾಧ್ಯ ವಾಗಿರುವುದು ಭಾರತದ ಸೇನೆಯ ಸಹಾಯದಿಂದಾಗಿ. ನಮ್ಮನ್ನು ದೇಶದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಅಭಿವೃದ್ಧಿಗೆ ಮುಡಿಪಾಗಿಟ್ಟುಕೊಳ್ಳಬೇಕು. ಅದುವೇ ನಾವು ಸೇನಾಪಡೆಗಳಿಗೆ ಸಲ್ಲಿಸುವ ನಿಜ ನಮನ ಎಂದರು.

ಇದೇ ಸಂದರ್ಭದಲ್ಲಿ  ಹೆಲಿಕಾಪ್ಟರ್ ದುರಂತದಲ್ಲಿ ಇತ್ತೀಚೆಗೆ ಮಡಿದ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ ಎಲ್ಲರಿಗೂ ಶ್ರದ್ದಾಂಜಲಿ ಸಲ್ಲಿಸಿದರು. 

ಗೃಹ ಸಚಿವ ಆರಗ ಜ್ಞಾನೇಂದ್ರ, ಮೇಜರ್ ಜನರಲ್ ಜೆ.ವಿ. ಪ್ರಸಾದ್ ಮತ್ತಿತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X