Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳದಲ್ಲಿ ಪಿಎಫ್‌ಐ ಸದಸ್ಯರ ವಿಚಾರಣೆಗೆ...

ಕೇರಳದಲ್ಲಿ ಪಿಎಫ್‌ಐ ಸದಸ್ಯರ ವಿಚಾರಣೆಗೆ ಈ.ಡಿ.ಗೆ ನಿರ್ದೇಶ ನೀಡಲು ದಿಲ್ಲಿ ಹೈಕೋರ್ಟ್ ನಕಾರ

ಅಕ್ರಮ ಹಣ ವರ್ಗಾವಣೆ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ24 Dec 2021 11:58 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕೇರಳದಲ್ಲಿ ಪಿಎಫ್‌ಐ ಸದಸ್ಯರ ವಿಚಾರಣೆಗೆ ಈ.ಡಿ.ಗೆ ನಿರ್ದೇಶ ನೀಡಲು ದಿಲ್ಲಿ ಹೈಕೋರ್ಟ್ ನಕಾರ

ಹೊಸದಿಲ್ಲಿ,ಡಿ.24: ಅಕ್ರಮ ಹಣ ವರ್ಗಾವಣೆ ಪ್ರಕರಣವೊಂದರಲ್ಲಿ ಕೇರಳದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ)ದ ಸದಸ್ಯರನ್ನು ಹೇಳಿಕೆಗಳನ್ನು ದಾಖಲಿಸಿಕೊಳ್ಳಲು ಜಾರಿ ನಿರ್ದೇಶನಾಲಯ(ಈ.ಡಿ.)ಕ್ಕೆ ನಿರ್ದೇಶ ನೀಡಲು ಶುಕ್ರವಾರ ನಿರಾಕರಿಸಿದ ದಿಲ್ಲಿ ಉಚ್ಚ ನ್ಯಾಯಾಲಯವು, ತನಿಖೆಯ ಕ್ರಮ ಮತ್ತು ವಿಧಾನವನ್ನು ನ್ಯಾಯಾಲಯವು ನಿರ್ದೇಶಿಸುವಂತಿಲ್ಲ ಎಂದು ಹೇಳಿದೆ.

ದಿಲ್ಲಿಯಲ್ಲಿ ಈ.ಡಿ. ಎದುರು ಹಾಜರಾಗುವಂತೆ ಮೂವರು ಪಿಎಫ್‌ಐ ಸದಸ್ಯರಿಗೆ ಸಮನ್ಸ್ ಹೊರಡಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ನಡೆಸುತ್ತಿದ್ದ ನ್ಯಾ. ಅನು ಮಲ್ಹೋತ್ರಾ ಅವರು, ಕೋವಿಡ್‌ನಿಂದಾಗಿ ಕೇರಳದಿಂದ ದಿಲ್ಲಿಗೆ ಪ್ರಯಾಣಿಸುವವರ ಮೇಲೆ ಯಾವುದೇ ನಿರ್ಬಂಧಗಳಿದ್ದರೆ ಮಾತ್ರ ಈ.ಡಿ.ಕೇರಳದಲ್ಲಿಯ ತನ್ನ ವಲಯ ಕಚೇರಿಯಲ್ಲಿ ವಿಚಾರಣೆಯನ್ನು ನಡೆಸಬೇಕು. ತನಿಖೆಯ ರೀತಿಯನ್ನು ನ್ಯಾಯಾಲಯವು ನಿರ್ದೇಶಿಸಲು ಸಾಧ್ಯವಿಲ್ಲ, ಅದು ನ್ಯಾಯಾಲಯದ ಕೆಲಸವೂ ಅಲ್ಲ. ಸದ್ಯಕ್ಕೆ ಪ್ರಯಾಣದ ಮೇಲೆ ಯಾವುದೇ ನಿರ್ಬಂಧವಿಲ್ಲ ಎಂದು ಹೇಳಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಈ ತಿಂಗಳ ಪೂರ್ವಾರ್ಧದಲ್ಲಿ ನಡೆಸಲಾಗಿದ್ದ ಶೋಧ ಕಾರ್ಯಾಚರಣೆಗೆ ಕಾರಣಗಳನ್ನು ಸಲ್ಲಿಸುವಂತೆ ಈ.ಡಿ.ಗೆ ನಿರ್ದೇಶ ನೀಡಲೂ ನ್ಯಾಯಾಲಯವು ನಿರಾಕರಿಸಿತು.

ದೇಶವಿರೋಧಿ ಚಟುವಟಿಕೆಗಳನ್ನು ನಡೆಸಲು ಕೇರಳದಲ್ಲಿ ಯುವಕರಿಗೆ ತರಬೇತಿ ನೀಡುತ್ತಿದ್ದ ಆರೋಪದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯು ಪ್ರಕರಣವನ್ನು ದಾಖಲಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಈ.ಡಿ.2018ರಲ್ಲಿ ದಾಖಲಿಸಿದ್ದ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಪ್ರಶ್ನಿಸಿ ಪಿಎಫ್‌ಐ ಸಲ್ಲಿಸಿದ್ದ ಅರ್ಜಿಗೆ ಉತ್ತರಿಸುವಂತೆ ಉಚ್ಚ ನ್ಯಾಯಾಲಯವು ಡಿ.8ರಂದು ಈ.ಡಿ.ಗೆ ಸೂಚಿಸಿತ್ತು.

ಸಮನ್ಸ್ ಜಾರಿಗೊಂಡಿರುವ ಪಿಎಫ್‌ಐ ಕಾರ್ಯಕರ್ತರು ತನಿಖೆಯನ್ನು ಹೇಗೆ ನಡೆಸಬೇಕು ಎಂದು ತನಿಖಾ ಸಂಸ್ಥೆಗೆ ನಿರ್ದೇಶಿಸುವಂತಿಲ್ಲ ಎಂದು ವಾದಿಸಿದ ಈ.ಡಿ.ಪರ ವಕೀಲ ಅಮಿತ್ ಮಹಾಜನ ಅವರು, ವಿಚಾರಣೆಗಾಗಿ ದಿಲ್ಲಿಗೆ ಬರಲು ಪ್ರಾಮಾಣಿಕವಾದ ತೊಂದರೆಗಳಿದ್ದರೆ ಮತ್ತು ಅದರಿಂದ ತನಿಖೆಗೆ ಅಡ್ಡಿಯಾಗದಿದ್ದರೆ ಈ.ಡಿ. ಅದನ್ನು ಪರಿಗಣಿಸುತ್ತದೆ ಎಂದು ತಿಳಿಸಿದರು.

ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ತನ್ನ ಕಕ್ಷಿದಾರರ ವಿಚಾರಣೆಯನ್ನು ಈ.ಡಿ. ತನ್ನ ಕೇರಳ ವಲಯ ಕಚೇರಿಯಲ್ಲಿ ನಡೆಸಬೇಕು, ಅಲ್ಲದೆ ಅವರು ದಿಲ್ಲಿಯ ನಿವಾಸಿಗಳಲ್ಲ, ಸ್ಥಳೀಯ ಭಾಷಾಜ್ಞಾನದ ಕೊರತೆಯೂ ಇದೆ ಎಂದು ಪಿಎಫ್‌ಐ ಪರ ವಕೀಲ ಅದಿತ್ ಪೂಜಾರಿ ವಾದಿಸಿದರು. ಪ್ರಕರಣದ ಮುಂದಿನ ವಿಚಾರಣೆ ಫೆಬ್ರವರಿಯಲ್ಲಿ ನಡೆಯಲಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X