Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಸ್ಸು ಮಾಲಕರ ಸಂಘ ನೀಡಿದ್ದ ಅಂಗಿ...

ಬಸ್ಸು ಮಾಲಕರ ಸಂಘ ನೀಡಿದ್ದ ಅಂಗಿ ಧರಿಸಿಯೇ ಪದ್ಮಶ್ರೀ ಪ್ರಶಸ್ತಿ ಪಡೆಯಲು ತೆರಳಿದ್ದೆ: ಹರೇಕಳ ಹಾಜಬ್ಬ

ಪೂರ್ವ ವಲಯ ಬಸ್ ಮಾಲಕರ ಒಕ್ಕೂಟದಿಂದ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ22 Dec 2021 8:26 PM IST
share
ಬಸ್ಸು ಮಾಲಕರ ಸಂಘ ನೀಡಿದ್ದ ಅಂಗಿ ಧರಿಸಿಯೇ ಪದ್ಮಶ್ರೀ ಪ್ರಶಸ್ತಿ ಪಡೆಯಲು ತೆರಳಿದ್ದೆ: ಹರೇಕಳ ಹಾಜಬ್ಬ

ಮಂಗಳೂರು, ಡಿ. 22: ವರ್ಷದ ಹಿಂದೆ ದ.ಕ. ಜಿಲ್ಲಾ ಬಸ್ ಮಾಲಕರ ಸಂಘದವರು ನನ್ನನ್ನು ಸನ್ಮಾನಿಸಿ ಎರಡು ಅಂಗಿಗೆ ಬೇಕಾದ ವಸ್ತ್ರ, ಒಂದು ಲಕ್ಷ ರೂ. ಮತ್ತು ಒಂದು ಚೀಲ ಕೊಟ್ಟಿದ್ದರು. ಮೊನ್ನೆ ರಾಷ್ಟ್ರಪತಿಯವರಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಲು ಅದೇ ವಸ್ತ್ರವನ್ನು ಹೊಲಿಸಿ ಹಾಕಿ ತೆರಳಿದ್ದೆ ಎಂದು ಹರೇಕಳ ಹಾಜಬ್ಬ ಹೇಳಿದ್ದಾರೆ.

ಪೂರ್ವ ವಲಯ ಬಸ್ ಮಾಲಕರ ಒಕ್ಕೂಟ ವತಿಯಿಂದ ನಗರದ ಖಾಸಗಿ ಹೊಟೇಲ್‌ನಲ್ಲಿ ನಡೆದ ಸನ್ಮಾನ ಸ್ವೀಕರಿಸಿ ಅವರು ಮಾತನಾಡುತ್ತಿದ್ದರು.

ನನ್ನ ಜೀವನದ ಹೆಚ್ಚಿನ ದಿನಗಳನ್ನು ಬಸ್ ನಿಲ್ದಾಣದಲ್ಲೇ ಕಳೆದಿದ್ದೆ. ಈ ವೇಳೆ ಹಲವು ಬಸ್ ಮಾಲಕರು ನನ್ನಿಂದ ಕಿತ್ತಳೆ ಹಣ್ಣು ಖರೀದಿಸಿ ನೆರವಾಗಿದ್ದರು. ನಮ್ಮೂರಿಗೆ ತೆರಳುವ ಯಾವುದೇ ಬಸ್ಸಿನ ನಿರ್ವಾಹಕರು ನನ್ನಿಂದ ಟಿಕೆಟ್ ಹಣವನ್ನು ಕೂಡ ಪಡೆದಿಲ್ಲ ಎಂದು ಹರೇಕಳ ಹಾಜಬ್ಬ ಹೇಳಿದರು.

ಪತ್ರಕರ್ತ ಗುರುವಪ್ಪ ಬಾಳೇಪುಣಿ ಮಾತನಾಡಿ ಅತ್ಯಂತ ಸರಳ ಸಜ್ಜನಿಕೆ ವ್ಯಕ್ತಿತ್ವದ, ವಿಶಾಲ ಮನೋಭಾವದ ಹರೇಕಳ ಹಾಜಬ್ಬ ಇಂದು ಸ್ಥಳೀಯ ಮಾಧ್ಯಮದಿಂದ ಹಿಡಿದು ಅಂತಾರಾಷ್ಟ್ರೀಯ ಮಾಧ್ಯಮದಲ್ಲೂ ಮಿಂಚಿದ್ದಾರೆ. ಇದು ತುಳುನಾಡಿಗೆ ಸಂದ ಗೌರವ. ಹಾಜಬ್ಬರ ಬಗ್ಗೆ ಅಧ್ಯಯನ ಮಾಡಿದರೆ ಹಲವು ಪಿಎಚ್‌ಡಿಗಳನ್ನೇ ಮಾಡಬಹುದು. ಅವರ ವ್ಯಕ್ತಿತ್ವ ಅಂತಹದ್ದು ಎಂದು ಬಣ್ಣಿಸಿದರು.

ಪೂರ್ವ ವಲಯ ಬಸ್ ಮಾಲಕರ ಒಕ್ಕೂಟದ ಅಧ್ಯಕ್ಷ ಶೇಷಪ್ಪ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ದ.ಕ ಸಿಟಿ ಬಸ್ ಮಾಲಕರ ಸಂಘದ ಮಾಜಿ ಅಧ್ಯಕ್ಷ ಜಯರಾಮ್ ಶೇಖ, ಕೆನರಾ ಬಸ್ ಮಾಲಕರ ಸಂಘದ ಅಧ್ಯಕ್ಷ ರಾಜ್‌ ವರ್ಮ ಬಳ್ಳಾಲ್, ದ.ಕ. ಸಿಟಿ ಬಸ್ ಮಾಲಕರ ಸಂಘದ ಅಧ್ಯಕ್ಷ ಜಯಶೀಲ ಅಡ್ಯಂತಾಯ ಅತಿಥಿಗಳಾಗಿ ಭಾಗವಹಿಸಿದ್ದರು.

ಪೂರ್ವವಲಯ ಬಸ್ ಮಾಲಕರ ಒಕ್ಕೂಟದ ಉಪಾಧ್ಯಕ್ಷ ಜಯಂತ್, ಪ್ರಧಾನ ಕಾಯದರ್ಶಿ ಅನಿಷ್ ಶೆಟ್ಟಿ, ಕೋಶಾಧಿಕಾರಿ ಅಬ್ದುಲ್ ಮಜೀದ್, ಕಾರ್ಯದರ್ಶಿ ಅವೀನ್, ದ.ಕ ಸಿಟಿ ಬಸ್ ಮಾಲಕರ ಸಂಘದ ಉಪಾಧ್ಯಕ್ಷ ಗಣೇಶ್ ಶೆಟ್ಟಿ, ಮಾಜಿ ಅಧ್ಯಕ್ಷ ಅಬ್ದುಲ್ ಅಝೀಝ್ ಪರ್ತಿಪ್ಪಾಡಿ ಉಪಸ್ಥಿತರಿದರು. ಮನೋಜ್ ವಾಮಂಜೂರು ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X