Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಎಲ್ಲದಕ್ಕೂ ಮೂಗು ತೂರಿಸಿ ಸಣ್ಣವರಾಗಬೇಡಿ

ಎಲ್ಲದಕ್ಕೂ ಮೂಗು ತೂರಿಸಿ ಸಣ್ಣವರಾಗಬೇಡಿ

ಕೆ.ಎಸ್. ನಾಗರಾಜ್, ಬೆಂಗಳೂರುಕೆ.ಎಸ್. ನಾಗರಾಜ್, ಬೆಂಗಳೂರು17 Dec 2021 5:11 PM IST
share
ಎಲ್ಲದಕ್ಕೂ ಮೂಗು ತೂರಿಸಿ ಸಣ್ಣವರಾಗಬೇಡಿ

ಶಾಲಾ ಮಕ್ಕಳಿಗೆ ಪೌಷ್ಟಿಕಾಂಶದ ಅಂಶವನ್ನು ಹೆಚ್ಚಿಸುವ ಸಲುವಾಗಿ ಮೊಟ್ಟೆ ವಿತರಣೆ ಮಾಡುವ ಯೋಜನೆಯನ್ನು ಈಗಾಗಲೇ ಜಾರಿಗೆ ತಂದಿರುತ್ತಾರೆ. ಮೊಟ್ಟೆ ವಿತರಣೆ ವಿಚಾರದಲ್ಲಿ ಅನೇಕ ಮಠಾಧಿಪತಿಗಳು ಮತ್ತು ಇವರ ಧ್ವನಿಯ ಪ್ರತಿರೂಪಗಳಾಗಿರುವ ರಾಜಕಾರಣಿಗಳು ಅನಾವಶ್ಯಕವಾಗಿ ಈ ವಿಚಾರದಲ್ಲಿ ಮೂಗು ತೂರಿಸಿ ಸಣ್ಣವರಾಗುತ್ತಿದ್ದಾರೆ. ಮಕ್ಕಳಿಗೆ ಮೊಟ್ಟೆ ವಿತರಣೆ ಮಾಡುವುದರಿಂದ ಯಾವ ಅನಾಹುತವೂ ಆಗುವುದಿಲ್ಲ, ಯಾವುದೇ ತಾರತಮ್ಯವೂ ಆಗುವುದಿಲ್ಲ. ಪೌಷ್ಟಿಕಾಂಶದ ಕೊರತೆಯಿಂದ ಮಕ್ಕಳು ಬಳಲುತ್ತಿದ್ದಾರೆ. ಅವರ ಕುಟುಂಬದ ಆರ್ಥಿಕ ಪರಿಸ್ಥಿತಿಗಳ ಹಿನ್ನೆಲೆಯಲ್ಲಿ ಪೋಷಕರು ಮಕ್ಕಳ ಬೆಳವಣಿಗೆಗೆ ಬೇಕಾದ ಪೌಷ್ಟಿಕಾಂಶದ ಆಹಾರ ಪದಾರ್ಥಗಳನ್ನು ನೀಡಲು ಅಶಕ್ತರಾಗಿರುತ್ತಾರೆ. ಇಂತಹ ಸಂದರ್ಭದಲ್ಲಿ ಮಕ್ಕಳಿಗೆ ಮೊಟ್ಟೆ ಕೊಟ್ಟರೆ ತಪ್ಪೇನಿಲ್ಲ. ಈ ವಿಚಾರದಲ್ಲಿ ಮಕ್ಕಳ ಹಕ್ಕುಗಳನ್ನು ಯಾರೂ ಕಸಿದುಕೊಳ್ಳಬೇಡಿ. ಅಸಮಾನತೆಯ ಬಗ್ಗೆ ಮಾತನಾಡುವ ಅನೇಕ ಮಠಾಧಿಪತಿಗಳು ಎಷ್ಟು ಜನ ಬಡವರ ಮನೆಯ ಮಕ್ಕಳಿಗೆ ನಿಮ್ಮ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ನೀಡಿದ್ದೀರಿ ಎಂಬುದನ್ನು ಮೊದಲು ಯೋಚಿಸಿ.

ಹಂತ ಹಂತದಲ್ಲೂ ತಾರತಮ್ಯದಿಂದ ಕೂಡಿರುವ ಸಮಾಜದಲ್ಲಿ ಅಸಮಾನತೆಯ ಮಾತುಗಳನ್ನಾಡುವುದು ನಗೆಪಾಟಲಾಗುತ್ತದೆ. ಬಡವರ ಮನೆಯ ಮಕ್ಕಳು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಉಚಿತ ಶಿಕ್ಷಣದ ಯೋಜನೆಯಡಿಯಲ್ಲಿ ಪ್ರವೇಶ ಪಡೆದು ಓದುತ್ತಿದ್ದ ಸಂದರ್ಭದಲ್ಲಿ ರಾಕ್ಷಸಿ ಮನಸ್ಸಿನ ಶಿಕ್ಷಣ ಸಂಸ್ಥೆಯ ಮಾಲಕನೊಬ್ಬ ಬಡವರ ಮನೆಯ ಮಕ್ಕಳು ಕೊಳಕು, ಅನಾರೋಗ್ಯ ಪೀಡಿತರಾಗಿರುತ್ತಾರೆ, ಇಂತಹ ಮಕ್ಕಳನ್ನೂ ಸೇರಿಸಿಕೊಳ್ಳುವುದರಿಂದ ಶ್ರೀಮಂತ ಮನೆಯ ಮಕ್ಕಳಿಗೆ ತೊಂದರೆಯಾಗುತ್ತದೆ ಎಂದು ಮಾತನಾಡಿದಾಗ ಅಂತಹ ವಿಕೃತ ಮನಸ್ಸಿನ ವ್ಯಕ್ತಿಯ ವಿರುದ್ಧ ಯಾರೂ ಮಾತನಾಡಲಿಲ್ಲ. ಶಿಕ್ಷಣ ಸಂಸ್ಥೆಗಳನ್ನು ನಡೆಸುವ ಬಲಾಢ್ಯರು ಉಚಿತ ಶಿಕ್ಷಣ ಕಾನೂನನ್ನು ತಮ್ಮ ಕುತಂತ್ರಗಳ ಮೂಲಕ ಮೂಲೆ ಗುಂಪು ಮಾಡಿದಾಗ ಯಾರೂ ಮಾತನಾಡಲಿಲ್ಲ. ನೀರಿಲ್ಲದ, ಆಟದ ಮೈದಾನಗಳಿಲ್ಲದ, ಶೌಚಾಲಯವಿಲ್ಲದ, ಸೂಕ್ತವಾದಂತಹ ವ್ಯವಸ್ಥೆ ಇಲ್ಲದ ಸರಕಾರಿ ಶಾಲೆಗಳಲ್ಲಿ ಬಡವರ ಮನೆಯ ಮಕ್ಕಳು ಒಂದು ಕಡೆಯಲ್ಲಿ ವಿದ್ಯೆಯನ್ನು ಕಲಿಯಬೇಕು, ಮತ್ತೊಂದು ಕಡೆಯಲ್ಲಿ ಎಲ್ಲ ರೀತಿಯ ಸೌಲಭ್ಯ, ಸೌಕರ್ಯವಿರುವ ವ್ಯವಸ್ಥೆಯ ನಡುವೆ ಉಳ್ಳವರ ಮನೆಯ ಮಕ್ಕಳು ವಿದ್ಯೆ ಕಲಿಯಬೇಕು.

ಮಠಾಧಿಪತಿಗಳು ಕಲಿಕೆಯ ವಿಚಾರದಲ್ಲಿರುವ ಅಥವಾ ವ್ಯವಸ್ಥೆಯ ವಿಚಾರದಲ್ಲಿರುವ ಅಸಮಾನತೆಯ ಬಗ್ಗೆ ಮೊದಲು ಮಾತನಾಡಿ ನಂತರ ಮೊಟ್ಟೆ ವಿಚಾರದ ಬಗ್ಗೆ ಮಾತನಾಡಲಿ. ಮೊಟ್ಟೆ ಬೇಕೆನ್ನುವ ಮಕ್ಕಳು ಮೊಟ್ಟೆ ತಿನ್ನಲಿ, ಹಣ್ಣು ಬೇಕೆಂದವರು ಹಣ್ಣು ತಿನ್ನಲಿ. ಪುಟ್ಟ ಮನಸ್ಸಿನ ಮೇಲೆ ನಮ್ಮ ಸ್ವಾರ್ಥದ ಕೆಲಸಕ್ಕೆ ಬಾರದ ನಿಲುವುಗಳನ್ನು, ಸಿದ್ಧಾಂತಗಳನ್ನು ತುಂಬುವಂತಹ ಕೆಲಸವನ್ನು ಮಾಡುವುದು ಬೇಡ. ಮಕ್ಕಳ ಹಕ್ಕು ಕಸಿದುಕೊಳ್ಳದೆ ಆಯ್ಕೆಯನ್ನು ಅವರಿಗೆ ಬಿಡುವುದು ಅತ್ಯಂತ ಸೂಕ್ತವಾದದ್ದು. ಅನವಶ್ಯಕವಾಗಿ ಎಲ್ಲಾ ವಿಚಾರದಲ್ಲೂ ಸರಕಾರಕ್ಕೆ ಸಲಹೆಗಳನ್ನು ಕೊಡುವಂತಹ ತುರ್ತು ಮಠಾಧಿಪತಿಗಳಿಗೆ ಬೇಕೇ?

share
ಕೆ.ಎಸ್. ನಾಗರಾಜ್, ಬೆಂಗಳೂರು
ಕೆ.ಎಸ್. ನಾಗರಾಜ್, ಬೆಂಗಳೂರು
Next Story
X