Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿ ಕಾರ್ಯಾಲಯ ಆಯೋಜಿಸಿದ್ದ ʼಅಸಹಜ...

ಪ್ರಧಾನಿ ಕಾರ್ಯಾಲಯ ಆಯೋಜಿಸಿದ್ದ ʼಅಸಹಜ ಆನ್‌ಲೈನ್‌ ಸಂವಾದʼದಲ್ಲಿ ಚುನಾವಣಾ ಆಯುಕ್ತರು ಭಾಗಿ: ವರದಿ

ವಾರ್ತಾಭಾರತಿವಾರ್ತಾಭಾರತಿ17 Dec 2021 4:36 PM IST
share
ಪ್ರಧಾನಿ ಕಾರ್ಯಾಲಯ ಆಯೋಜಿಸಿದ್ದ ʼಅಸಹಜ ಆನ್‌ಲೈನ್‌ ಸಂವಾದʼದಲ್ಲಿ ಚುನಾವಣಾ ಆಯುಕ್ತರು ಭಾಗಿ: ವರದಿ

ಹೊಸದಿಲ್ಲಿ: ಪ್ರಧಾನಿ ಕಾರ್ಯಾಲವು ಆಯೋಜಿಸಿದ್ದ ಅಸಹಜವೆಂದು ತಿಳಿಯಲಾದ ಆನ್‍ಲೈನ್ ಸಂವಾದವೊಂದರಲ್ಲಿ ನವೆಂಬರ್ 16ರಂದು ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಹಾಗೂ ಚುನಾವಣಾ ಆಯುಕ್ತರುಗಳಾದ ರಾಜೀವ್ ಕುಮಾರ್ ಮತ್ತು ಅನೂಪ್ ಚಂದ್ರ ಪಾಂಡೆ ಅವರು ಭಾಗವಹಿಸಿದ್ದರೆಂದು indianexpress.com ವರದಿ ಮಾಡಿದೆ.

ಕೇಂದ್ರ ಕಾನೂನು ಸಚಿವಾಲಯದಿಂದ ಅಸಹಜವೆಂದು ತಿಳಿಯಲಾದ ಟಿಪ್ಪಣಿಯನ್ನು ಚುನಾವಣಾ ಆಯೋಗ ಪಡೆದ ಮರುದಿನ ಈ ಸಭೆ ನಡೆದಿದೆ. ಪ್ರಧಾನಿ ಅವರ ಮುಖ್ಯ ಕಾರ್ಯದರ್ಶಿ ಪಿ ಕೆ ಮಿಶ್ರಾ ಅವರು ಸಮಾನ ಮತದಾರ ಪಟ್ಟಿ (ಕಾಮನ್ ಇಲೆಕ್ಟೋರಲ್ ರೋಲ್) ಕುರಿತಾದ  ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಹಾಗೂ ಮುಖ್ಯ ಚುನಾವಣಾ ಆಯುಕ್ತರು ಹಾಜರಿರಬೇಕೆಂದು ನಿರೀಕ್ಷಿಸಿದ್ದಾರೆಂದು ತಿಳಿಸಲಾಗಿತ್ತು.

ಈ ಪತ್ರದಲ್ಲಿ ಬಳಸಲಾದ ಪದಗಳು ಚುನಾವಣಾ ಆಯೋಗದ ಅಧಿಕಾರಿಗಳಿಗೆ ಅಚ್ಚರಿ ಮೂಡಿಸಿತ್ತು ಹಾಗೂ ಅದು ಒಂದು ರೀತಿಯ ಸಮನ್ಸ್‍ನಂತಿತ್ತು ಹಾಗೂ ಹಿಂದೆ ಈ ವಿಚಾರ ಕುರಿತ ಸಭೆಯಲ್ಲಿ ಆಯೋಗದ ಅಧಿಕಾರಿಗಳು ಭಾಗವಹಿಸುತ್ತಿದ್ದರು, ಆಯುಕ್ತರಲ್ಲ ಎಂದು ವರದಿಯಾಗಿದೆ.

ಚುನಾವಣಾ ಆಯೋಗದ ಸ್ವಾಯತ್ತತೆಯ ದೃಷ್ಟಿಯಿಂದ ಸಾಮಾನ್ಯವಾಗಿ ಚುನಾವಣಾ ಆಯೋಗವು ಕಾರ್ಯಾಂಗದಿಂದ ಸ್ವಲ್ಪ ದೂರವನ್ನು ಕಾಯ್ದುಕೊಳ್ಳುವುದು ಸಾಮಾನ್ಯವಾಗಿದೆ. ಸಚಿವಾಲಯದಿಂದ ಬಂದ ಪತ್ರದಿಂದ ಮುಖ್ಯ ಚುನಾವಣಾ ಆಯುಕ್ತರು ಸ್ವಲ್ಪ ತಳಮಳಗೊಂಡು ತಾವು ಈ ಸಭೆಗೆ ಹಾಜರಾಗುವುದಿಲ್ಲ ಎಂದಿದ್ದರು ಎಂದು ವರದಿಯಾಗಿದೆ. ಪ್ರಧಾನಿಯ ಮುಖ್ಯ ಕಾರ್ಯದರ್ಶಿಯ ಜತೆಗಿನ ಸಭೆಯಲ್ಲಿ  ಆಯೋಗದ ಅಧಿಕಾರಿಗಳು ಹಾಜರಾದರೂ ಈ ಸಭೆಯ ತಕ್ಷಣ ನಡೆದ ಅನೌಪಚಾರಿಕ ಸಭೆಯಲ್ಲಿ ಮುಖ್ಯ ಚುನಾವಣಾ ಆಯುಕ್ತರು ಮತ್ತು ಇಬ್ಬರು ಆಯುಕ್ತರು ಭಾಗವಹಿಸಿದ್ದರೆನ್ನಲಾಗಿದೆ. 

ಕೆಲವೊಂದು ಸುಧಾರಣೆಗಳ ಕುರಿತು ಚರ್ಚಿಸಲು ಈ ಸಭೆ ಕರೆಯಲಾಗಿತ್ತು ಎನ್ನಲಾಗಿದ್ದು ಹಾಗೂ ಕೇಂದ್ರ ಸಚಿವ ಸಂಪುಟ ಈ ಸುಧಾರಣೆಗಳಿಗೆ ಅಂಕಿತ ನೀಡಿದೆ ಎನ್ನಲಾಗಿದೆ. ಇದೊಂದು ಅನೌಪಚಾರಿಕ ಸಭೆ ಹಾಗೂ ಮುಂಬರುವ ವಿಧಾನಸಭಾ ಚುನಾವಣೆ ಕುರಿತು ಯಾವುದೇ  ಚರ್ಚೆ ನಡೆದಿಲ್ಲ ಎಂದು ಹೇಳಲಾಗಿದೆ.

ಏಕಕಾಲದಲ್ಲಿ ಚುನಾವಣೆ ನಡೆಸಲು ಕಾಮನ್ ಇಲೆಕ್ಟೋರಲ್ ರೋಲ್ ಬಿಜೆಪಿಯ ಅಜೆಂಡಾಗಳಲ್ಲಿ ಒಂದಾಗಿದೆ ಎಂಬುದನ್ನು ಇಲ್ಲಿ ಸ್ಮರಿಸಬಹುದು ಎಂದು ವರದಿ ಉಲ್ಲೇಖಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X