Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಾರತ ಅತ್ಯಂತ ವೇಗದ ಆರ್ಥಿಕ ಅಭಿವೃದ್ಧಿ...

ಭಾರತ ಅತ್ಯಂತ ವೇಗದ ಆರ್ಥಿಕ ಅಭಿವೃದ್ಧಿ ಹೊಂದುತ್ತಿರುವ ದೇಶ : ಸಚಿವೆ ನಿರ್ಮಲಾ ಸೀತಾರಾಮನ್

ವಾರ್ತಾಭಾರತಿವಾರ್ತಾಭಾರತಿ28 Dec 2021 10:27 PM IST
share
ಭಾರತ ಅತ್ಯಂತ ವೇಗದ ಆರ್ಥಿಕ ಅಭಿವೃದ್ಧಿ ಹೊಂದುತ್ತಿರುವ ದೇಶ : ಸಚಿವೆ ನಿರ್ಮಲಾ ಸೀತಾರಾಮನ್

ಮಣಿಪಾಲ, ಡಿ.28: ವಿಶ್ವದಲ್ಲಿ ಸದ್ಯ ಭಾರತ ಅತ್ಯಂತ ವೇಗವಾಗಿ ಆರ್ಥಿಕ ಅಭಿವೃದ್ಧಿ ಹೊಂದುತ್ತಿರುವ ದೇಶವಾಗಿದೆ ಎಂಬುದನ್ನು ಐಎಂಎಫ್‌ನಂಥ ಜಾಗತೀಯ ಏಜೆನ್ಸಿಗಳು ಗುರುತಿಸಿವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಕಮ್ಯುನಿಕೇಷನ್ ವತಿಯಿಂದ ಇಂದು ನಡೆದ ಎಂ.ವಿ.ಕಾಮತ್ ಶತಮಾನೋತ್ಸವ ಸಂಸ್ಮರಣ ಉಪನ್ಯಾಸದಲ್ಲಿ ‘ಭಾರತ ಮತ್ತು ಸಾಂಕ್ರಾಮಿಕೋತ್ತರ ಆರ್ಥಿಕ ಮರು ಹೊಂದಾಣಿಕೆ’ ವಿಷಯದ ಮೇಲೆ ವೆಬಿನಾರ್ ಮೂಲಕ ಹೊಸದಿಲ್ಲಿಯಿಂದ ಮಾತನಾಡುತಿದ್ದರು.

ಭಾರತದಲ್ಲಿ ಈಗ ಸುಸ್ಥಿರ ಬೆಳವಣಿಗೆಯ ಗತಿಯನ್ನು ಕಾಯ್ದುಕೊಳ್ಳಲಾಗಿದೆ. ಉಳಿತಾಯ ಹಾಗೂ ಹೂಡಿಕೆಯ ಸ್ವಭಾವದಲ್ಲಿ ಬದಲಾವಣೆಯಾಗುತ್ತಿದೆ. ಸಾಧನೆ ಮತ್ತು ಪ್ರಗತಿಯ ಆತ್ಮವಿಶ್ವಾಸದದಿಂದ ಕೂಡಿದ ಹೊಸ ಭಾರತ ಪ್ರವರ್ಧಮಾನಕ್ಕೆ ಬರುತ್ತಿದೆ ಎಂದು ಸಚಿವೆ ಅಭಿಪ್ರಾಯಪಟ್ಟರು.

ಇದರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಕೃತಿ ಸಹ್ಯ ಇಂಧನ ಮೂಲದ ಅಭಿವೃದ್ಧಿಗೆ ಯಶಸ್ವಿ ಚಾಲನೆ ನೀಡಿದ್ದಾರೆ. ಕೊರೋನ ಲಾಕ್‌ಡೌನ್‌ನ್ನು ದೇಶದಲ್ಲಿ ಅತ್ಯಂತ ವೈಜ್ಞಾನಿಕ ರೀತಿಯಲ್ಲಿ ಜಾರಿಗೊಳಿಸಲಾಗಿದೆ. ದೇಶದ 80 ಕೋಟಿ ಜನತೆಗೆ ಆಹಾರಧಾನ್ಯಗಳನ್ನು ವಿತರಿಸಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ನುಡಿದರು.

ದೇಶದ ಶೇ.95ರಷ್ಟು ಜನತೆಗೆ ಕೋವಿಡ್‌ನ ಮೊದಲ ಡೋಸ್ ಲಸಿಕೆಯನ್ನು ಕೇವಲ 12 ತಿಂಗಳೊಳಗೆ ನೀಡಲಾಗಿದೆ. ಎರಡನೇ ಡೋಸ್ ಲಸಿಕೆಯನ್ನು ಈಗಾಗಲೇ ಶೇ.60ರಷ್ಟು ಜನರಿಗೆ ನೀಡಲಾಗಿದೆ. ಆರೋಗ್ಯ ಕಾರ್ಯಕರ್ತರು ಹಾಗೂ ಮುಂಚೂಣಿ ಕಾರ್ಯಕರ್ತರಿಗೆ ಮುನ್ನೆಚ್ಚರಿಕೆ ಡೋಸ್ ಹಾಗೂ 15ರಿಂದ 18 ವರ್ಷದೊಳಗಿನವರಿಗೆ ಲಸಿಕೆಯನ್ನು ಶೀಘ್ರದಲ್ಲೇ ನೀಡಲಾಗುವುದು ಎಂದರು.

ಕೊರೋನದಿಂದ ದೇಶದ ಆರ್ಥಿಕತೆಗೆ ತೊಂದರೆಯಾಗದಂತೆ ಮೈಕ್ರೋ ಕಂಟೈನ್‌ಮೆಂಟ್ ಝೋನ್‌ಗಳನ್ನು ಮಾಡಲಾಗುತ್ತಿದೆ. ದೇಶದಲ್ಲೀಗ ಐತಿಹಾಸಿಕ ರೀತಿಯಲ್ಲಿ ಆರ್ಥಿಕತೆಯ ಮರು ಹೊಂದಾಣಿಕೆ ನಡೆಯುತ್ತಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X