Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿಕ್ಷಣ ವ್ಯವಸ್ಥೆಯ ಅಮೂಲಾಗ್ರ ಬದಲಾವಣೆ...

ಶಿಕ್ಷಣ ವ್ಯವಸ್ಥೆಯ ಅಮೂಲಾಗ್ರ ಬದಲಾವಣೆ ವಿಶ್ವವಿದ್ಯಾಲಯದಿಂದಲೇ ಪ್ರಾರಂಭವಾಗಬೇಕು: ಸಿಎಂ ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ22 Dec 2021 3:32 PM IST
share
ಶಿಕ್ಷಣ ವ್ಯವಸ್ಥೆಯ ಅಮೂಲಾಗ್ರ ಬದಲಾವಣೆ ವಿಶ್ವವಿದ್ಯಾಲಯದಿಂದಲೇ ಪ್ರಾರಂಭವಾಗಬೇಕು: ಸಿಎಂ ಬಸವರಾಜ ಬೊಮ್ಮಾಯಿ

ಬೆಳಗಾವಿ : ಶಿಕ್ಷಣ ವ್ಯವಸ್ಥೆಯ ಅಮೂಲಾಗ್ರ ಬದಲಾವಣೆ ವಿಶ್ವವಿದ್ಯಾಲಯದಿಂದಲೇ ಪ್ರಾರಂಭವಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬೆಳಗಾವಿಯ ಹಿರೇಬಾಗೇವಾಡಿ ಮಲ್ಲಪ್ಪನ ಗುಡ್ಡದ ಹೊಸ ನಿವೇಶನದಲ್ಲಿ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಕಟ್ಟಡಗಳ ಭೂಮಿ ಪೂಜೆ ಹಾಗೂ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.

ಇಂದಿನ ಸವಾಲುಗಳ ಹಾಗೂ ಬದಲಾವಣೆಯ ಯುಗದಲ್ಲಿ ಫ್ಲೆಕ್ಸಿಬಲ್ ಆದ ಶಿಕ್ಷಣ ವ್ಯವಸ್ಥೆ ಅತ್ಯಂತ ಅವಶ್ಯಕ. ಪಠ್ಯದಲ್ಲಿರುವ ವಿದ್ಯೆ ಹಾಗೂ ಜಗತ್ತಿನಲ್ಲಿ ಬಳಕೆಯಾಗುತ್ತಿರುವ ವಿದ್ಯೆಯಲ್ಲಿ ಬಹಳಷ್ಟು ಅಂತರ ಇದೆ. ಇವರೆಡರ ನಡುವೆ ಇರುವ ಅಂತರವನ್ನು ಕಡಿಮೆಗೊಳಿಸಲು ಎನ್‍ಇಪಿಯನ್ನು ಜಾರಿಗೊಳಿಸಲಾಗಿದೆ. ಇಂದಿನ ಪೀಳಿಗೆ ಯಾವುದೇ ಸವಾಲುಗಳನ್ನು ಆತ್ಮಸ್ಥೈರ್ಯ, ಧೈರ್ಯದಿಂದ ಎದುರಿಸಲು ಜ್ಞಾನದ ಬಲ ಇರಬೇಕು. ಎನ್‍ಇಪಿ ಈ ಜ್ಞಾನದ ಬಲವನ್ನು ನೀಡುತ್ತದೆ ಎಂದು ತಿಳಿಸಿದರು.

ವಿಶ್ವವಿದ್ಯಾಲಯವನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಒಯ್ಯುವ ಬದ್ಧತೆ

ಕಿತ್ತೂರು ರಾಣಿ ಚೆನ್ನಮ್ಮ ಆತ್ಮಸ್ಥೈರ್ಯ, ಧೈರ್ಯದಿಂದ ಹೋರಾಡಿದ ಮೊದಲನೆಯ ಮಹಿಳಾ ಸ್ವತಂತ್ರ ಹೋರಾಟಗಾರರಾಗಿ ಬ್ರಿಟಿಷರನ್ನು ಮೆಟ್ಟಿನಿಂತದ್ದು ಈಗ ಇತಿಹಾಸ. ಬ್ರಿಟೀಷರನ್ನು ಹಿಮ್ಮೆಟ್ಟಿಸುವಲ್ಲಿ ಸಂಗೊಳ್ಳಿ ರಾಯಣ್ಣನ ಪಾತ್ರ ಬಹಳ ದೊಡ್ಡದು. ರಾಣಿ ಚೆನ್ನಮ್ಮನೇ ಈ ವಿಶ್ವವಿದ್ಯಾಲಯದ ಸ್ಪೂರ್ತಿ. ಈ ವಿಶ್ವವಿದ್ಯಾಲಯವನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಒಯ್ಯುವ ಬದ್ಧತೆ, ಸ್ಪಷ್ಟತೆ ವಿಶ್ವವಿದ್ಯಾಲಯದ ಪ್ರತಿಯೊಬ್ಬರಿಗೂ ಇರಬೇಕು. ವಿಭಿನ್ನ, ವಿನೂತನ ಪ್ರಯೋಗ ಕಾರ್ಯಕ್ರಮಗಳನ್ನು ರೂಪಿಸಿ, ಸಮಕಾಲೀನ ಸವಾಲುಗಳನ್ನು ಎದುರಿಸುವ ಹಾಗೂ  ವೈಚಾರಿಕತೆಯಿಂದ ಸಮಾಜದಲ್ಲಿನ ಸಮಸ್ಯೆಗಳನ್ನು ನಿವಾರಿಸುವ ಕೇಂದ್ರಗಳಾಗಬೇಕು. ಕೇವಲ ಡಿಗ್ರಿ ಪಡೆಯಲು ಸೀಮಿತವಾಗಿರಬಾರದು.  ಆಧುನಿಕ ತಂತ್ರಜ್ಞಾನ ಹಾಗೂ ಜ್ಞಾನ ಕ್ಷೇತ್ರದಲ್ಲಿನ ಬದಲಾವಣೆ ಹಾಗೂ ಬೆಳವಣಿಗೆಯ ವೇಗಕ್ಕೆ ಸರಿಸಮಾನವಾದ ಚಿಂತನೆಯನ್ನು ವಿಶ್ವವಿದ್ಯಾಲಯಗಳು ಮಾಡಬೇಕು. ಅವಿಷ್ಕಾರಗಳನ್ನು ಮಾಡುವ ಕೇಂದ್ರವಾಗಬೇಕು. ಸಂಶೋಧನೆಗಳಲ್ಲಿ  ಸ್ವಂತಿಕೆ, ಹೊಸತನ ಹಾಗೂ ವಿಭಿನ್ನತೆ ಇರಬೇಕು ಎಂದು ತಿಳಿಸಿದರು.

ತರ್ಕಬದ್ಧ ಚಿಂತನೆಗೆ ಅವಕಾಶ

ವಿಶ್ವವಿದ್ಯಾಲಯಗಳು ತರ್ಕಬದ್ಧ  ಹಾಗೂ ಲ್ಯಾಟರಲ್ ಚಿಂತನೆಗೆ ಅವಕಾಶ ನೀಡುವ ಜ್ಞಾನದ ಕೇಂದ್ರವಾಗಬೇಕು. ವಿದ್ಯಾರ್ಜನೆಗೆ ಪೂರಕವಾದ ಪರಿಸರ ವಿಶ್ವವಿದ್ಯಾಲಯದಲ್ಲಿ ದೊರೆಯಬೇಕು. ವಿಶ್ವವಿದ್ಯಾಲಯದಲ್ಲಿರುವವರು ತಮ್ಮ ಸೀಮಿತ ಪ್ರಪಂಚದಿಂದ ಹೊರಗೆ ಬರಬೇಕು. ಸಂಶೋಧನೆಗಳನ್ನು ಸಮರ್ಥಿಸಿಕೊಳ್ಳದೇ  ಉಳಿದವರು ಅದರ ಉಪಯುಕ್ತತೆಯನ್ನು ನಿರ್ಧರಿಸಲಿ. ವಿಶ್ವವಿದ್ಯಾಲಯಗಳಿಗೆ ಕುಲಪತಿಗಳೇ ಮುಂದಾಳತ್ವ ವಹಿಸುವ ನಾಯಕ. ಅವರು ಇತರರಿಗೆ ಉದಾಹರಣೆಯಾಗಬೇಕು. ಮಾರ್ಗದರ್ಶನ ತೋರಬೇಕು. ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆಯನ್ನು ತರಲು ಸರ್ಕಾರ ಬೆಂಬಲಕ್ಕೆ ನಿಲ್ಲುತ್ತದೆ. ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ನನ್ನ ಹೃದಯಕ್ಕೆ ಬಹಳ ಹತ್ತಿರವಾದದ್ದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ವಿಶ್ವವಿದ್ಯಾಲಯ ಜಗತ್ತಿಗೆ ಜ್ಞಾನದ ಸಂಪರ್ಕ ಕೊಂಡಿ

ವಿಶ್ವವಿದ್ಯಾಲಯಕ್ಕೆ ಸುಂದರ ಪರಿಸರ, ರಸ್ತೆ, ಮೂಲಸೌಕರ್ಯಗಳನ್ನು ಒಳಗೊಂಡ ಕಟ್ಟಡವನ್ನು ಒಂದು ವರ್ಷದಲ್ಲಿ ಮುಗಿಸುವ ಕೆಲಸವನ್ನು ಸರ್ಕಾರ ಮಾಡಲಿದೆ. ಕಟ್ಟಡದ ಪ್ರತಿಯೊಂದು ಕೊಠಡಿಯು ಡಿಜಿಟಲೈಸ್ ಆಗಬೇಕು. ಜಗತ್ತಿಗೆ ಜ್ಞಾನದ ಸಂಪರ್ಕ ಕೊಂಡಿಯಂತಿರಬೇಕು. ಇದು ಜ್ಞಾನದ ಶತಮಾನ. ಜ್ಞಾನ ಇದ್ದವರು ಜಗತ್ತನ್ನು ಆಳುತ್ತಾರೆ. ವಿಶ್ವವಿದ್ಯಾಲಯಗಳ ಸಂಶೋಧನೆಯನ್ನು ಇಡೀ ವಿಶ್ವ ಒಪ್ಪಿಕೊಂಡರೆ ಅದರ ಉಪಯುಕ್ತತೆ ಹೆಚ್ಚುತ್ತದೆ. ವಿಶ್ವವಿದ್ಯಾಲಯದಲ್ಲಿ ಕಳೆದ 10 ವರ್ಷದಲ್ಲಿ ಕೈಗೊಂಡಿರುವ ಪಿಎಚ್‍ಡಿ ಸಂಶೋಧನೆ ಹಾಗೂ ಅದರ ಉಪಯುಕ್ತತೆ ಬಗ್ಗೆ ವಿಶ್ಲೇಷಣೆಯನ್ನು ಕೈಗೊಳ್ಳಲು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಸಲಹೆ ನೀಡಿದರು.

ಈ ಸಂದರ್ಭ ಉನ್ನತ ಶಿಕ್ಷಣ ಸಚಿವರಾದ ಡಾ. ಸಿಎಂ ಅಶ್ವಥ್ ನಾರಾಯಣ,  ಶಶಿಕಲಾ ಜೊಲ್ಲೆ, ಶಾಸಕರಾದ ಲಕ್ಷ್ಮಿ ಹೆಬ್ಬಾಳ್ಕರ್ ಮಹಾಂತೇಶ ಕವಟಗಿಮಠ, ಅರುಣ ಶಾಹಪೂರ, ಹನಮಂತ ನಿರಾಣಿ, ಚನ್ನರಾಜ ಹಟ್ಟಿಹೊಳಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X