Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿ ಕಚೇರಿ ಜೊತೆ ಸಭೆಗೆ ಸಿಇಸಿಯನ್ನು...

ಪ್ರಧಾನಿ ಕಚೇರಿ ಜೊತೆ ಸಭೆಗೆ ಸಿಇಸಿಯನ್ನು ಆಹ್ವಾನಿಸಿರಲಿಲ್ಲ

ವಿವಾದದ ಬಳಿಕ ಕೇಂದ್ರದ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ19 Dec 2021 6:43 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಪ್ರಧಾನಿ ಕಚೇರಿ ಜೊತೆ ಸಭೆಗೆ ಸಿಇಸಿಯನ್ನು ಆಹ್ವಾನಿಸಿರಲಿಲ್ಲ

ಹೊಸದಿಲ್ಲಿ,ಡಿ.19: ಪ್ರಧಾನಿ ಕಚೇರಿಯೊಂದಿಗಿನ ನ.16ರ ಸಭೆಗೆ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಸುಶೀಲ್ ಚಂದ್ರ ಅವರನ್ನು ಆಹ್ವಾನಿಸಿರಲಿಲ್ಲ ಮತ್ತು ಚುನಾವಣಾ ಸುಧಾರಣೆಗಳ ಕುರಿತು ಚರ್ಚೆಗಳಲ್ಲಿ ಕಾರ್ಯದರ್ಶಿ ಅಥವಾ ಅಧಿಕೃತ ಪ್ರತಿನಿಧಿ ಪಾಲ್ಗೊಳ್ಳುವಂತೆ ತನ್ನ ಶಾಸಕಾಂಗ ಇಲಾಖೆಯು ಸೂಚಿಸಿತ್ತು ಎಂದು ಕೇಂದ್ರ ಕಾನೂನು ಸಚಿವಾಲಯವು ಸ್ಪಷ್ಟಪಡಿಸಿದೆ.

ಆದಾಗ್ಯೂ ತನ್ನ ಶನಿವಾರದ ಹೇಳಿಕೆಯಲ್ಲಿ ಸಚಿವಾಲಯವು,ಅಂದು ಚಂದ್ರ ಅವರು ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ ಮತ್ತು ಅನೂಪ್ ಚಂದ್ರ ಅವರೊಂದಿಗೆ ‘ಅನೌಪಚಾರಿಕ ಸಂವಾದ’ದಲ್ಲಿ ಭಾಗವಹಿಸಿದ್ದರು ಎಂದು ಒಪ್ಪಿಕೊಂಡಿದೆ.

ಕಳೆದ ತಿಂಗಳು ಪ್ರಧಾನಿ ಕಚೇರಿ ಜೊತೆಗೆ ಸಭೆಗೆ ಆಕ್ಷೇಪಗಳನ್ನು ವ್ಯಕ್ತಪಡಿಸಿದ್ದರೂ ಚಂದ್ರ ಮತ್ತು ಇತರ ಇಬ್ಬರು ಚುನಾವಣಾ ಆಯುಕ್ತರು ಅದರಲ್ಲಿ ಭಾಗವಹಿಸಿದ್ದರು ಎಂದು ಶುಕ್ರವಾರ ಮಾಧ್ಯಮಗಳು ಬಹಿರಂಗಗೊಳಿಸಿದ್ದವು.

ಚುನಾವಣಾ ಆಯೋಗವು ಸ್ವತಂತ್ರವಾಗಿ ಕಾರ್ಯ ನಿರ್ವಹಿಸುವ ಸಾಂವಿಧಾನಿಕ ಸಂಸ್ಥೆಯಾಗಿರುವುದರಿಂದ ಮತ್ತು ಮೂವರು ಆಯುಕ್ತರು ಸರಕಾರದಿಂದ ಅಂತರವನ್ನು ಕಾಯ್ದುಕೊಳ್ಳುವುದರಿಂದ ಪ್ರಧಾನಿ ಕಚೇರಿ ಜೊತೆಗಿನ ಸಭೆಯು ವಿವಾದವನ್ನು ಹುಟ್ಟುಹಾಕಿತ್ತು. ಯಾವುದೇ ಬಾಹ್ಯ ಒತ್ತಡವನ್ನು ನಿವಾರಿಸಲು ಚುನಾವಣಾ ಆಯೋಗವು ಕಾರ್ಯಾಂಗದಿಂದ ಸಾಕಷ್ಟು ಅಂತರವನ್ನು ಕಾಯ್ದುಕೊಳ್ಳುತ್ತದೆ.

ಚುನಾವಣೆಗಳಿಗೆ ಸಂಬಂಧಿಸಿದಂತೆ ಸರಕಾರದೊಂದಿಗೆ ಆಯೋಗದ ಚರ್ಚೆಗಳು ಸಾಮಾನ್ಯವಾಗಿ ಕಾನೂನು ಸಚಿವಾಲಯ ಮತ್ತು ಮತದಾನದ ದಿನಗಳಲ್ಲಿ ಭದ್ರತೆಗೆ ಸಂಬಂಧಿಸಿದಂತೆ ಗೃಹ ಸಚಿವಾಲಯದೊಂದಿಗೆ ಮಾತ್ರ ಸೀಮಿತವಾಗಿವೆ. ಶಿಷ್ಟಾಚಾರದನ್ವಯ ಅಗತ್ಯವಾದರೆ ಸರಕಾರದ ಅಧಿಕಾರಿಗಳು ಮೂವರು ಚುನಾವಣಾ ಆಯುಕ್ತರೊಂದಿಗೆ ಸಭೆಗಳನ್ನು ಏರ್ಪಡಿಸುತ್ತಾರಾದರೂ ಚುನಾವಣಾ ಆಯುಕ್ತರು ಆಡಳಿತದ ಅಧಿಕಾರಿಗಳೊಂದಿಗೆ ಸಭೆಗಳಲ್ಲಿ ಅಥವಾ ಚರ್ಚೆಗಳಲ್ಲಿ ಪಾಲ್ಗೊಳ್ಳುವುದಿಲ್ಲ.

ಸಭೆಯ ಕುರಿತು ಚಂದ್ರ ತನ್ನ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು ಎಂದೂ ಕಾನೂನು ಸಚಿವಾಲಯವು ತನ್ನ ಹೇಳಿಕೆಯಲ್ಲಿ ಒಪ್ಪಿಕೊಂಡಿದೆ.
ಆಯೋಗದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು,ಆದರೆ ಮತದಾರರ ಪಟ್ಟಿಯ ಪರಿಷ್ಕರಣೆಗೆ ಅರ್ಹತಾ ದಿನಾಂಕಗಳು ಮತ್ತು ಆಧಾರ್ ಜೋಡಣೆ ಸೇರಿದಂತೆ ಕೆಲವು ವಿಷಯಗಳಲ್ಲಿ ಇನ್ನಷ್ಟು ವಿಶದೀಕರಣ ಅಗತ್ಯವಾಗಿತ್ತು. ಹೀಗಾಗಿ ಅಧಿಕೃತ ಸಭೆಯ ಬಳಿಕ ಮುಖ್ಯ ಚುನಾವನಾ ಆಯುಕ್ತರು ಮತ್ತು ಇಬ್ಬರು ಚುನಾವಣಾ ಆಯುಕ್ತರೊಂದಿಗೆ ಒಟ್ಟಾಗಿ ವರ್ಚುವಲ್ ರೂಪದಲ್ಲಿ ಪ್ರತ್ಯೇಕ ಅನೌಪಚಾರಿಕ ಸಂವಾದವನ್ನು ನಡೆಸಲಾಗಿತ್ತು ಎಂದು ಸಚಿವಾಲಯವು ಹೇಳಿಕೆಯಲ್ಲಿ ವಿವರಿಸಿದೆ.

ಮುಖ್ಯ ಚುನಾವಣಾ ಆಯುಕ್ತರು ಮತ್ತು ಇಬ್ಬರು ಆಯುಕ್ತರು ಪ್ರಧಾನಿ ಕಚೇರಿ ಜೊತೆಗಿನ ಸಭೆಯಲ್ಲಿ ಭಾಗವಹಿಸಿದ್ದರು ಎನ್ನುವುದು ಬಹಿರಂಗಗೊಂಡ ಬಳಿಕ ಶುಕ್ರವಾರ ಪ್ರತಿಪಕ್ಷ ನಾಯಕರು ಚುನಾವಣಾ ಆಯೋಗದ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿದ್ದರು. ಕಾಂಗ್ರೆಸ್ ಸಂಸದ ಮನೀಷ ತಿವಾರಿಯವರು ಲೋಕಸಭೆಯಲ್ಲಿ ಈ ವಿಷಯದಲ್ಲಿ ನಿಲುವಳಿ ಸೂಚನೆಯನ್ನು ಮಂಡಿಸಿದ್ದರು. ಇದು ಸ್ವೀಕಾರಾರ್ಹ ನಡೆಯಲ್ಲ ಎಂದು ಕನಿಷ್ಠ ಐವರು ಮಾಜಿ ಮುಖ್ಯ ಚುನಾವಣಾ ಆಯುಕ್ತರು ಅಭಿಪ್ರಾಯ ವ್ಯಕ್ತಪಡಿಸಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X