Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಕೇಂದ್ರದ ವಿರುದ್ಧ ಬ್ಯಾಂಕ್...

ಉಡುಪಿ: ಕೇಂದ್ರದ ವಿರುದ್ಧ ಬ್ಯಾಂಕ್ ಯೂನಿಯನ್‌ಗಳ ಸಾರ್ವತ್ರಿಕ ಪ್ರತಿಭಟನೆ

ರಾಷ್ಟ್ರೀಕೃತ ಬ್ಯಾಂಕುಗಳ ಖಾಸಗೀಕರಣಕ್ಕೆ ವಿರೋಧ

ವಾರ್ತಾಭಾರತಿವಾರ್ತಾಭಾರತಿ16 Dec 2021 7:07 PM IST
share
ಉಡುಪಿ: ಕೇಂದ್ರದ ವಿರುದ್ಧ ಬ್ಯಾಂಕ್ ಯೂನಿಯನ್‌ಗಳ ಸಾರ್ವತ್ರಿಕ ಪ್ರತಿಭಟನೆ

ಉಡುಪಿ, ಡಿ.16: ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವುದು ಹಾಗೂ ಬ್ಯಾಂಕಿಂಗ್ ನಿಯಮಗಳ (ತಿದ್ದುಪಡಿ) ವಿಧೇಯಕ 2021ನ್ನು ಸಂಸತ್ತಿನಲ್ಲಿ ಮಂಡಿಸಲು ಹುನ್ನಾರ ನಡೆಸುತ್ತಿರುವ ಕೇಂದ್ರ ಸರಕಾರದ ಕ್ರಮದ ವಿರುದ್ದ ಬ್ಯಾಂಕ್ ಯೂನಿಯನ್‌ಗಳ ಸಂಯುಕ್ತ ವೇದಿಕೆಯ ವತಿಯಿಂದ ಬ್ಯಾಂಕಿನ ಅಧಿಕಾರಿಗಳು ಹಾಗೂ ನೌಕರರು ಉಡುಪಿಯಲ್ಲಿ ಇಂದು ಪ್ರತಿಭಟನೆ ನಡೆಸಿದರು.

ಕೇಂದ್ರ ಸರಕಾರದ ನಡೆಯನ್ನು ಖಂಡಿಸಿ ಬ್ಯಾಂಕ್ ಯೂನಿಯನ್‌ಗಳ ಸಂಯುಕ್ತ ವೇದಿಕೆ ದೇಶಾದ್ಯಂತ ಡಿ.16 ಮತ್ತು 17ರಂದು ಎರಡು ದಿನಗಳ ಕಾಲ ಮುಷ್ಕರ ನಡೆಸಲು ನೀಡಿದ ಕರೆಯಂತೆ ಇಂದು ಉಡುಪಿ ಕೆನರಾ ಬ್ಯಾಂಕ್‌ನ ಕೋರ್ಟ್‌ರೋಡ್ ಶಾಖೆಯ ಎದುರು ಪ್ರತಿಭಟನೆ ನಡೆಯಿತು.

ಸುಧಾರಣೆಯ ನೆಪದಲ್ಲಿ ಕೆಲವೊಂದು ಜನವಿರೋಧಿ ಕ್ರಮಗಳನ್ನು ಕೇಂದ್ರ ಸರಕಾರ ಕೈಗೆತ್ತಿಕೊಂಡಿದೆ. ಅದರಲ್ಲೂ ಮುಖ್ಯವಾಗಿ ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವುದು ಹಾಗೂ ಬ್ಯಾಂಕಿಂಗ್ ನಿಯಮಗಳ (ತಿದ್ದುಪಡಿ) ವಿಧೇಯಕ-2021ನ್ನು ಸಂಸತ್ತಿನಲ್ಲಿ ಮಂಡಿಸಲು ಹುನ್ನಾರ ನಡೆಸಲಾಗುತ್ತಿದೆ ಎಂದು ಪ್ರತಿಭಟನಕಾರರು ಆರೋಪಿಸಿದರು.

ದೇಶದ ಆರ್ಥಿಕ ಅಭಿವೃದ್ಧಿಗೆ ಮಾರಕವಾದ ಕೇಂದ್ರ ಸರಕಾರದ ಈ ತಪ್ಪು ನಿರ್ಣಯವನ್ನು ಖಂಡಿಸಿ ಬ್ಯಾಂಕ್ ಯುನಿಯನ್‌ಗಳ ಸಂಯುಕ್ತ ವೇದಿಕೆ ದೇಶದಾದ್ಯಂತ ಎರಡು ದಿನಗಳ ಮುಷ್ಕರಕ್ಕೆ ಕರೆ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಬ್ಯಾಂಕಿನ ಅಧಿಕಾರಿಗಳು ಹಾಗೂ ನೌಕರರು ಪ್ರತಿಭಟನೆಯಲ್ಲಿ ಭಾರೀ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದು, ಮುಷ್ಕರ ಯಶಸ್ವಿಗೊಂಡಿದೆ ಎಂದು ಪ್ರತಿಭಟನಕಾರರು ಹೇಳಿದರು.

ಕೇಂದ್ರ ಸರಕಾರದ ಜನವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ಸಭೆ ಯಲ್ಲಿ ತೀವವಾಗಿ ಖಂಡಿಸಲಾಯಿತು. ಪ್ರತಿಭಟನಾ ಸಭೆಯನ್ನುದ್ದೇಶಿಸಿ ಎಐಬಿಇಎ ಹಾಗೂ ಇತರ ಬ್ಯಾಂಕಿಂಗ್ ಸಂಘಟನೆಗಳ ಮುಖಂಡರಾದ ರಮೇಶ್, ಸುಪ್ರಿಯಾ, ರವಿಶಂಕರ್, ಎಂ. ರತ್ನಾಕರ ಶೆಣೈ, ಕೆನರಾ ಬ್ಯಾಂಕಿನ ಮರಿಯೋ ಮಥಾಯಸ್, ಅವಿನಾಶ್ ಹೆಗಡೆ, ಪ್ರೇಮನಾಥ್ ಪೂಜಾರಿ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ನಾಗೇಶ್ ನಾಯಕ್, ಉಡುಪಿ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷ ರಾಮಮೋಹನ್ ಮಾತನಾಡಿದರು.

ಪ್ರತಿಭಟನಾ ಸಭೆಯಲ್ಲಿ ಕೆನರಾ ಬ್ಯಾಂಕಿನ ವರದರಾಜ್, ಪ್ರವೀಣ್, ಮುಖಂಡರಾದ ರವೀಂದ್ರ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಮನೋಜ್‌ಕುಮಾರ್ ಕಲ್ಮಾಡಿ, ರಮೇಶ್, ಬ್ಯಾಂಕ್ ಆಫ್ ಬರೋಡದ ರಮೇಶ್, ಯೂಕೋ ಬ್ಯಾಂಕಿನ ಸೂರಜ್, ಕರ್ನಾಟಕ ಬ್ಯಾಂಕಿನ ನಿತ್ಯಾನಂದ, ಸಂಘಟನೆಯ ಇತರ ಪ್ರಮುಖರಾದ ಜಯನ್ ಮಲ್ಪೆ, ಸುರೇಖಾ ಮುಂತಾ ದವರು ಭಾಗವಹಿಸಿದ್ದರು. ಪ್ರತಿಭಟನೆಯನ್ನು ಯುಎಫ್‌ಬಿಯುನ ಸಂಚಾಲಕರಾದ ಹೆರಾಲ್ಡ್ ಡಿಸೋಜಾ ಸಂಯೋಜಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X