Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಸೀಂ ರಿಝ್ವಿಯನ್ನು ಅನುಸರಿಸಿ 34 ಮಂದಿ...

ವಸೀಂ ರಿಝ್ವಿಯನ್ನು ಅನುಸರಿಸಿ 34 ಮಂದಿ ಮುಸ್ಲಿಮರು ಹಿಂದೂ ಧರ್ಮಕ್ಕೆ ಮತಾಂತರ ಎಂಬ ಸುದ್ದಿಯ ಸತ್ಯಾಂಶವೇನು?

ವಾರ್ತಾಭಾರತಿವಾರ್ತಾಭಾರತಿ22 Dec 2021 1:18 PM IST
share
ವಸೀಂ ರಿಝ್ವಿಯನ್ನು ಅನುಸರಿಸಿ 34 ಮಂದಿ ಮುಸ್ಲಿಮರು ಹಿಂದೂ ಧರ್ಮಕ್ಕೆ ಮತಾಂತರ ಎಂಬ ಸುದ್ದಿಯ ಸತ್ಯಾಂಶವೇನು?

ಹೊಸದಿಲ್ಲಿ:  ಕೇಸರಿ ವಸ್ತ್ರಧಾರಿ ವ್ಯಕ್ತಿಯೊಬ್ಬನ ಸುತ್ತ ಮುಸ್ಲಿಂ ಸಮುದಾಯದ ಜನರ ಒಂದು ಗುಂಪು ನಿಂತಿರುವ ಒಂದು ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಉತ್ತರ ಪ್ರದೇಶದ ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ಸಯ್ಯದ್ ವಸೀಂ ರಿಝ್ವಿ ಅವರ ಹಾದಿಯಲ್ಲಿ ನಡೆದು 34 ಮುಸ್ಲಿಂ ಕುಟುಂಬಗಳು ಮತಾಂತರಗೊಂಡಿವೆ ಎಂಬ ವಿವರಣೆಯನ್ನೂ ಈ ಫೋಟೋ ಜತೆಗೆ ನೀಡಲಾಗಿದೆ. ಆದರೆ ಇದು ಸುಳ್ಳು ಸುದ್ದಿಯಾಗಿದೆ ಎಂದು altnews.in ತನ್ನ ಸತ್ಯಶೋಧನಾ ವರದಿಯಲ್ಲಿ ತಿಳಿಸಿದೆ.

"ವಸೀಂ ರಿಝ್ವಿ ಅವರು ಹಿಂದು ಧರ್ಮಕ್ಕೆ ಮತಾಂತರಗೊಂಡ ನಂತರ ಮುಸ್ಲಿಮರು ಭಯ ಹೊಂದಿಲ್ಲ ಹಾಗೂ ಹಿಂದು ಧರ್ಮಕ್ಕೆ ಸ್ವಯಂಪ್ರೇರಿತರಾಗಿ ಮತಾಂತರಗೊಳ್ಳುತ್ತಿದ್ದಾರೆ. ಉತ್ತರ ಪ್ರದೇಶದ 34 ಕುಟುಂಬಗಳ ಸನಾತನ ಹಿಂದು ಧರ್ಮಕ್ಕೆ ಮತಾಂತರಗೊಂಡವು" ಎಂದು ಫೇಸ್ಬುಕ್ ಮತ್ತು ಟ್ವಿಟ್ಟರ್‍ನಲ್ಲಿ ಹರಿದಾಡುತ್ತಿರುವ ಚಿತ್ರದ ಜತೆಗೆ ಬರೆಯಲಾಗಿದೆ.

ರಿಝ್ವಿ ಅವರು ಡಿಸೆಂಬರ್ 6ರಂದು ಹಿಂದು ಧರ್ಮಕ್ಕೆ ಮತಾಂತರಗೊಂಡು ತಾವು ಇನ್ನು ಮುಂದೆ ಜಿತೇಂದ್ರ ನಾರಾಯಣ್ ಸಿಂಗ್ ತ್ಯಾಗಿ ಎಂಬ ಹೆಸರು ಹೊಂದುವುದಾಗಿ ತಿಳಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಆದರೆ ಈಗ ವೈರಲ್ ಆಗಿರುವ ಚಿತ್ರ ಇತ್ತೀಚಿನದ್ದಲ್ಲ ಬದಲು 2016ರದ್ದಾಗಿದೆ ಹಾಗೂ  ಉರಿಯಲ್ಲಿ ಭಾರತದ ಸೇನಾ ನೆಲೆಯ ಮೇಲೆ ನಡೆದ ದಾಳಿಯನ್ನು ಖಂಡಿಸಿ ಮಥುರಾದ ಶಾಹಿ ಜಮಾ ಮಸೀದಿಯಲ್ಲಿ ನಡೆದ ಪ್ರತಿಭಟನೆಯ ಚಿತ್ರವಾಗಿದೆ ಎಂಬುದು ಚಿತ್ರದ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ ತಿಳಿದು ಬಂದಿತ್ತು.

ಈ ಚಿತ್ರಕ್ಕೆ ಸಂಬಂಧಿಸಿದ ವರದಿ ಅಮರ್ ಉಜಾಲದಲ್ಲಿ ಪ್ರಕಟವಾಗಿತ್ತು ಹಾಗೂ ಉರಿ ದಾಳಿಯನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಇಮಾಮ್ ಮೊಹಮ್ಮದ್ ಉಮರ್ ಖಾದ್ರಿ ಹಾಗೂ ಮಹಾಮಂಡಲೇಶ್ವರ್ ನವಲ್ ಗಿರಿ ಭಾಗವಹಿಸಿದ್ದರು ಮತ್ತು ಎರಡೂ ಧರ್ಮಗಳ ಜನರು ಉಗ್ರವಾದದ ವಿರುದ್ಧದ ಹೋರಾಟದಲ್ಲಿ ಜತೆಯಾಗಿದ್ದಾರೆ ಎಂದು ಬರೆಯಲಾಗಿತ್ತು. ಇದೇ ಪ್ರತಿಭಟನೆಯ ಸಣ್ಣ ವೀಡಿಯೋ ಕ್ಲಿಪ್ ಕೂಡ ಅಮರ್ ಉಜಾಲ ವೆಬ್‍ಸೈಟ್‍ನಲ್ಲಿದೆ.

ವರದಿ ಕೃಪೆ: Altnews.in

share
ವಾರ್ತಾಭಾರತಿ
ವಾರ್ತಾಭಾರತಿ
Next Story
X