Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರೈತರ ಆದಾಯ ಹೆಚ್ಚಳಕ್ಕೆ ನವೋದ್ಯಮ...

ರೈತರ ಆದಾಯ ಹೆಚ್ಚಳಕ್ಕೆ ನವೋದ್ಯಮ ತಾಂತ್ರಿಕತೆ, ನೇರ ಮಾರುಕಟ್ಟೆ ವ್ಯವಸ್ಥೆ: ಸಚಿವ ಅಶ್ವತ್ಥ ನಾರಾಯಣ

ನಾಗಪುರದಲ್ಲಿ ‘ಅಗ್ರೋವಿಷನ್’ ಮಹಾ ಕೃಷಿಮೇಳ

ವಾರ್ತಾಭಾರತಿವಾರ್ತಾಭಾರತಿ24 Dec 2021 9:21 PM IST
share
ರೈತರ ಆದಾಯ ಹೆಚ್ಚಳಕ್ಕೆ ನವೋದ್ಯಮ ತಾಂತ್ರಿಕತೆ, ನೇರ ಮಾರುಕಟ್ಟೆ ವ್ಯವಸ್ಥೆ: ಸಚಿವ ಅಶ್ವತ್ಥ ನಾರಾಯಣ

ನಾಗಪುರ, ಡಿ.24: ಕರ್ನಾಟಕದಲ್ಲಿ ಸ್ಟಾರ್ಟ್ ಅಪ್‍ಗಳಿಗೆ ಮತ್ತು ತಾಂತ್ರಿಕ ಉದ್ಯಮಶೀಲರಿಗೆ ಕೃಷಿ ಹಾಗೂ ಕೃಷಿಪೂರಕ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳಲು ಉತ್ತೇಜನ ನೀಡುವ ಜೊತೆಗೆ, ಕೃಷಿ, ಆಹಾರ ತಾಂತ್ರಿಕ ಕಂಪನಿಗಳು ಹಾಗೂ ಕೃಷಿ ಉತ್ಪಾದಕ ಸಂಸ್ಥೆಗಳ ನಡುವೆ ನೇರ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಒತ್ತು ಕೊಡಲಾಗಿದೆ ಎಂದು ರಾಜ್ಯದ ಐಟಿ, ಬಿಟಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದರು.

ಪ್ರತಿ ವರ್ಷ ಮಹಾರಾಷ್ಟ್ರದ ನಾಗಪುರದಲ್ಲಿ ನಡೆಯುವ ಮಧ್ಯಭಾರತದ ಅತ್ಯಂತ ದೊಡ್ಡ ಕೃಷಿಮೇಳ ‘ಅಗ್ರೋವಿಷನ್’ನ ಉದ್ಘಾಟನಾ ಸಮಾರಂಭದಲ್ಲಿ ಶುಕ್ರವಾರ ಪಾಲ್ಗೊಂಡಿದ್ದ ಅವರು, ‘ತಂತ್ರಜ್ಞಾನದಿಂದ ಕೃಷಿಯ ಪರಿವರ್ತನೆ-ಆವಿಷ್ಕಾರ ಮತ್ತು ನವೋದ್ಯಮಗಳು’ ಕುರಿತು ಮಾತನಾಡಿದರು.

ಕರ್ನಾಟಕದಲ್ಲಿ ಕೃಷಿಕಲ್ಪದಂತಹ ಸಾಮಾಜಿಕ ಉದ್ಯಮಗಳ ಮೂಲಕ ನೇರ ಮಾರುಕಟ್ಟೆ ವ್ಯವಸ್ಥೆಗೆ ಸೌಕರ್ಯ ಕಲ್ಪಿಸಲಾಗಿದೆ. ಆಯ್ದ ಜಿಲ್ಲೆಗಳಲ್ಲಿ ಇದನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಲಾಗಿದ್ದು, ಇದುವರೆಗೆ ರಾಜ್ಯದಲ್ಲಿ ಕೃಷಿ ಉತ್ಪನ್ನಗಳಿಗೆ ಈ ವ್ಯವಸ್ಥೆಯಿಂದ 7 ಕೋಟಿ ರೂ.ಮೌಲ್ಯದ ಮಾರುಕಟ್ಟೆಯನ್ನು ಒದಗಿಸಲಾಗಿದೆ. ಇದರಿಂದಾಗಿ ರೈತರಿಗೆ 1.2 ಕೋಟಿ ರೂಪಾಯಿ ಹೆಚ್ಚಿನ ಆದಾಯ ಬಂದಿರುವುದರ ಜೊತೆಗೆ ಕೃಷಿ ಉತ್ಪಾದಕ ಸಂಸ್ಥೆಗಳಿಗೆ 80 ಲಕ್ಷಕ್ಕಿಂತ ಹೆಚ್ಚಿನ ಲಾಭವಾಗಿದೆ ಎಂದು ಅವರು ವಿವರಿಸಿದರು.

ರೈತರನ್ನು ಗಮನದಲ್ಲಿರಿಸಿಕೊಂಡು ಕೃಷಿ ಪೂರೈಕೆ ಸರಪಳಿಗೆ ಹೊಸ ರೂಪ ಕೊಡುವುದು ಅತ್ಯಗತ್ಯವಾಗಿದೆ. ಪ್ರತಿಯೊಬ್ಬ ಕೃಷಿಕನನ್ನೂ ಒಬ್ಬ ಸಣ್ಣ ಉದ್ಯಮಿಯನ್ನಾಗಿಸುವುದರ ಮಹತ್ವವನ್ನು ತಿಳಿದುಕೊಳ್ಳಬೇಕಾಗಿದೆ. ಮುಂಬರುವ ತಲೆಮಾರಿನ ರೈತರು ಹೆಚ್ಚಿನ ತಾಂತ್ರಿಕ ಜ್ಞಾನ ಹೊಂದಿದವರಾಗಿರುತ್ತಾರೆ ಎಂದು ಅಶ್ವತ್ಥ ನಾರಾಯಣ ಹೇಳಿದರು.

ಬ್ರಾಡ್ ಬ್ಯಾಂಡ್ ಸೇರಿದಂತೆ ಆಧುನಿಕ ತಂತ್ರಜ್ಞಾನಗಳು ಕುಗ್ರಾಮವನ್ನೂ ತಲುಪಲಿವೆ. ಇಂತಹ ಸನ್ನಿವೇಶದಲ್ಲಿ ನಾವು ಈ ತಾಂತ್ರಿಕ ಬೆಳವಣಿಗೆಯನ್ನು ಕೃಷಿ ಇಳುವರಿ ಹೆಚ್ಚಿಸಲು, ಉತ್ಪಾದಕತೆ ಅಧಿಕವಾಗಿಸಲು, ಮಾರುಕಟ್ಟೆ ಸಂಪರ್ಕಗಳನ್ನು ಕಲ್ಪಿಸಲು ಬಳಸಿಕೊಳ್ಳುವ ಬಗ್ಗೆ ಆಲೋಚಿಸಬೇಕಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಈಗ ಬೆಳೆಗೆ ಏನೇನು ಹಾಕಬೇಕೆಂಬ ಸೂಚನೆಯನ್ನು ತಂತ್ರಜ್ಞಾನವೇ ಒದಗಿಸುತ್ತದೆ.  ಐಒಟಿ ತಾಂತ್ರಿಕತೆಯಿಂದ ಹವಾಮಾನ ವರದಿಯನ್ನು ಬಹುತೇಕ ನಿಖರವಾಗಿ ಕೊಡಬಹುದು. 3 ಗಂಟೆಗಳಿಗಿಂತ ಕಡಿಮೆ ಸಮಯದಲ್ಲಿ 18 ಟನ್‍ಗಳಷ್ಟು ಹಣ್ಣನ್ನು ಗ್ರೇಡ್‍ಗಳಿಗೆ ತಕ್ಕಂತೆ ವಿಂಗಡಿಸಬಹುದಾದ ತಂತ್ರಜ್ಞಾನ ಅಭಿವೃದ್ಧಿಯಾಗಿದೆ ಎಂದು ಅಶ್ವತ್ಥ ನಾರಾಯಣ ಹೇಳಿದರು.

30 ನಿಮಿಷಕ್ಕಿಂತ ಕಡಿಮೆ ಸಮಯದಲ್ಲಿ ಮಣ್ಣು ಪರೀಕ್ಷೆಯ ಫಲಿತಾಂಶ ಕೊಡಬಹುದಾಗಿದೆ. ಕೃತಕ ಬುದ್ಧಿಮತ್ತೆ ಮತ್ತು ಮಷೀನ್ ಲನಿರ್ಂಗ್ ಬಳಸಿ ಕೊಯ್ಲಿಗೆ ಬಂದ ಬೆಳೆ ಪ್ರಮಾಣ, ಪ್ರಕೃತಿ ವಿಕೋಪಗಳಿಂದಾದ ಬೆಳೆ ಹಾನಿ, ಇತ್ಯಾದಿಯನ್ನು ಲೆಕ್ಕಹಾಕಬಹುದಾಗಿದೆ ಎಂದು ಅವರು ವಿವರಿಸಿದರು.

ದೇಶದಲ್ಲಿ ಕೃಷಿ ತಾಂತ್ರಿಕ ನವೋದ್ಯಮಗಳು ಹೆಚ್ಚಾಗುತ್ತಿವೆ. ಕಳೆದ 11 ತಿಂಗಳಲ್ಲಿ ಈ ಕ್ಷೇತ್ರದಲ್ಲಿ 5000 ಕೋಟಿ ರೂಪಾಯಿ ಹೂಡಿಕೆಯಾಗಿದೆ. ಈಗ ದೇಶದಾದ್ಯಂತ 70ಕ್ಕೂ ಹೆಚ್ಚು ಸ್ಟಾರ್ಟ್ ಅಪ್‍ಗಳು ಕೃಷಿ ಉತ್ಪನ್ನಗಳಿಗೆ ನೇರ ಮಾರುಕಟ್ಟೆ ಒದಗಿಸುವಲ್ಲಿ ತೊಡಗಿಸಿಕೊಂಡಿದ್ದು, ಸುಮಾರು 8000 ಕೋಟಿ ರೂಪಾಯಿ ಮೊತ್ತದ ವಹಿವಾಟಿಗೆ ಅನುವು ಮಾಡಿಕೊಟ್ಟಿವೆ. ಇದರಿಂದಾಗಿ ಸಂಬಂಧಪಟ್ಟ ರೈತರ ಆದಾಯವು ಒಂದೂವರೆಯಿಂದ ಎರಡು ಪಟ್ಟು ಹೆಚ್ಚಾಗಿದೆ ಎಂದು ಅವರು ಹೇಳಿದರು.

‘ಸ್ಥಳೀಯ ಪ್ರಯತ್ನಗಳು ಹಾಗೂ ಜಾಗತಿಕ ಉಪಯೋಗಗಳು’ ಎಂಬುದು ನಮ್ಮ ಮಂತ್ರವಾಗಬೇಕು. ಪ್ರತಿಯೊಂದು ಜಿಲ್ಲೆ, ತಾಲ್ಲೂಕು ಮಟ್ಟದಲ್ಲಿ ಕೊಯ್ಲೋತ್ತರ ಪರಿಹಾರ ಕೇಂದ್ರಗಳ ಸ್ಥಾಪನೆಗೆ ಒತ್ತು ಕೊಡುವ ಮೂಲಕ ರೈತರ ಆದಾಯವನ್ನು ಶೇ.20ರಷ್ಟು ಹೆಚ್ಚಿಸಿ ಯುವಜನತೆಯನ್ನು ಕೃಷಿ ಉದ್ಯಮಶೀಲತೆಯಲ್ಲಿ ಪಾಲ್ಗೊಳ್ಳಲು ಪ್ರೇರೇಪಿಸಬಹುದು ಎಂದು ಅವರು ತಿಳಿಸಿದರು.

ನರೇಂದ್ರ ಮೋದಿ ನೇತೃತ್ವದಲ್ಲಿ ಪ್ರತಿಯೊಂದು ಸವಾಲನ್ನೂ ಅವಕಾಶವನ್ನಾಗಿ ಪರಿವರ್ತಿಸಿಕೊಂಡು ಮುನ್ನಡೆಯಲಾಗುತ್ತಿದೆ. ಪ್ರತಿಯೊಂದು ಸ್ಟಾರ್ಟ್ ಅಪ್ ಜಿಲ್ಲೆಯಲ್ಲಿ 5ರಿಂದ 10 ಹಳ್ಳಿಗಳನ್ನು ದತ್ತು ತೆಗೆದುಕೊಂಡು ಅಲ್ಲಿ ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನ ಬಳಕೆ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯಬೇಕು ಎಂದು ಅವರು ಹೇಳಿದರು.

2017ರಿಂದ 2020ರ ಅವಧಿಯಲ್ಲಿ ದೇಶಕ್ಕೆ ಕೃಷಿ ತಾಂತ್ರಿಕತೆ ಅನುದಾನವಾಗಿ 100 ಕೋಟಿ ಡಾಲರ್ ಹಣ ಬಂದಿದೆ. 2022-25ರ ಅವಧಿಯಲ್ಲಿ ಇದು ಮೂರು ಪಟ್ಟು ಹೆಚ್ಚಾಗುವ ಅಂದಾಜಿದೆ ಎಂದು ಅಶ್ವತ್ಥ ನಾರಾಯಣ ಹೇಳಿದರು.

ದೇಶದಲ್ಲಿ ಈಗ 1000ಕ್ಕೂ ಹೆಚ್ಚು ನವೋದ್ಯಮಗಳು ಕೃಷಿ ಹಾಗೂ ಕೃಷಿ ಪೂರಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿವೆ. ಈ ಸಂಖ್ಯೆ ಕನಿಷ್ಠ ಇನ್ನೂ 10 ಪಟ್ಟು ಹೆಚ್ಚಾಗುವ ಅಗತ್ಯವಿದೆ. ಸಮೀಕ್ಷೆಗಳ ಪ್ರಕಾರ ದೇಶದಲ್ಲಿ 35 ಶತಕೋಟಿ ಡಾಲರ್ ಮೌಲ್ಯದಷ್ಟು ಕೃಷಿ ಉತ್ಪನ್ನಗಳ ಇ-ಮಾರಾಟಕ್ಕೆ ಅವಕಾಶವಿದೆ ಎಂದು ಅವರು ತಿಳಿಸಿದರು.

ಸದ್ಯ ದೇಶದಲ್ಲಿ ಕೃಷಿ ಅವಲಂಬಿತರ ಸಂಖ್ಯೆಗೂ, ಅವರಿಂದ ಆಗುತ್ತಿರುವ ಉತ್ಪಾದಕತೆಗೂ ತುಂಬಾ ಅಂತರವಿದೆ. ಇಲ್ಲಿ ಶೇ.55ರಷ್ಟು ಜನ ಕೃಷಿ ಅವಲಂಬಿತರಾಗಿದ್ದರೂ ಜಾಗತಿಕ ಕೃಷಿ ವಹಿವಾಟಿಗೆ ನಮ್ಮ ಕೊಡುಗೆ ಶೇ.2.15ಕ್ಕಿಂತ ಕಡಿಮೆ ಇದ್ದರೆ, ಜಿಡಿಪಿ ಕೊಡುಗೆ ಶೇ.15ಕ್ಕಿಂತ ಕಡಿಮೆ ಇದೆ. ಈ ಪರಿಸ್ಥಿತಿ ಬದಲಾಗಿ, ಭಾರತವು ಹೈ-ಟೆಕ್ ನೆಲೆಯಾಗುವ ಜೊತೆಗೆ ಕೃಷಿ ತಾಂತ್ರಿಕತೆಯ ಪ್ರಶಸ್ತ ತಾಣವೂ ಆಗಬೇಕು ಎಂದು ಅಶ್ವತ್ಥ ನಾರಾಯಣ ಹೇಳಿದರು.

ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಸೇರಿದಂತೆ ಹಲವರು ಹಾಜರಿದ್ದರು. ಈ ಕೃಷಿ ಮಹಾಮೇಳವು 4 ದಿನಗಳ ಕಾಲ ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X