Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಪ್ಪಿನಂಗಡಿ: ಪೂರ್ವ ಸೂಚನೆ ನೀಡದೇ ದೈವದ...

ಉಪ್ಪಿನಂಗಡಿ: ಪೂರ್ವ ಸೂಚನೆ ನೀಡದೇ ದೈವದ ಗುಡಿಯ ತೆರವು; ಆರೋಪ

ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ24 Dec 2021 10:58 PM IST
share
ಉಪ್ಪಿನಂಗಡಿ: ಪೂರ್ವ ಸೂಚನೆ ನೀಡದೇ ದೈವದ ಗುಡಿಯ ತೆರವು; ಆರೋಪ

ಉಪ್ಪಿನಂಗಡಿ, ಡಿ.24: ಗಿರಿಜನರು ಆರಾಧಿಸಿಕೊಂಡು ಬರುತ್ತಿದ್ದ ಮಹಾಮಾಯಿ ಹಾಗೂ ಬೈರವ ದೈವದ ಗುಡಿಯನ್ನು ಅರಣ್ಯ ಇಲಾಖಾ ಸಿಬ್ಬಂದಿ ಯಾವುದೇ ಪೂರ್ವ ಸೂಚನೆ ನೀಡದೇ ತೆರವುಗೊಳಿಸಿದ್ದಾರೆನ್ನಲಾದ ಘಟನೆ ಬೆಳ್ತಂಗಡಿ ತಾಲೂಕು ಉರುವಾಲು ಪದವು ಎಂಬಲ್ಲಿ ನಡೆದಿದ್ದು, ಈ ಬಗ್ಗೆ ಅರಣ್ಯ ಇಲಾಖೆಯ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಕಳೆದ ಹತ್ತು ವರ್ಷಗಳಿಂದ ಸಣ್ಣ ಗುಡಿಯೊಂದಿಗೆ ಪೂಜಾ ಕಾರ್ಯ ನಡೆಸಲಾಗುತ್ತಿದ್ದ ಈ ಗುಡಿಯನ್ನು ದಶಮಾನೋತ್ಸವದ ಕಾರ್ಯಕ್ರಮ ನಡೆಸುವ ಸಲುವಾಗಿ ನವೀಕರಣಗೊಳಿಸಲಾಗಿತ್ತು. ಇದರ ಬಗ್ಗೆ ಮೌಖಿಕ ಆಕ್ಷೇಪ ವ್ಯಕ್ತಪಡಿಸಿದ ಅರಣ್ಯ ಇಲಾಖಾ ಹಾಗೂ ಗೇರು ಅಭಿವೃದ್ಧಿ ನಿಗಮದ ಸಿಬ್ಬಂದಿ ಯಾವುದೇ ಲಿಖಿತ ಸೂಚನೆ ನೀಡದೆ ಗುಡಿಯನ್ನು ತೆರವುಗೊಳಿಸಿದ ಬಗ್ಗೆ ಗಿರಿಜನ ಸಮೂಹ ಆಕ್ರೋಶ ವ್ಯಕ್ತಪಡಿಸಿದೆ.

ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಬೆಳ್ತಂಗಡಿ ತಾಲೂಕು ಗಿರಿಜನ ಅಭಿವೃದ್ಧಿ ಸಹಕಾರಿ ಸಂಘದ ಅಧ್ಯಕ್ಷ ಲಿಂಗಪ್ಪ, ಸರ್ವೆ ನಂಬ್ರ 244ರಲ್ಲಿನ ಸರಕಾರಿ ಭೂಮಿಯಲ್ಲಿ ನಮ್ಮ ಸಮುದಾಯದ ಆರಾಧನಾ ಕೇಂದ್ರವಿದ್ದು, ಅದು ಅರಣ್ಯ ಇಲಾಖಾ ವ್ಯಾಪ್ತಿಯಲ್ಲಿರಲಿಲ್ಲ. ಸದ್ರಿ ಭೂಮಿ ಸರಕಾರಿ ಭೂಮಿಯಾಗಿರುವುದರಿಂದ ನಮ್ಮ ಆರಾಧನಾ ಕೇಂದ್ರಕ್ಕೆ ಮುಂಜೂರುಗೊಳಿಸಬೇಕೆಂದು ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿಯ ಪ್ರಕಾರ ಅಳತೆ ಕಾರ್ಯ ಮುಗಿದಿದ್ದು, ಕಡತ ಬೆಳ್ತಂಗಡಿ ತಹಶೀಲ್ದಾರ್ ರವರ ಕಚೇರಿಯಲ್ಲಿದೆ. ಈ ಮಧ್ಯೆ ದಶಮಾನೋತ್ಸವದ ಅಂಗವಾಗಿ ಅಭಿವೃದ್ಧಿ ಪಡಿಸಿದ ಬಗ್ಗೆ ಅರಣ್ಯ ಇಲಾಖಾ ಸಿಬ್ಬಂದಿ ಮೌಖಿಕವಾಗಿ ಆಕ್ಷೇಪ ವ್ಯಕ್ತಪಡಿಸಿದ್ದು, ಗುಡಿಯನ್ನು ಉಳಿಸಬೇಕಾದರೆ ಹಣದ ಬೇಡಿಕೆ ಮುಂದಿರಿಸಿದ್ದರು. ಅದನ್ನು ಒಪ್ಪದ ಕಾರಣ ಯಾರಿಗೂ ತಿಳಿಸದೆ ಗುಡಿ ತೆರವುಗೊಳಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಗಿರಿಜನರ ಆರಾಧನಾ ಕೇಂದ್ರಗಳ ರಕ್ಷಣೆಗಾಗಿ ಸರಕಾರವೇ ಕಾನೂನು ಜಾರಿಗೊಳಿಸಿದ್ದರೂ, ಭೂಮಿಯ ಮಂಜೂರಾತಿಗಾಗಿ ಕಡತಗಳು ವಿಲೇವಾರಿ ಹಂತದಲ್ಲಿದ್ದರೂ, ಮೇಲಾಗಿ ಅರಣ್ಯ ಇಲಾಖಾ ವ್ಯಾಪ್ತಿಯಲ್ಲಿ ಇಲ್ಲದ ಭೂಮಿಯಲ್ಲಿರುವ ನಮ್ಮ ಆರಾಧನಾ ಗುಡಿಯನ್ನು ತೆರವುಗೊಳಿಸಿರುವುದು ಬೇಸರ ತಂದಿದೆ. ಪ್ರಕರಣವನ್ನು ಬೆಳ್ತಂಗಡಿ ಶಾಸಕರ ಹಾಗೂ ಅರಣ್ಯ ಇಲಾಖಾಧಿಕಾರಿಗಳ ಗಮನಕ್ಕೆ ತರಲಾಗಿದೆ. ನ್ಯಾಯ ದೊರಕುವ ಭರವಸೆ ಇದೆ. ದೊರಕದೇ ಇದ್ದರೆ ಹೋರಾಟ ಅನಿವಾರ್ಯವೆಂದು ತಿಳಿಸಿದ್ದಾರೆ.

ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಮಧುಸೂಧನ್, ಗುಡಿ ತೆರವು ಮಾಡಿರುವ ಬಗ್ಗೆ ದೂರು ಬಂದಿದೆ. ಅರಣ್ಯ ಇಲಾಖಾ ಭೂಮಿಯ ಅತಿಕ್ರಮಣವನ್ನು ತಡೆಗಟ್ಟುವುದು ಕಾನೂನು ಸಮ್ಮತ ನಡೆ. ಆದರೆ ಗುಡಿ ಇರುವ ಭೂಮಿ ಅರಣ್ಯ ಇಲಾಖಾ ವ್ಯಾಪ್ತಿಗೆ ಸೇರಿದಲ್ಲ ಎಂಬ ಆಪಾದನೆಯ ಬಗ್ಗೆ ಪರಿಶೀಲನೆ ನಡೆಸಿದ ಬಳಿಕವೇ ಪ್ರತಿಕ್ರಿಯಿಸುವೆ ಎಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X