ಡಿ.30: ಮೂಡುಬಿದಿರೆಯಲ್ಲಿ ಕಾನೂನು ಸೇವಾ ಶಿಬಿರ
ಮಂಗಳೂರು,ಡಿ.25: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ದ.ಕ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ದ.ಕ. ಜಿಲ್ಲಾಡಳಿತ, ದ.ಕ. ವಕೀಲರ ಸಂಘ ಹಾಗೂ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ವತಿಯಿಂದ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ನುಡಿಸಿರಿ ಸಭಾಭವನದಲ್ಲಿ ಡಿ.30ರ ಪೂ.11ಕ್ಕೆ ಕಾನೂನು ಸೇವಾ ಶಿಬಿರ ನಡೆಯಲಿದೆ.
ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿ ಎಸ್. ಅಬ್ದುಲ್ ನಝೀರ್ ಶಿಬಿರ ಉದ್ಘಾಟಿಸುವರು. ಗೌರವ ಅತಿಥಿಗಳಾಗಿ ರಾಜ್ಯ ಹೈಕೋರ್ಟ್ನ ನ್ಯಾಯಮೂರ್ತಿ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷ ನ್ಯಾ. ಬಿ. ವೀರಪ ಭಾಗವಹಿಸುವರು. ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ದ.ಕ. ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ನ್ಯಾ. ಕೆ. ಸೋಮಶೇಖರ್ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಮುರಲಿಧರ ಪೈ.ಬಿ, ರಾಜ್ಯ ಹೈಕೋರ್ಟ್ ಮಹಾ ವಿಲೇಖನಾಧಿಕಾರಿ ಟಿ.ಜಿ. ಶಿವಶಂಕರೇಗೌಡ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್. ಶಶಿಧರ ಶೆಟ್ಟಿ, ಮೂಡುಬಿದಿರೆ ವಕೀಲರ ಸಂಘದ ಅಧ್ಯಕ್ಷ ಎಂ. ಸುಬ್ರಹ್ಮಣ್ಯ ತಂತ್ರಿ, ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಭಾಗವಹಿಸುವರು ಎಂದು ಪ್ರಕಟನೆ ತಿಳಿಸಿದೆ.