Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ​ಮದ್ಯದ ಉತ್ಪಾದನೆ ಮತ್ತು ಮದ್ಯವರ್ಜನೆ

​ಮದ್ಯದ ಉತ್ಪಾದನೆ ಮತ್ತು ಮದ್ಯವರ್ಜನೆ

ವಾರ್ತಾಭಾರತಿವಾರ್ತಾಭಾರತಿ22 Dec 2021 11:31 PM IST
share

ಮಾನ್ಯರೇ,

ಮದ್ಯಸೇವನೆಯಿಂದ ಜನರಮೇಲಾಗುವ, ಅದರಲ್ಲೂ ಬಡಜನರಮೇಲಾಗುವ ದುಷ್ಪರಿಣಾಮಗಳನ್ನು ಕುರಿತಂತೆ ಪತ್ರಿಕೆಗಳಲ್ಲಿ ಲೇಖನಗಳು ಬರದಿದ್ದರೂ, ಮದ್ಯವರ್ಜನೆಗಾಗಿ ಪ್ರತಿಷ್ಠಿತ ಸಮಾಜಸೇವಾ ಸಂಸ್ಥೆಗಳು ಮಾಡಿದ 'ಸಾಧನೆಗಳ' ಬಗ್ಗೆ ಆಗಿಂದಾಗ್ಗೆ ವರದಿಗಳು ಪ್ರಕಟವಾಗುತ್ತಲೇ ಇರುತ್ತವೆ. ಮದ್ಯಸೇವನೆಯು ವ್ಯಸನಿಗಳ ಆರೋಗ್ಯ ಹಾಗೂ ಜೀವಕ್ಕೆ ಕುಂದು ತರುವಂತೆಯೇ ಮದ್ಯ ವ್ಯಸನಿಗಳ ಕುಟುಂಬಗಳ ಆರ್ಥಿಕತೆಯನ್ನು ನಿರಂತರವಾಗಿ ಧ್ವಂಸಮಾಡುತ್ತಲೇ ಇರುತ್ತದೆ. ಹೀಗಿದ್ದರೂ ಸಮಾಜಸೇವೆಯಲ್ಲಿ ತೊಡಗಿರುವ ವ್ಯಕ್ತಿಗಳು ಮತ್ತು ಪ್ರತಿಷ್ಠಿತ ಸಂಸ್ಥೆಗಳು ಮದ್ಯಸೇವನೆಯನ್ನು ಬಿಡಬೇಕೆಂದು ವ್ಯಸನಿಗಳಿಗೆ ಉಪದೇಶಿಸುತ್ತಾರೆಯೇ ಹೊರತು ಮದ್ಯದ ಉತ್ಪಾದನೆಯನ್ನೇ ರದ್ದುಮಾಡಬೇಕೆಂದು ಯಾರೊಬ್ಬರೂ ಆಗ್ರಹಿಸುವುದಿಲ್ಲ. ಸರಕಾರಗಳ ಮೇಲೆ ಒತ್ತಡ ತರುವುದಿಲ್ಲ. ಚಿತ್ರದುರ್ಗದ ಸಮೀಪದ ಹಳ್ಳಿಗಳಿಂದ ಮದ್ಯವ್ಯಸನಿಗಳ ಕುಟುಂಬಗಳ ಸಂತ್ರಸ್ತ ಮಹಿಳೆಯರು ಕಾಲ್ನಡಿಗೆಯಲ್ಲಿ ಬೆಂಗಳೂರಿಗೆ ಜಾಥಾ ನಡೆಸಿ ಮುಖ್ಯಮಂತ್ರಿಗಳಿಂದ ಯಾವ ಸಹಾಯವೂ ಸಿಗದೆ ಅಸಹಾಯಕರಾಗಿ ವಾಪಸಾದಾಗ ಮದ್ಯವರ್ಜನೆಯ ಪ್ರಚಾರ ಪಡೆಯುವ ಯಾರೂ, ಯಾವ ಸಮಾಜಸೇವಾಕ ಸಂಸ್ಥೆಯೂ ತುಟಿ ಬಿಚ್ಚಲಿಲ್ಲ.

ಮದ್ಯದ ಉದ್ಯಮವನ್ನೇ ರದ್ದುಮಾಡಿದರೆ, ಲಕ್ಷಾಂತರ ಬಡ ಕುಟುಂಬಗಳ ಹೆಂಗಸರು-ಮಕ್ಕಳ ನಿತ್ಯಕಷ್ಟಗಳು ಗಣನೀಯವಾಗಿ ಕಡಿಮೆಯಾಗುತ್ತವೆ. ಮದ್ಯದ ಉದ್ಯಮಿಗಳ ಅನೈತಿಕ ಶ್ರೀಮಂತಿಕೆ, ಅಧಿಕಾರಿಗಳ ಲಂಚಾದಾಯ, ಸರಕಾರಗಳ ಜನವಿರೋಧಿ ತೆರಿಗೆಹಣಕ್ಕೆ ಸಂಚಕಾರ ಬರುವುದಲ್ಲದೆ ಕಪ್ಪುಹಣದ ಸಂಗ್ರಹವನ್ನು ಕೆಲಮಟ್ಟಿಗಾದರೂ ನಿಯಂತ್ರಿಸಿದಂತಾಗುತ್ತದೆ. ಇದಲ್ಲದೆ, ಮದ್ಯ ಸಂಬಂಧಿ ಅಪರಾಧ, ಅಪಘಾತ, ದುರ್ಮರಣ ಮತ್ತು ಆರೋಗ್ಯ ಸಮಸ್ಯೆಗಳು ಇಳಿಮುಖವಾಗುತ್ತವೆ ಎಂಬುದು ಎಲ್ಲಾ ಸರಕಾರಗಳಿಗೂ, ಆಡಳಿತಗಾರರಿಗೂ, ಸಮಾಜಸೇವಾ ಸಂಸ್ಥೆಗಳಿಗೂ ಗೊತ್ತಿರುವ ಸಂಗತಿಯೇ. ಹೀಗಿದ್ದರೂ ಮದ್ಯದ ತಯಾರಿಕೆಯನ್ನೇ ರದ್ದುಮಾಡಲು ತಮ್ಮ ಎಲ್ಲಾ ಶಕ್ತಿಯನ್ನೂ ಬಳಸದೆ, ಕೇವಲ ಬಡಜನರಿಗೆ ಮದ್ಯಸೇವನೆಯನ್ನು ಬಿಡಿ ಎಂದು ಉಪದೇಶಿಸುವುದು ವ್ಯಕ್ತಿಗಳಿಗಾಗಲಿ, ಸಂಸ್ಥೆಗಳಿಗಾಗಲಿ ಕೇವಲ ಬಳಸುರೀತಿಗಳಲ್ಲಿ ತಮ್ಮ ಆದಾಯವನ್ನು ಹೆಚ್ಚಿಸಿಕೊಳ್ಳುವ ಪ್ರಚಾರದ ಸಾಧನವಾಗುತ್ತದೆಯೇ ಹೊರತು ಮತ್ತೇನೂ ಅಲ್ಲ.
-ವಿ.ಎನ್. ಲಕ್ಷ್ಮೀನಾರಾಯಣ, ಮೈಸೂರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X