Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಚರ್ಮಕ್ಕೆ ಚರ್ಮ ಸ್ಪರ್ಶವಾಗದಿದ್ದರೆ...

"ಚರ್ಮಕ್ಕೆ ಚರ್ಮ ಸ್ಪರ್ಶವಾಗದಿದ್ದರೆ ಲೈಂಗಿಕ ದೌರ್ಜನ್ಯವಾಗುವುದಿಲ್ಲ" ಎಂದು ತೀರ್ಪು ನೀಡಿದ್ದ ನ್ಯಾಯಾಧೀಶೆಗೆ ಸಂಕಷ್ಟ

ನೇಮಕಾತಿ ಖಾಯಂಗೊಳಿಸಲು ಸಾಧ್ಯವಿಲ್ಲ ಎಂದ ಸುಪ್ರೀಂಕೋರ್ಟ್‌

ವಾರ್ತಾಭಾರತಿವಾರ್ತಾಭಾರತಿ16 Dec 2021 8:14 PM IST
share
ಚರ್ಮಕ್ಕೆ ಚರ್ಮ ಸ್ಪರ್ಶವಾಗದಿದ್ದರೆ ಲೈಂಗಿಕ ದೌರ್ಜನ್ಯವಾಗುವುದಿಲ್ಲ ಎಂದು ತೀರ್ಪು ನೀಡಿದ್ದ ನ್ಯಾಯಾಧೀಶೆಗೆ ಸಂಕಷ್ಟ

ಹೊಸದಿಲ್ಲಿ,ಡಿ.16: ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ಹಲ್ಲೆ ಪ್ರಕರಣವೊಂದರಲ್ಲಿ ‘‘ಚರ್ಮದಿಂದ ಚರ್ಮಕ್ಕೆ ಸಂಪರ್ಕವಾಗದೆ ಇದ್ದಲ್ಲಿ ಅದು ಲೈಂಗಿಕ ದೌರ್ಜನ್ಯವಲ್ಲ’’ ಎಂಬ ವಿವಾದಾತ್ಮಕ ತೀರ್ಪು ಪ್ರಕಟಿಸಿದ್ದ ಬಾಂಬೆ ಹೈಕೋರ್ಟ್ ನ್ಯಾಯಾಧೀಶೆ ಪುಷ್ಪಾ ವಿ. ಗನೆಡಿವಾಲಾ ಅವರ ನೇಮಕಾತಿಯನ್ನು ಖಾಯಂಗೊಳಿಸಲು ಸಾಧ್ಯವಿಲ್ಲವೆಂದು ಸುಪ್ರೀಂಕೋರ್ಟ್ ನ ಮೂಲಗಳು ತಿಳಿಸಿವೆ. ಹೈಕೋರ್ಟ್ ನ್ಯಾಯಾಧೀಶೆಯಾಗಿ ಪುಷ್ಪಾ ವಿ.ಗನೆಡಿವಾಲಾ ಅವರ ಭಡ್ತಿಯನ್ನು ಸುಪ್ರೀಂಕೋರ್ಟ್ ಕೊಲೇಜಿಯಂ ತಿರಸ್ಕರಿಸಿರುವುದು ಇದು ಎರಡನೆ ಸಲವಾಗಿದೆ.

ಪ್ರಸಕ್ತ ಬಾಂಬೆ ಹೈಕೋರ್ಟ್‌ನಲ್ಲಿ ತಾತ್ಕಾಲಿಕ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸುತ್ತಿರುವ ನ್ಯಾಯಮೂರ್ತಿ ಪುಷ್ಪಾ ಗನೆಡಿವಾಲಾ ಅವರ ಅಧಿಕಾರಾವಧಿಯನ್ನು ಕೇಂದ್ರಸರಕಾರವು ಈ ವರ್ಷ ಆರಂಭದಲ್ಲಿ ವಿಸ್ತರಿಸಿತ್ತು. ಆದರೆ ಅಧಿಕಾರದ ಅವಧಿಯನ್ನು ಸಾಮಾನ್ಯವಾಗಿ ಇರುವ ಎರಡು ವರ್ಷಗಳ ಬದಲಿಗೆ ಒಂದು ವರ್ಷಕ್ಕೆ ಇಳಿಸಿತ್ತು.
  
ಅಪರೂಪದ ವಿದ್ಯಮಾನವೊಂದರಲ್ಲಿ ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಪುಷ್ಪಾ ಗನೆಡಿವಾಲಾ ಅವರ ನೇಮಕಾತಿಯನ್ನು ಖಾಯಂಗೊಳಿಸಲು ತಾನು ಕೇಂದ್ರ ಸರಕಾರಕ್ಕೆ ಮಾಡಿದ್ದ ಶಿಫಾರಸನ್ನು ಸುಪ್ರೀಂಕೋರ್ಟ್ ಸಮಿತಿಯು ಹಿಂತೆಗೆದುಕೊಂಡಿತ್ತು. ಇದಾದ ಬೆನ್ನಲ್ಲೇ ಕೇಂದ್ರ ಸರಕಾರ ಈ ನಿರ್ಧಾರವನ್ನು ಕೈಗೊಂಡಿದೆ. ಅಪ್ರಾಪ್ತ ಬಾಲಕಿಯ ಅತ್ಯಾಚಾರದಂತಹ ಪ್ರಕರಣಗಳ ವಿಚಾರಣೆಯಲ್ಲಿ ಪುಷ್ಪಾ ಗನೆಡಿವಾಲಾ ಅವರು ಇನ್ನೂ ಹೆಚ್ಚು ಪರಿಣತಿಯನ್ನು ಪಡೆಯಬೇಕಾಗಿದೆ ಎಂದು ಸುಪ್ರೀಂಕೋರ್ಟ್ ಮೂಲಗಳು ಎನ್ಡಿಟಿವಿಗೆ ತಿಳಿಸಿದೆ.
 
‘‘ಪುಷ್ಪಾ ಗನೆಡಿವಾಲಾ ವಿರುದ್ಧ ಯಾವುದೇ ವೈಯಕ್ತಿಕ ಭಿನ್ನಾಭಿಪ್ರಾಯವಿಲ್ಲ. ನ್ಯಾಯವಾದಿಯಾಗಿ ಆಕೆ ಇಂತಹ ಪ್ರಕರಣಗಳನ್ನು ನಿರ್ವಹಿಸುವಲ್ಲಿ ಹೆಚ್ಚು ಪರಿಣತಿ ಹಾಗೂ ತರಬೇತಿಯನ್ನು ಪಡೆಯಬೇಕಾದ ಅಗತ್ಯವಿದೆ’’ ಎಂದು ಮೂಲಗಳು ಎನ್‌ಡಿಟಿವಿಗೆ ತಿಳಿಸಿವೆ.
  
ಜನವರಿ 19ರಂದು ನ್ಯಾಯಮೂರ್ತಿ ಪುಷ್ಪಾ ಗನೆಡಿವಾಲಾ ಅವರು ಲೈಂಗಿಕ ಕಿರುಕುಳದ ಪ್ರಕರಣಕ್ಕೆ ಸಂಬಂಧಿಸಿ ನೀಡಿದ ತೀರ್ಪಿನಲ್ಲಿ ಆರೋಪಿಯು ಅಪ್ರಾಪ್ತ ಬಾಲಕಿಯ ಎದೆಯನ್ನು ಬಟ್ಟೆಯ ಮೇಲಿನಿಂದ ಮುಟ್ಟಿದ್ದುದರಿಂದ, ಚರ್ಮದಿಂದ ಚರ್ಮಕ್ಕೆ ಸಂಪರ್ಕ ನಡೆದಿಲ್ಲ. ಹೀಗಾಗಿ ಈ ಪ್ರಕರಣವನ್ನ್ನು ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಸ್ಕೊ) ಕಾಯ್ದೆಯಡಿ ಲೈಂಗಿಕ ದೌರ್ಜನ್ಯವೆಂದು ವ್ಯಾಖ್ಯಾನಿಸಲು ಬರುವುದಿಲ್ಲವೆಂದು ಹೇಳಿದ್ದರು.
   
   ನ್ಯಾಯಮೂರ್ತಿ ಗನೆಡಿವಾಲಾ ಅವರು ಇನ್ನೊಂದು ಪ್ರಕರಣದಲ್ಲಿ ನೀಡಿದ ತೀರ್ಪಿನಲ್ಲಿ ಅಪ್ರಾಪ್ತ ಬಾಲಕಿಯ ಕೈಗಳನ್ನು ಹಿಡಿದುಕೊಳ್ಳುವುದು ಅಥವಾ ಆಕೆಯಿಂದ ಪ್ಯಾಂಟ್‌ನ ಜಿಪ್ ಬಿಚ್ಚಿಸಿಕೊಳ್ಳುವುದನ್ನು ಲೈಂಗಿಕ ದೌರ್ಜನ್ಯದ ವ್ಯಾಖ್ಯಾನಕ್ಕೆ ಒಳಪಡಿಸಲು ಸಾಧ್ಯವಿಲ್ಲವೆಂದು ಹೇಳಿದ್ದರು ಹಾಗೂ ಆರೋಪಿಯನ್ನು ಪೋಸ್ಕೊ ಕಾಯ್ದೆಯಡಿಯ ಆರೋಪಗಳಿಂದ ದೋಷಮುಕ್ತಗೊಳಿಸಿದ್ದರು. ಈ ಪ್ರಕರಣದಲ್ಲಿ ಐದು ವರ್ಷದ ಬಾಲಕಿಯು ಸಂತ್ರಸ್ತೆಯಾಗಿದ್ದಳು. 

ಈ ಎರಡು ವಿವಾದಾತ್ಮಕ ತೀರ್ಪುಗಳ ಬಳಿಕ ನ್ಯಾಯಮೂರ್ತಿ ಗನೆಡಿವಾಲಾ ಅವರನ್ನು ಖಾಯಂ ನ್ಯಾಯಾಧೀಶೆಯಾಗಿ ಶಿಫಾರಸು ಮಾಡುವ ತನ್ನ ನಿರ್ಧಾರವನ್ನು ಕೊಲೇಜಿಯಂ ಹಿಂಪಡೆದುಕೊಂಡಿದೆ. ಸುಪ್ರೀಂಕೋರ್ಟ್ ಸಾಮಾನ್ಯವಾಗಿ ನ್ಯಾಯಮೂರ್ತಿಗಳ ನೇಮಕಕ್ಕೆ ತಾನು ಮಾಡಿದ ಶಿಫಾರಸುಗಳನ್ನು ಹಿಂಪಡೆದುಕೊಳ್ಳುವುದು ತೀರಾ ಅಪರೂಪವಾಗಿದೆ. ವಿವಿಧ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಸಂಬಂಧಿಸಿದ ನಿರ್ಧಾರಗಳನ್ನು ಕೈಗೊಳ್ಳುವ ತ್ರಿಸದಸ್ಯ ಕೊಲೇಜಿಯಂನಲ್ಲಿ ಸಿಜೆಐ ಎನ್.ವಿ.ರಮಣ, ನ್ಯಾಯಮೂರ್ತಿಗಳಾದ ಯು.ವಿ.ಲಲಿತ್ ಹಾಗೂ ಎ.ಎಂ. ಖಾನ್ವಿಲ್ಕರ್ ಇದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X