Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನೀವೂ ದಿನ ಟ್ರ್ಯಾಕ್ಟರ್ ನಲ್ಲೇ ಸದನಕ್ಕೆ...

ನೀವೂ ದಿನ ಟ್ರ್ಯಾಕ್ಟರ್ ನಲ್ಲೇ ಸದನಕ್ಕೆ ಬರುತ್ತೀರಾ ಎಂದ ಸಚಿವ ನಾರಾಯಣಗೌಡ ಹೇಳಿಕೆಗೆ ಕಾಂಗ್ರೆಸ್ ಧರಣಿ

ವಾರ್ತಾಭಾರತಿವಾರ್ತಾಭಾರತಿ17 Dec 2021 5:06 PM IST
share
ನೀವೂ ದಿನ ಟ್ರ್ಯಾಕ್ಟರ್ ನಲ್ಲೇ ಸದನಕ್ಕೆ ಬರುತ್ತೀರಾ ಎಂದ ಸಚಿವ ನಾರಾಯಣಗೌಡ ಹೇಳಿಕೆಗೆ ಕಾಂಗ್ರೆಸ್ ಧರಣಿ

ಬೆಳಗಾವಿ, ಡಿ.17: ನೀವೂ ದಿನ ಟ್ರ್ಯಾಕ್ಟರ್ ನಲ್ಲೇ ಸದನಕ್ಕೆ ಬರುತ್ತೀರಾ ಎಂದು ರೇಷ್ಮೇ ಸಚಿವ ನಾರಾಯಣಗೌಡ ನೀಡಿದ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿ ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಸದಸ್ಯರು ಧರಣಿ ನಡೆಸಿದರು.

ಶುಕ್ರವಾರ ಪರಿಷತ್ತಿನ ಕಲಾಪದಲ್ಲಿ ಶಾಸಕರನ್ನು ಸುವರ್ಣ ವಿಧಾನಸೌಧ ಪ್ರವೇಶ ತಡೆದ ಹಿರಿಯ ಐಪಿಎಸ್ ಅಧಿಕಾರಿಗಳ ವಿರುದ್ಧ ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಎಸ್.ಆರ್.ಪಾಟೀಲ್ ಸದನದಲ್ಲಿ ಹಕ್ಕುಚ್ಯುತಿ ಮಂಡಿಸಿ, ಟ್ರ್ಯಾಕ್ಟರ್ ನಲ್ಲಿ ಬರುತ್ತಿರುವಾಗ ನಮ್ಮನ್ನು ಉದ್ದೇಶ ಪೂರ್ವಕವಾಗಿ ತಡೆದರು ಎಂದು ಸದನಕ್ಕೆ ತಿಳಿಸಿದರು.

ಈ ವೇಳೆ ಮಧ್ಯ ಪ್ರವೇಶಿಸಿದ ಸಚಿವ ನಾರಾಯಣಗೌಡ, ನೀವೂ ದಿನಲೂ ಟ್ರಾಕ್ಟರ್ ನಲ್ಲೇ ಬರುತ್ತೀರಾ. ಒಂದು ದಿನ ಬಂದಿದ್ದೀರಾ. ಹೀಗಾಗಿ, ಬಿಟ್ಟಿಲ್ಲ ಎಂದು ವ್ಯಂಗ್ಯವಾಡಿದರು.

ಇದಕ್ಕೆ ಗರಂ ಆದ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ್, ಪ್ರತಾಪ್ ಚಂದ್ರ ಶೆಟ್ಟಿ, ಬಿ.ಕೆ.ಹರಿಪ್ರಸಾದ್, ಎಂ.ನಾರಾಯಣಸ್ವಾಮಿ ಸೇರಿದಂತೆ ಹಲವು ಸದಸ್ಯರು ಎದ್ದು ನಿಂತು, ‘ಎಂತಾ ಮಂತ್ರಿ ಇವಾ, ಇವನ್ಯಾರು ನಮಗೆ ಹೇಳಲಿಕ್ಕೆ’, ಈತ ಕ್ಷಮೆಯಾಚಿಸಬೇಕೆಂದು ಗದ್ದಲ ಎಬ್ಬಿಸಿದರು.

ಆನಂತರ, ಸದನದ ಬಾವಿಗಿಳಿದು ಧರಣಿ ನಡೆಸಿ, ಸಚಿವರು ರಾಜೀನಾಮೆ ನೀಡಬೇಕೆಂದು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಈ ವೇಳೆ ಸಚಿವರು, ನಾನೂ ಎತ್ತಿನಗಾಡಿಯಲ್ಲಿ ಹೋಗಿದ್ದೇನೆ ಎಂದರು. 

ಬಳಿಕ ಆಡಳಿತ ಪಕ್ಷದ ಸದಸ್ಯರು ಸಚಿವರ ಪರ ನಿಂತು ಪ್ರತಿಪಕ್ಷದ ಮೇಲೆ ವಾಗ್ದಾಳಿ ನಡೆಸಿದರು. ಹೀಗೆ, ಎರಡು ಕಡೆಗಳಿಂದ ಕೆಲಕಾಲ ವಾಗ್ವಾದ ನಡೆಯಿತು.

ಆಗ ಮಧ್ಯ ಪ್ರವೇಶಿಸಿದ ಸಭಾಪತಿ ಬಸವರಾಜ ಹೊರಟ್ಟಿ ಅವರು, ಸಚಿವರು ಮಾತನಾಡುವಾಗ ಗಂಭೀರವಾಗಿರಬೇಕು. ಅಲ್ಲದೆ, ಮಾತನಾಡುವ ಮೊದಲು ಸಭಾಪತಿ ಅವರೊಂದಿಗೆ ಅನುಮತಿ ಪಡೆಯಬೇಕು. ಸೌಜನ್ಯವಾಗಿ ವರ್ತಿಸಬೇಕು ಎಂದು ಚಾಟಿ ಬೀಸಿದರು.

ಬಳಿಕ, ವಿಪಕ್ಷ ಸದಸ್ಯರು ತಮ್ಮ ಆಸನಗಳಿಗೆ ಮರಳುತ್ತಿದ್ದಂತೆ ಇದನ್ನೆಲ್ಲ ಕಡಿತದಿಂದ ತೆಗೆಯಿರಿ ಎಂದು ಸಭಾಪತಿ ಸೂಚಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X