Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾರ್ಕಳ ಪುರಸಭೆಯ ಸೊತ್ತುಗಳನ್ನು...

ಕಾರ್ಕಳ ಪುರಸಭೆಯ ಸೊತ್ತುಗಳನ್ನು ರಕ್ಷಿಸುವಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ: ವಿಪಕ್ಷ ಆರೋಪ

ಪುರಸಭಾ ಮಾಸಿಕ ಸಭೆ

ವಾರ್ತಾಭಾರತಿವಾರ್ತಾಭಾರತಿ23 Dec 2021 3:59 PM IST
share
ಕಾರ್ಕಳ ಪುರಸಭೆಯ ಸೊತ್ತುಗಳನ್ನು ರಕ್ಷಿಸುವಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ: ವಿಪಕ್ಷ ಆರೋಪ

ಕಾರ್ಕಳ, ಡಿ.23: ಪುರಸಭೆಯ ಸೊತ್ತುಗಳನ್ನು ರಕ್ಷಿಸುವಲ್ಲಿ ಪುರಸಭಾ ಅಧಿಕಾರಿಗಳು ತೀವ್ರ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂಬ ಆರೋಪ ಗುರುವಾರ ನಡೆದ ಕಾರ್ಕಳ ಪುರಸಭಾ ಮಾಸಿಕ ಸಭೆಯಲ್ಲಿ ವಿಪಕ್ಷ ಸದಸ್ಯರಿಂದ ವ್ಯಕ್ತವಾಯಿತು.

ಪುರಸಭಾ ಅಧ್ಯಕ್ಷೆ ಸುಮಾ ಕೇಶವ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ವಿಪಕ್ಷ ಮುಖಂಡ ಅಶ್ಫಾಕ್ ಅಹ್ಮದ್, ಪುರಸಭಾ ವ್ಯಾಪ್ತಿಯಲ್ಲಿ ನೀರು ಸರಬರಾಜು ಮಾಡುತ್ತಿರುವ ಮುಂಡ್ಲಿ ಜಲಾಶಯದ ನೀರು ಸಂಗ್ರಾಹಾರಕ್ಕೆ ಹಾಕಿದ್ದ ಸುಮಾರು 125 ಕಿಲೋ ಭಾರದ 160 ಗೇಟುಗಳು ಏನಾದವು? ಮಸ್ತಕಾಭಿಷೇಕ ಸಂದರ್ಭದಲ್ಲಿ ಪುರಸಭೆ ಖರೀದಿಸಿದ್ದ ಲಕ್ಷಾಂತರ ರೂ. ಮೌಲ್ಯದ ಓವರ್ ಹೆಡ್ ಟ್ಯಾಂಕ್, ನೀರು ಸರಬರಾಜು ಕೇಂದ್ರಗಳಲ್ಲಿ ಅಳವಡಿಸಿದ ಬಿಡಿಭಾಗಗಳು ಈಗ ಎಲ್ಲಿವೆ? ಅವು ಏನಾದವು ಎಂದು ಪ್ರಶ್ನಿಸಿದರು.

ಕಳೆದ ಸಭೆಯಲ್ಲಿ ಅಂಗಡಿ ಮಳಿಗೆಗಳ ಬಾಡಿಗೆ ಸಂಗ್ರಹದಲ್ಲಿ ಅವ್ಯವಹಾರ ನಡೆದಿದೆ. ಇದರಲ್ಲಿ ಪುರಸಭಾ ಅಧಿಕಾರಿಗಳೇ ಶಾಮೀಲಾಗಿದ್ದು, ಮುಂದಿನ ಸಭೆಯಲ್ಲಿ ಅಂತಹ ಅಧಿಕಾರಿಗಳ ಸಿಡಿ ಬಿಡುಗಡೆ ಮಾಡುತ್ತೇನೆ ಎಂದು ವಿಪಕ್ಷ ಸದಸ್ಯ ಸೋಮನಾಥ ನಾಯ್ಕ್ ಸವಾಲೆಸೆದಿದ್ದರು. ಈ ವಿಚಾರವನ್ನು ಇಂದಿನ ಸಭೆಯಲ್ಲಿ ಪ್ರಸ್ತಾಪಿಸಿದ ಆಡಳಿತ ಪಕ್ಷದ ಸದಸ್ಯ ಯೋಗಿಶ್ ದೇವಾಡಿಗ, ಅಂಗಡಿ ಮಳಿಗೆಗಳ ಬಾಡಿಗೆ ಸಂಗ್ರಹದಲ್ಲಿನ ಅವ್ಯವಹಾರವನ್ನು ಸೋಮನಾಥ ನಾಯ್ಕ ಈ ಸಭೆಯಲ್ಲಿ ಸಾಬೀತುಪಡಿಸಬೇಕೆಂದು ಪಟ್ಟು ಹಿಡಿದರು. ಈ ವಿಚಾರ ಸಭೆಯಲ್ಲಿ ತೀವ್ರ ಚರ್ಚೆಗೆ ಕಾರಣವಾಯಿತು.

ಈ ವೇಳೆ ಮಾತನಾಡಿದ ಸೋಮನಾಥ ನಾಯ್ಕ್, ಸುಮಾರು ಒಂದು ವರ್ಷದಿಂದ ಮಾಹಿತಿ ಹಕ್ಕಿನಡಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ಕೇಳಿದ್ದೆ. ಆದರೆ ಅಧಿಕಾರಿಗಳು ಇದುವರೆಗೆ ಮಾಹಿತಿ ನೀಡಿಲ್ಲ. ಇದು ಅಧಿಕಾರಿಗಳ ಭ್ರಷ್ಟಾಚಾರಕ್ಕೆ ಪುರಾವೆಯಲ್ಲವೇ? ಇಲ್ಲದಿದ್ದರೆ ಯಾಕೆ ಮಾಹಿತಿ ನೀಡುತ್ತಿಲ್ಲ ಎಂದು ಪ್ರಶ್ನಿಸಿದರು

ಇದಕ್ಕೆ ಪ್ರತಿಕ್ರಿಯಿಸಿದ ಆಡಳಿತ ಪಕ್ಷದ ಸದಸ್ಯರುಗಳಾದ ಯೋಗೀಶ್ ದೇವಾಡಿಗ, ಪ್ರದೀಪ್ ಮಾರಿಗುಡಿ, ಪ್ರಸನ್ನ ತಾವು ಆರೋಪ ಮಾಡಿದ ಆ ಅಧಿಕಾರಿಗಳ ಹೆಸರನ್ನು ಬಹಿರಂಗಪಡಿಸಿ ಎಂದು ಒತ್ತಾಯಿಸಿದರು.

ಸದಸ್ಯ ಶುಭದ ರಾವ್ ಮಾತನಾಡಿ, ಪುರಸಭಾ ವ್ಯಾಪ್ತಿಯ ಕಾಳಿಕಾಂಬ ಬಳಿಯ ನೂತನ ಉದ್ಯಾನವನಕ್ಕೆ ಮಾಜಿ ಪುರಸಭಾ ಅಧ್ಯಕ್ಷ, ದಿವಂಗತ ಪ್ರದೀಪ್ ಕೋಟ್ಯಾನ್ ಹೆಸರಿಡಬೇಕೆಂದು ಆಗ್ರಹಿಸಿದರು.

ವೇದಿಕೆಯಲ್ಲಿ ಪುರಸಭಾ ಮುಖ್ಯಾಧಿಕಾರಿ ರೂಪಾ ಟಿ. ಶೆಟ್ಟಿ, ಉಪಾಧ್ಯಕ್ಷೆ ಪಲ್ಲವಿ ಪ್ರವೀಣ್, ಸ್ಥಾಯಿ ಸಮಿತಿಯ ಅಧ್ಯಕ್ಷೆ ಲಕ್ಷ್ಮೀ ನಾರಾಯಣ ಮಲ್ಯ ಉಪಸ್ಥಿತರಿದ್ದರು.

 ಪುರಸಭಾ ಸದಸ್ಯರುಗಳಾದ ವಿನ್ನಿ ಬೋಲ್ಡ್ ಮೆಂಡೋನ್ಸ, ಸೋಮನಾಥ ನಾಯ್ಕ್, ರಹ್ಮತ್ ಎನ್. ಶೇಖ್, ಪ್ರತಿಮಾ, ಸೀತಾರಾಮ, ನಳಿನಿ ಆಚಾರ್ಯ, ಹರೀಶ್ ದೇವಾಡಿಗ, ಪ್ರಶಾಂತ ಕೋಟ್ಯಾನ್, ನೀತಾ ಆಚಾರ್ಯ, ಶೋಭಾ ದೇವಾಡಿಗ, ಮಮತಾ, ಸುನೀತಾ ಶೆಟ್ಟಿ, ಪ್ರಭಾ ಕಿಶೋರ್, ಮೀನಾಕ್ಷಿ ಗಂಗಾದರ್ ಪ್ರವೀಣ್ ಚಂದ್ರ ಶೆಟ್ಟಿ, ನಾಮನಿರ್ದೇಶಿತ ಸದಸ್ಯರಾದ ಅವಿನಾಶ್ ಶೆಟ್ಟಿ, ಸಂತೋಷ್ ರಾವ್, ಪ್ರಸನ್ನ, ಸಂಧ್ಯಾ ಮಲ್ಯ, ಅಶೋಕ್ ಸುವರ್ಣ ಚರ್ಚೆಯಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X