Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಪು ಪುರಸಭಾ ಚುನಾವಣೆ: ಶೇ. 73.95...

ಕಾಪು ಪುರಸಭಾ ಚುನಾವಣೆ: ಶೇ. 73.95 ಮತದಾನ

ವಾರ್ತಾಭಾರತಿವಾರ್ತಾಭಾರತಿ27 Dec 2021 10:11 PM IST
share

ಕಾಪು : ಕಾಪು ಪುರಸಭಾ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ನಡೆದಿದ್ದು, 23 ವಾರ್ಡ್‍ಗಳಲ್ಲಿ ಒಟ್ಟು ಶೇ. 73.95 ರಷ್ಟು ಮತದಾನ ನಡೆದಿದೆ.

ಕೈಪುಂಜಾಲು ವಾರ್ಡಿನಲ್ಲಿ ಅತಿ ಹೆಚ್ಚುಶೇ. 80.12 ಮತದಾನವಾಗಿದ್ದು,  ಕೊಪ್ಪಲಂಗಡಿ ವಾರ್ಡಿನಲ್ಲಿ ಅತೀ ಕಡಿಮೆ ಶೇ. 65.87 ಮತದಾನವಾಗಿದೆ. ಬೆಳಗ್ಗೆ 9ರವರೆಗೆ ಶೇ. 16ರಷ್ಟು ಮತದಾನವಾಗಿದ್ದು, ಬಳಿಕ ಮಂದಗತಿಯಲ್ಲಿ ಮತದಾನ ನಡೆದಿದ್ದು, ಸಂಜೆಯ ವೇಳೆಗೆ ಮತದಾನ ಬಿರುಸಿನಿಂದ ಕೂಡಿತು. ಸಂಜೆಯವರೆಗೂ ಮತದಾನ ಶಾಂತಿಯುತವಾಗಿ ನಡೆಯಿತು. 

ಪುರಸಭಾ ಚುನಾವಣೆಗೆ ಕಾಂಗ್ರೆಸ್ ಮತ್ತು ಬಿಜೆಪಿ ತಲಾ 23 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಜೆಡಿಎಸ್ 7, ಎಸ್‍ಡಿಪಿಐ 9, ವೆಲ್ಪೇರ್ ಪಾರ್ಟಿ ಇಂಡಿಯಾ 2 ಮತ್ತು ಪಕ್ಷೇತರ 3 ಮಂದಿಯೂ ಸೇರಿದಂತೆ 67 ಮಂದಿ ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿದ್ದಾರೆ. 

ಶಾಸಕ ಲಾಲಾಜಿ ಆರ್. ಮೆಂಡನ್, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ ಹಾಗೂ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳು ಮತ್ತು ವೆಲ್ಪೇರ್ ಪಾರ್ಟಿ ಆಫ್ ಇಂಡಿಯಾ, ಎಸ್‍ಡಿಪಿಐನ ಪ್ರಮುಖರು ವಿವಿಧ ಮತಗಟ್ಟೆಗಳಿಗೆ ತೆರಳಿ ಕೊನೆಯ ಕ್ಷಣದವರೆಗೂ ಮತದಾರರನ್ನು ಸೆಳೆಯುವ ಪ್ರಯತ್ನ ನಡೆಸಿದರು. ಮೂಳೂರಿನ ದುಗ್ಗನ್ ತೋಟ ಮತ ಕೇಂದ್ರದಲ್ಲಿ 95 ವರ್ಷದ ಸೀತಾ ಪಿ ಬಂಗೇರಾರವರು ಗಾಲಿಕುರ್ಚಿಯಲ್ಲಿ ಬಂದು ಮತದಾನ ಮಾಡಿದರು. 

ಭಾರತ್ ನಗರ ವಾರ್ಡ್ ಹಿರಿಯ ಮಹಿಳಾ ಮತದಾರರಾದ 82 ವರ್ಷ ಪ್ರಾಯದ ಗಿರಿಜಾ ದೇವಾಡಿಗ ಅವರನ್ನು ಮತಗಟ್ಟೆ ಕೇಂದ್ರದಿಂದ ರಿಕ್ಷಾದವರೆಗೆ ಎತ್ತಿಕೊಂಡು ಹೋಗುವ ಮೂಲಕ ಪೊಲೀಸ್ ಸಿಬ್ಬಂದಿ ಅಶ್ವಿನಿ ಬೀಳಗಿ ಅವರು ಮತಗಟ್ಟೆ ಅಧಿಕಾರಿಗಳ ಮತ್ತು ಸ್ಥಳೀಯರ ಮೆಚ್ಚುಗೆಗೆ ಪಾತ್ರರಾದರು.

ಕಾಪು ಪುರಸಭೆ ವ್ಯಾಪ್ತಿಯ ಕೈಪುಂಜಾಲು ಸರಕಾರಿ ಶಾಲೆಯ ಮತಗಟ್ಟೆಯಲ್ಲಿ ಕೈಪುಂಜಾಲು ಮತ್ತು ಕರಾವಳಿ ವಾರ್ಡ್, ದಂಡತೀರ್ಥ ವಿದ್ಯಾಸಂಸ್ಥೆಯ ಮತಗಟ್ಟೆಯಲ್ಲಿ ಕೋತಲಕಟ್ಟೆ, ಕಲ್ಯಾ, ಭಾರತ ನಗರ, ದಂಡತೀರ್ಥ, ಪೊಲಿಪುಗುಡ್ಡೆ ವಾರ್ಡ್, ಪೊಲಿಪು ಶಾಲೆ ಮತಗಟ್ಟೆಯಲ್ಲಿ ಪೊಲಿಪು ವಾರ್ಡ್, ಕಾಪು ಪಡು ಶಾಲೆ ಮತಗಟ್ಟೆಯಲ್ಲಿ ಲೈಟ್ ಹೌಸ್, ಕಾಪು ಮಾದರಿ ಶಾಲೆ ವಠಾರದ ಮತಗಟ್ಟೆಯಲ್ಲಿ ಬೀಡು ಬದಿ, ಕಾಪು ಪೇಟೆ, ಕೊಪ್ಪಲಂಗಡಿ ವಾರ್ಡ್, ವಿದ್ಯಾನಿಕೇತನ ಶಾಲೆ ಮತಗಟ್ಟೆಯಲ್ಲಿ ಜನಾರ್ದನ ದೇವಸ್ಥಾನ ವಾರ್ಡ್, ಮೂಳೂರು ಸಿಎಸ್‍ಐ ಶಾಲೆಯ ಮತಗಟ್ಟೆಯಲ್ಲಿ ಮಂಗಳಪೇಟೆ ಮತ್ತು ದುಗ್ಗನ್ ತೋಟ ವಾರ್ಡ್, ಮೂಳೂರು ಸರಕಾರಿ ಶಾಲೆಯಲ್ಲಿ ತೊಟ್ಟಂ ವಾರ್ಡ್, ಮಲ್ಲಾರು ಗ್ರಾಮ ಪಂಚಾಯತ್ ಮತಗಟ್ಟೆಯಲ್ಲಿ ಕೊಂಬಗುಡ್ಡೆ, ಬಡಕರಗುತ್ತು ವಾರ್ಡ್, ಮಲ್ಲಾರು ಜನರಲ್ ಶಾಲೆ ಮತಗಟ್ಟೆಯಲ್ಲಿ ಜನರಲ್, ಗುಜ್ಜಿ ವಾರ್ಡ್, ಉರ್ದು ಶಾಲೆ ಮತಗಟ್ಟೆಯಲ್ಲಿ ಅಹಮದಿ ಮೊಹಲ್ಲಾ ಮತ್ತು ಕುಡ್ತಿಮಾರು ವಾರ್ಡ್ ಹಾಗೂ ಗರಡಿ ಬಳಿಯ ಅಂಗನವಾಡಿ ಮತಗಟ್ಟೆಯಲ್ಲಿ ಗರಡಿ ವಾರ್ಡ್‍ನ ಮತದಾನ ನಡೆಯಿತು.

ಕುಂದಾಪುರ ಉಪ ವಿಭಾಗಾಧಿಕಾರಿ ರಾಜು ಕೆ. ಅವರು ಕೆಲವು ಮತಗಟ್ಟೆಗಳಿಗೆ ಭೇಟಿ ನೀಡಿ ಮತದಾನ ಪ್ರಕ್ರಿಯೆಗಳನ್ನು ವೀಕ್ಷಿಸಿದರು. ಚುನಾವಣಾ ವೀಕ್ಷಕ ಮಹಮ್ಮದ್ ಇಸಾಕ್ ಮತ್ತು ಕಾಪು ತಹಶೀಲ್ದಾರ್ ಶ್ರೀನಿವಾಸ ಮೂರ್ತಿ ಕುಲಕರ್ಣಿ, ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವಡ ಹಾಗೂ ವಿವಿಧ ಅಧಿಕಾರಿಗಳು ಪ್ರತೀ ಮತಗಟ್ಟೆಗೂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ ಚಂದ್ರ ಹಾಗೂ ಕಾಪು ವೃತ್ತ ನಿರೀಕ್ಷಕ ಪ್ರಕಾಶ್, ಕಾರ್ಕಳ ವೃತ್ತ ನಿರೀಕ್ಷಕ ಸಂಪತ್ ಕುಮಾರ್ ನೇತೃತ್ವದಲ್ಲಿ ಕಾಪು, ಪಡುಬಿದ್ರಿ, ಶಿರ್ವ ಪಿಎಸ್‍ಐ, ಕ್ರೈಂ ಎಸ್‍ಐಗಳ ಸಹಿತವಾಗಿ ಪೊಲೀಸ್ ಸಿಬ್ಬಂದಿ ಚುನಾವಣಾ ಕರ್ತವ್ಯದಲ್ಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X