Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪಾದಚಾರಿ ಮಾರ್ಗಗಳಲ್ಲಿನ ಟ್ರಾನ್ಸ್...

ಪಾದಚಾರಿ ಮಾರ್ಗಗಳಲ್ಲಿನ ಟ್ರಾನ್ಸ್ ಫಾರ್ಮರ್ ತೆರವುಗೊಳಿಸುವ ವರದಿ ಕೇಳಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ26 Dec 2021 8:56 PM IST
share
ಪಾದಚಾರಿ ಮಾರ್ಗಗಳಲ್ಲಿನ ಟ್ರಾನ್ಸ್ ಫಾರ್ಮರ್ ತೆರವುಗೊಳಿಸುವ ವರದಿ ಕೇಳಿದ ಹೈಕೋರ್ಟ್

ಬೆಂಗಳೂರು, ಡಿ.26: ನಗರದ ಪಾದಚಾರಿ ಮಾರ್ಗಗಳಲ್ಲಿ ಅಳವಡಿಸಿರುವ ಟ್ರಾನ್ಸ್‍ಫಾರ್ಮರ್‍ಗಳನ್ನು ಎಷ್ಟು ದಿನಗಳಲ್ಲಿ ಮತ್ತು ಹೇಗೆ ಸ್ಥಳಾಂತರ ಮಾಡಲಾಗುತ್ತದೆ ಎಂಬ ಕುರಿತು ವಿವರವಾದ ಮಾಹಿತಿ ನೀಡುವಂತೆ ಹೈಕೋರ್ಟ್ ಬೆಸ್ಕಾಂಗೆ ನಿರ್ದೇಶಿಸಿದೆ.

ಪಾದಚಾರಿ ಮಾರ್ಗಗಳಲ್ಲಿ ಹಾಗೂ ರಾಜಕಾಲುವೆಗಳ ಅಂಚಿನಲ್ಲಿ ಅಳವಡಿಸಿರುವ ಅಪಾಯಕಾರಿ ಟ್ರಾನ್ಸ್‍ಫಾರ್ಮರ್‍ಗಳನ್ನು ತೆರವು ಮಾಡಲು ನಿರ್ದೇಶನ ಕೋರಿ ನಿವೃತ್ತ ವಿಂಗ್ ಕಮಾಂಡರ್ ಜಿ.ಬಿ.ಅತ್ರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಬೆಸ್ಕಾಂ ಪರ ವಕೀಲರನ್ನು ಪ್ರಶ್ನಿಸಿದ ಪೀಠ, ಟ್ರಾನ್ಸ್‍ಫಾರ್ಮರ್‍ಗಳನ್ನು ತೆರವುಗೊಳಿಸಲಾಗಿದೆಯೇ ಎಂದು ಪ್ರಶ್ನಿಸಿತು. ಇದಕ್ಕೆ ಉತ್ತರಿಸಿದ ವಕೀಲರು, ಈ ಸಂಬಂಧ ಹೆಚ್ಚುವರಿ ಪ್ರಮಾಣಪತ್ರ ಸಲ್ಲಿಸಿದ್ದೇವೆ. ಬೆಸ್ಕಾಂ ಹಾಗೂ ಬಿಬಿಎಂಪಿ ಅಧಿಕಾರಿಗಳ ಉನ್ನತ ಸಮಿತಿ ಸ್ಥಳಾಂತರಿಸಬೇಕಾದ ಟ್ರಾನ್ಸ್‍ಫಾರ್ಮರ್‍ಗಳನ್ನು ಗುರುತಿಸಿದೆ. ಅವುಗಳನ್ನು ಸ್ಥಳಾಂತರಿಸಲು ಏಜೆನ್ಸಿಗಳನ್ನು ಗುರುತಿಸಲಾಗಿದೆ. ಸದ್ಯದಲ್ಲೇ ಟೆಂಡರ್ ಪೂರ್ಣಗೊಳಿಸಿ ಕಾರ್ಯಾದೇಶ ನೀಡಲಾಗುವುದು ಎಂದರು.

ವಿವರಣೆಗೆ ತೃಪ್ತವಾಗದ ಪೀಠ, ನಿಮ್ಮ ಟೆಂಡರ್, ಕಾರ್ಯಾದೇಶ ವಿಚಾರಗಳು ನಮಗೆ ಬೇಕಿಲ್ಲ. ಟ್ರಾನ್ಸಫಾರ್ಮರ್‍ಗಳನ್ನು ತೆರವು ಮಾಡಲಾಗಿದೆಯೇ ಎಂಬುದಷ್ಟೇ ಮುಖ್ಯ. ಹೀಗಾಗಿ, ಎಷ್ಟು ದಿನದಲ್ಲಿ ಸ್ಥಳಾಂತರಿಸುತ್ತೀರಿ ಎಂದು ಪ್ರಶ್ನಿಸಿತು. ಆಗ ವಕೀಲರು ಅಂದಾಜು ಒಂದು ವರ್ಷ ಬೇಕಾಗಬಹುದು ಎಂದರು.

ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಪೀಠ, ಮೊದಲಿಗೆ ಪಾದಚಾರಿ ಮಾರ್ಗಗಳಲ್ಲಿ ಟ್ರಾನ್ಸ್‍ಫಾರ್ಮರ್‍ಗಳನ್ನು ಅಳವಡಿಸಿದ್ದೇ ತಪ್ಪು. ಈಗ ಒಂದು ವರ್ಷ ಬೇಕೆನ್ನುತ್ತೀರಿ. ಹೀಗೆ ಹೇಳಿದರೆ ಅದರ ಪರಿಣಾಮವನ್ನ ನೀವು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿತು.

ಅಲ್ಲದೇ, ಯಾವ ನಿಯಮಗಳ ಆಧಾರದಲ್ಲಿ ಪಾದಚಾರಿ ಮಾರ್ಗದಲ್ಲಿ ಟ್ರಾನ್ಸ್‍ಫಾರ್ಮರ್ ಅಳವಡಿಸಿದ್ದೀರಿ ಎಂದಿತು. ಉತ್ತರಿಸಿದ ವಕೀಲರು, ಟೆಲಿಗ್ರಾಪ್ ಕಾಯ್ದೆ ಅನ್ವಯ ಅಳವಡಿಸಲಾಗಿದೆ ಎಂದರು. ಇದಕ್ಕೆ ಆಕ್ಷೇಪಿಸಿದ ಸಿಜೆ, ನೀವು ಸರಿ ಇದ್ದಿದ್ದರೆ ಅವುಗಳನ್ನು ಸ್ಥಳಾಂತರಿಸುತ್ತಿರುವುದೇಕೆ ಎಂದು ಕಟುವಾಗಿ ಪ್ರಶ್ನಿಸಿದರು. ಅಂತಿಮವಾಗಿ, ಟ್ರಾನ್ಸ್‍ಫಾರ್ಮರ್‍ಗಳನ್ನು ಹೇಗೆ ಮತ್ತು ಎಷ್ಟು ದಿನಗಳಲ್ಲಿ ಸ್ಥಳಾಂತರಿಸುತ್ತೀರಿ ಎಂಬ ಕುರಿತು ಕ್ರಿಯಾ ಯೋಜನೆ ಸಲ್ಲಿಸಿ ಎಂದು ನಿರ್ದೇಶಿಸಿ, ವಿಚಾರಣೆ ಮುಂದೂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X