Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಬಿಜೆಪಿ ನೇತೃತ್ವದ ಕೇಂದ್ರ...

"ಬಿಜೆಪಿ ನೇತೃತ್ವದ ಕೇಂದ್ರ ಸರಕಾರದಡಿಯಲ್ಲಿ ಇದುವರೆಗೆ 570 ವಿರೋಧಿಗಳನ್ನು ತನಿಖಾ ಏಜನ್ಸಿಗಳು ಟಾರ್ಗೆಟ್ ಮಾಡಿವೆ"

Ndtv.com ವಿಶ್ಲೇಷಣಾ ವರದಿ

ವಾರ್ತಾಭಾರತಿವಾರ್ತಾಭಾರತಿ23 Dec 2021 3:37 PM IST
share
ಬಿಜೆಪಿ ನೇತೃತ್ವದ ಕೇಂದ್ರ ಸರಕಾರದಡಿಯಲ್ಲಿ ಇದುವರೆಗೆ 570 ವಿರೋಧಿಗಳನ್ನು ತನಿಖಾ ಏಜನ್ಸಿಗಳು ಟಾರ್ಗೆಟ್ ಮಾಡಿವೆ

ಹೊಸದಿಲ್ಲಿ: ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರಕಾರ 2014ರಲ್ಲಿ ಆಡಳಿತಕ್ಕೆ ಬಂದಾಗಿನಿಂದ ಪಕ್ಷದ ಎದುರಾಳಿಗಳ ಹಾಗೂ ಟೀಕಾಕಾರರ ವಿರುದ್ಧ ಕೇಂದ್ರ ತನಿಖಾ ಏಜನ್ಸಿಗಳು ಕೈಗೊಂಡ ಕ್ರಮಗಳ ಸಂಖ್ಯೆಯಲ್ಲೂ ಏರಿಕೆಯಾಗಿದೆ ಎಂದು ಎನ್‍ಡಿಟಿವಿ ನಡೆಸಿದ ವಿಶ್ಲೇಷಣೆಯಿಂದ ತಿಳಿದು ಬಂದಿದೆ.  

2014ರಿಂದ ಕೇಂದ್ರ ತನಿಖಾ ಏಜನ್ಸಿಗಳು  570 ಮಂದಿ ಸರಕಾರದ ವಿರೋಧಿಗಳು ಮತ್ತು ಟೀಕಾಕಾರರನ್ನು ಟಾರ್ಗೆಟ್ ಮಾಡಿದೆ ಹಾಗೂ ಕೆಲ ಪ್ರಕರಣಗಳಲ್ಲಿ ಸಂಬಂಧಿತರ ಕುಟುಂಬ ಸದಸ್ಯರನ್ನೂ ಟಾರ್ಗೆಟ್ ಮಾಡಿದೆ ಎಂದು ಸುದ್ದಿ ಸಂಸ್ಥೆ ಕಂಡುಕೊಂಡಿದೆ. ತದ್ವಿರುದ್ಧವೆಂಬಂತೆ 2014ರಿಂದೀಚೆಗೆ ಬಿಜೆಪಿಗೆ ನಂಟು ಹೊಂದಿರುವ ಕೇವಲ 39 ಮಂದಿಯ ವಿರುದ್ಧ ಸಿಬಿಐ, ಅಥವಾ ಜಾರಿ ನಿರ್ದೇಶನಾಲಯ ಅಥವಾ ಆದಾಯ ತೆರಿಗೆ ಇಲಾಖೆಯಿಂದ ಕ್ರಮಕ್ಕೆ ಒಳಗಾಗಿದ್ದಾರೆಂದು ಎನ್‍ಡಿಟಿವಿ ವಿಶ್ಲೇಷಣೆ ಕಂಡುಕೊಂಡಿದೆ.

ತನಿಖಾ ಏಜನ್ಸಿಗಳು 2014ರಿಂದ ವಿಪಕ್ಷಗಳ 257 ರಾಜಕಾರಣಿಗಳನ್ನು ಟಾರ್ಗೆಟ್ ಮಾಡಿದ್ದರೆ ಈ ರಾಜಕಾರಣಿಗಳ 140 ಮಂದಿ ಸಹವರ್ತಿಗಳು ಹಾಗೂ ಸಂಬಂಧಿಕರನ್ನೂ ಟಾರ್ಗೆಟ್ ಮಾಡಲಾಗಿದೆ. ಗರಿಷ್ಠ 75 ಮಂದಿ ಕಾಂಗ್ರೆಸ್‍ನವರಾಗಿದ್ದರೆ ತೃಣಮೂಲದ 36 ಮಂದಿ, ಆಮ್ ಆದ್ಮಿ ಪಕ್ಷದ  ನಾಯಕ ಹಾಗೂ ದಿಲ್ಲಿ ಸೀಎಂ ಅರವಿಂದ್ ಕೇಜ್ರಿವಾಲ್ ಸಹಿತ ಅವರ ಪಕ್ಷದ ಕನಿಷ್ಠ 18 ಮಂದಿ ಟಾರ್ಗೆಟ್ ಆಗಿದ್ದಾರೆ ಎಂದು ವರದಿ ತಿಳಿಸಿದೆ.

ಕಳೆದ ಏಳು ವರ್ಷಗಳಲ್ಲಿ ಬಿಜೆಪಿಯೇತರ ಯಾವುದೇ ಪಕ್ಷದವರನ್ನೂ ಬಿಟ್ಟಿಲ್ಲ, ಕಾಶ್ಮೀರದ ಫಾರೂಖ್ ಅಬ್ದುಲ್ಲಾ ಕುಟುಂಬ, ಮೆಹಬೂಬಾ ಮುಫ್ತಿ ಹಾಗೂ ತಮಿಳುನಾಡಿ ಸಿಎಂ ಸ್ಟಾಲಿನ್ ಅವರ ಸಂಬಂಧಿಕರೂ ತನಿಖಾ ಏಜನ್ಸಿಗಳ ಟಾರ್ಗೆಟ್ ಆಗಿದ್ದರು.

ಕಾಂಗ್ರೆಸ್, ತೃಣಮೂಲ ಹಾಗೂ ಆಪ್ ಹೊರತಾಗಿ ನ್ಯಾಷನಲ್ ಕಾನ್ಫರೆನ್ಸಿನ 14 ಮಂದಿ ಪಿಡಿಪಿ ಹಾಗೂ ಟಿಡಿಪಿಯ ತಲಾ 12 ಮಂದಿ ಡಿಎಂಕೆಯ 11 ಮಂದಿ, ಎನ್‍ಸಿಪಿ ಹಾಗೂ ಆರ್‍ಜೆಡಿಯ ತಲಾ ಎಂಟು ಮಂದಿ, ಬಿಜೆಡಿ, ಬಿಎಸ್‍ಪಿಯ ತಲಾ 7 ಮಂದಿ ಜೆಡಿ(ಎಸ್), ಶಿವಸೇನೆ ಹಾಗೂ ಸಮಾಜವಾದಿ ಪಕ್ಷದ ತಲಾ ಆರು ಮಂದಿ ತನಿಖಾ ಏಜನ್ಸಿಗಳ ಟಾರ್ಗೆಟ್ ಆಗಿದ್ದಾರೆ.

ಯುಪಿಎ ಸರಕಾರದ ಎರಡನೇ ಅವಧಿಯಲ್ಲಿ ಕೇವಲ 85 ಮಂದಿ ವಿಪಕ್ಷಗಳ ನಾಯಕರನ್ನು ಟಾರ್ಗೆಟ್ ಮಾಡಲಾಗಿತ್ತು  ಎಂದು ಎನ್‍ಡಿಟಿವಿ ವರದಿ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X