Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲೈಂಗಿಕ ಕಿರುಕುಳ ಕುರಿತಂತೆ ಜೆಎನ್‌ಯು...

ಲೈಂಗಿಕ ಕಿರುಕುಳ ಕುರಿತಂತೆ ಜೆಎನ್‌ಯು ಆಂತರಿಕ ದೂರು ಸಮಿತಿಯ ಸುತ್ತೋಲೆಗೆ ಟೀಕೆ

ವಾರ್ತಾಭಾರತಿವಾರ್ತಾಭಾರತಿ28 Dec 2021 2:36 PM IST
share
ಲೈಂಗಿಕ ಕಿರುಕುಳ ಕುರಿತಂತೆ ಜೆಎನ್‌ಯು ಆಂತರಿಕ ದೂರು ಸಮಿತಿಯ ಸುತ್ತೋಲೆಗೆ ಟೀಕೆ

ಹೊಸದಿಲ್ಲಿ,ಡಿ.28: ‘ತಮ್ಮ ಮತ್ತು ತಮ್ಮ ಪುರುಷ ಸ್ನೇಹಿತರ ನಡುವೆ ಸ್ಪಷ್ಟವಾದ ಗೆರೆಯನ್ನು ಎಳೆಯುವುದು ಹುಡುಗಿಯರಿಗೆ ಗೊತ್ತಿರಬೇಕು’ ಎಂದು ಸೂಚಿಸಿರುವ ದಿಲ್ಲಿಯ ಜವಾಹರಲಾಲ ನೇಹರು ವಿವಿ (ಜೆಎನ್‌ಯು)ಯ ‘ಸ್ತ್ರೀ ದ್ವೇಷಿ’ ಸುತ್ತೋಲೆಯನ್ನು ಹಿಂದೆಗೆದುಕೊಳ್ಳುವಂತೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಆಗ್ರಹಿಸಿದ್ದಾರೆ.

ಲೈಂಗಿಕ ಕಿರುಕುಳ ಕುರಿತು ಜ.17ರಂದು ಕೌನ್ಸೆಲಿಂಗ್ ಅಧಿವೇಶನಕ್ಕಾಗಿ ಜೆಎನ್‌ಯು ಹೊರಡಿಸಿರುವ ಸುತ್ತೋಲೆಯನ್ನು ಟ್ವಿಟರ್ ನಲ್ಲಿ ಟ್ಯಾಗ್ ಮಾಡಿರುವ ಶರ್ಮಾ, ಅದನ್ನು ಹಿಂದೆಗೆದುಕೊಳ್ಳುವಂತೆ ಕೋರಿದ್ದಾರೆ. ‘ಎಲ್ಲ ಬೋಧನೆಗಳು ಯಾವಾಗಲೂ ಹುಡುಗಿಯರಿಗಾಗಿಯೇ ಇರುವುದು ಏಕೆ? ಇದು ಕಿರುಕುಳ ನೀಡುವವರಿಗೆ ಪಾಠ ಹೇಳುವ ಸಮಯವಾಗಿದೆಯೇ ಹೊರತು ಬಲಿಪಶುಗಳಿಗಲ್ಲ. ಜೆಎನ್‌ಯುದ ಆಂತರಿಕ ಸಮಿತಿಯು ಸಂತ್ರಸ್ತರನ್ನು ಕೇಂದ್ರೀಕರಿಸಿಕೊಂಡು ನಿಲುವು ಹೊಂದಿರಬೇಕೇ ಹೊರತು ಬೇರೆಯದಲ್ಲ ’ಎಂದು ಹೇಳಿದ್ದಾರೆ.

ಜೆಎನ್‌ಯು ಆಂತರಿಕ ದೂರುಗಳ ಸಮಿತಿ(ಐಸಿಸಿ)ಯು ಈ ಸುತ್ತೋಲೆಯನ್ನು ವಿವಿಯ ವೆಬ್‌ಸೈಟ್‌ನಲ್ಲಿ ಅಪ್ಲೋಡ್ ಮಾಡಿದೆ. ಪ್ರತಿ ತಿಂಗಳು ಇಂತಹ ಅಧಿವೇಶನವನ್ನು ನಡೆಸಲಾಗುವುದು ಎಂದು ಅದು ತಿಳಿಸಿದೆ.

‘ಕೌನ್ಸೆಲಿಂಗ್ ಅಧಿವೇಶನ ಏಕೆ ಅಗತ್ಯ?’ ಎಂಬ ಉಪಶೀರ್ಷಿಕೆಯಡಿ,ಲೈಂಗಿಕ ಕಿರುಕುಳದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವನ್ನು ಮೂಡಿಸುವುದಾಗಿ ಸಮಿತಿಯು ಸುತ್ತೋಲೆಯಲ್ಲಿ ಹೇಳಿದೆ.

‘ಆಪ್ತ ಸ್ನೇಹಿತರಿಂದಲೇ ಹುಡುಗಿಯರು ಲೈಂಗಿಕ ಕಿರುಕುಳಕ್ಕೆ ಒಳಗಾಗುತ್ತಿರುವ ಹಲವಾರು ಪ್ರಕರಣಗಳು ಐಸಿಸಿಯ ಗಮನಕ್ಕೆ ಬಂದಿವೆ. ಹುಡುಗರು ಸಾಮಾನ್ಯವಾಗಿ ಕೆಲವೊಮ್ಮೆ ಅನುದ್ದಿಷ್ಟವಾಗಿ, ಕೆಲವೊಮ್ಮೆ ಉದ್ದೇಶಪೂರ್ವಕವಾಗಿ ಗೆಳೆತನದ ತಮಾಷೆ ಮತ್ತು ಲೈಂಗಿಕ ಕಿರುಕುಳದ ನಡುವಿನ ತೆಳುವಾದ ಗೆರೆಯನ್ನು ದಾಟುತ್ತಾರೆ. ಇಂತಹ ಕಿರುಕುಳಗಳನ್ನು ತಪ್ಪಿಸಲು ತಮ್ಮ ಮತ್ತು ತಮ್ಮ ಪುರುಷ ಸ್ನೇಹಿತರ ನಡುವೆ ಸ್ಪಷ್ಟವಾದ ಗೆರೆಯನ್ನು ಹೇಗೆ ಎಳೆಯಬೇಕು ಎನ್ನುವುದು ಹುಡುಗಿಯರಿಗೆ ತಿಳಿದಿರಬೇಕು ’ ಎಂದು ತಿಳಿಸಿರುವ ಸುತ್ತೋಲೆಯು,ಯಾವುದೇ ರೀತಿಯ ಲೈಂಗಿಕ ಕಿರುಕುಳದತ್ತ ಐಸಿಸಿಯು ಶೂನ್ಯ ಸಹಿಷ್ಣುತೆ ನೀತಿಯನ್ನು ಹೊಂದಿದೆ ಎಂದು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X