Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹರಿದ್ವಾರ ದ್ವೇಷಭಾಷಣ: ದುಷ್ಕರ್ಮಿಗಳ...

ಹರಿದ್ವಾರ ದ್ವೇಷಭಾಷಣ: ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ 76 ವಕೀಲರು, ಜಡ್ಜ್‌ ಗಳಿಂದ ಸಿಜೆಐಗೆ ಪತ್ರ

ವಾರ್ತಾಭಾರತಿವಾರ್ತಾಭಾರತಿ26 Dec 2021 9:40 PM IST
share
ಹರಿದ್ವಾರ ದ್ವೇಷಭಾಷಣ: ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ 76 ವಕೀಲರು, ಜಡ್ಜ್‌ ಗಳಿಂದ ಸಿಜೆಐಗೆ ಪತ್ರ

ಹೊಸದಿಲ್ಲಿ: "ಮ್ಯಾನ್ಮಾರ್‌ ನಲ್ಲಿ ನಡೆಸಿದ ಹತ್ಯಾಕಾಂಡದಂತೆ ಭಾರತದಲ್ಲಿ ಮುಸ್ಲಿಮರ ವಿರುದ್ಧ ಹಿಂಸಾಚಾರ ನಡೆಸಬೇಕು" ಸೇರಿದಂತೆ ಹಲವು ದ್ವೇಷಪೂರಿತ ಭಾಷಣಗಳನ್ನು ಮಾಡಿದ ಹರಿದ್ವಾರದ ಧರ್ಮ ಸಂಸತ್‌ ನಲ್ಲಿ ಭಾಗವಹಿಸಿದ್ದ ಆರೋಪಿಗಳನ್ನು ಇದುವರೆಗೂ ಬಂಧಿಸಲಾಗಿಲ್ಲ. ವಸೀಂ ರಿಝ್ವಿಯನ್ನು ಉಲ್ಲೇಖಿಸಿ ಮಾತ್ರ ಎಫ್‌ಐಆರ್‌ ಹಾಕಲಾಗಿದ್ದು, ಇದೀಗ ಈ ಎಲ್ಲಾ ದುಷ್ಕರ್ಮಿಗಳ ವಿರುದ್ಧ ಸ್ವಯಂಪ್ರೇರಿತ ಕ್ರಮ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್‌ ನ್ಯಾಯಾಧೀಶರಿಗೆ 76 ವಕೀಲರು ಸೇರಿದಂತೆ, ಮಾಜಿ ನ್ಯಾಯಾಧೀಶರು ಪತ್ರ ಬರೆದಿದ್ದಾರೆ.

ಡಿಸೆಂಬರ್‌ 17ರಿಂದ 19ರ ಮಧ್ಯೆ ನಡೆದ ಕಾರ್ಯಕ್ರಮದಲ್ಲಿ ಯತಿ ನರಸಿಂಗಾನಂದ ಸೇರಿದಂತೆ ಹಿಂದೂ ಯುವವಾಹಿನಿ ಎರಡು ಪ್ರತ್ಯೇಕ ಕಾರ್ಯಕ್ರಮಗಳನ್ನು ನಡೆಸಿದ್ದು, ಇದರಲ್ಲಿ ಮುಸ್ಲಿಮರ ವಿರುದ್ಧ ಹತ್ಯಾಕಾಂಡ ನಡೆಸುವಂತೆ ಬಹಿರಂಗವಾಗಿ ಕರೆ ನೀಡಲಾಗಿದೆ. ಇದು ಒಂದಿಡೀ ಸಮುದಾಯವನ್ನು ನಾಶಗೊಳಿಸಲು ನೀಡಿದ ಕರೆಯಾಗಿದೆ. ಕೇವಲ ಸಾಮಾನ್ಯ ದ್ವೇಷ ಭಾಷಣವೂ ಅಲ್ಲ. ಇದು ದೇಶದಲ್ಲಿರುವ ಮಿಲಯನ್‌ ಗಟ್ಟಲೆ ಮುಸ್ಲಿಮರ ಅಸ್ತಿತ್ವದ ಪ್ರಶ್ನೆಯಾಗಿದೆ. ಆದ್ದರಿಂದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ತನಿಖೆ ನಡೆಸಬೇಕೆಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಯತಿ ನರಸಿಂಗಾನಂದ, ಸಾಗರ್‌ ಸಿಂಧು ಮಹಾರಾಜ್‌, ಧರ್ಮದಾಸ್‌ ಮಹಾರಾಜ್‌, ಪ್ರೇಮಾನಂದ ಮಹಾರಾಜ್‌, ಸಾಧ್ವಿ ಅನ್ನಪೂರ್ಣ ಅಲಿಯಾಸ್‌ ಪೂಜಾ ಶಕುನ್‌ ಪಾಂಡೆ, ಸ್ವಾಮಿ ಆನಂದ ಸ್ವರೂಪ್‌, ಅಶ್ವನಿ ಉಪಾಧ್ಯಾಯ, ಸುರೇಶ್‌ ಚಾವಂಕೆ ಹಾಗೂ ಸ್ವಾಮಿ ಪ್ರಭೋದಾನಂದ ಗಿರಿ ಎಂಬ 9 ಮಂದಿ ಪ್ರಮುಖ ಆರೋಪಿಗಳನ್ನು ಪತ್ರದಲ್ಲಿ ಹೆಸರಿಸಲಾಗಿದೆ. 

हरिद्वार में एक समुदाय के खिलाफ भड़काऊ भाषणों का मामला सुप्रीम कोर्ट पहुंचा है। कोर्ट से मामले में स्वतः संज्ञान लेने की मांग की गई है।
प्रशान्त भूषण, दुष्यंत दवे, अंजना प्रकाश ( पूर्व जज, हाईकोर्ट) सहित 76 वक़ीलों ने CJI को पत्र लिखा है। #HaridwarHateAssembly @news24tvchannel pic.twitter.com/wuyWdEPcuO

— Prabhakar Kr Mishra (@PMishra_Journo) December 26, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X