ಮೇವಿ ಮಿರಾಂದಗೆ ಪಿಹೆಚ್ಡಿ ಪದವಿ

ಉಡುಪಿ, ಡಿ.22: ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಾಣಿಜ್ಯ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಮೇವಿ ಮಿರಾಂದ ಅವರು ತುಮಿಳುನಾಡಿನ ಭಾರತಿಯಾರ್ ವಿಶ್ವವಿದ್ಯಾನಿಲಯಕ್ಕೆ ಸಲ್ಲಿಸಿರುವ ‘ಸ್ಟ್ರೆಸ್ ಮ್ಯಾನೇಜ್ಮೆಂಟ್ ಎಮಂಗ್ ವುಮೆನ್ ಎಂಪ್ಲಾಯೀಸ್ ಆಫ್ ಪಬ್ಲಿಕ್ ಸೆಕ್ಟರ್ ಇನ್ಶೂರೆನ್ಸ್ ಕಂಪೆನೀಸ್: ಎ ಸ್ಟಡೀ ವಿಥ್ ರೆಫರೆನ್ಸ್ ಟು ಕೋಸ್ಟಲ್ ಕರ್ನಾಟಕ’ ಎಂಬ ಮಹಾ ಪ್ರಬಂಧಕ್ಕೆ ಪಿಹೆಚ್ಡಿ ಪದವಿ ಪಡೆದಿದ್ದಾರೆ.
ಮೇವಿ ಮಿರಾಂದ ಅವರು ಉಡುಪಿ ಡಾ.ಜಿ.ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ಪ್ರಾಧ್ಯಾಪಕ ಡಾ. ಉಮೇಶ್ ಮಯ್ಯ ಅವರ ಮಾರ್ಗದರ್ಶನದಲ್ಲಿ ಪ್ರಬಂಧವನ್ನು ಸಿದ್ಧಪಡಿಸಿದ್ದರು.
ಮಂಗಳೂರು ವಿವಿ ಯಿಂದ ಎಂ.ಕಾಂ. ಪದವಿ ಹಾಗೂ ಅಣ್ಣಾಮಲೈ ವಿಶ್ವವಿದ್ಯಾನಿಲಯದಿಂದ ಎಂ.ಫಿಲ್ ಪದವಿಯನ್ನು ಪಡೆದಿದ್ದರು. ಭಟ್ಕಳದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಉಪನ್ಯಾಸಕ ಸೇವೆಯನ್ನು ಪ್ರಾರಂಭಿಸಿ ಪ್ರಸ್ತುತ ತೆಂಕ ನಿಡಿಯೂರು ಕಾಲೇಜಿನ ವಾಣಿಜ್ಯಶಾಸ್ತ್ರ ಸ್ನಾತಕೋತ್ತರ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.





