ಮಂಗಳೂರು ನ್ಯಾಯಾಧೀಶರ ವಸತಿಗೃಹಗಳ ನಿರ್ಮಾಣಕ್ಕೆ ನ್ಯಾ. ಅಬ್ದುಲ್ ನಝೀರ್ ರಿಂದ ಶಿಲಾನ್ಯಾಸ
![ಮಂಗಳೂರು ನ್ಯಾಯಾಧೀಶರ ವಸತಿಗೃಹಗಳ ನಿರ್ಮಾಣಕ್ಕೆ ನ್ಯಾ. ಅಬ್ದುಲ್ ನಝೀರ್ ರಿಂದ ಶಿಲಾನ್ಯಾಸ ಮಂಗಳೂರು ನ್ಯಾಯಾಧೀಶರ ವಸತಿಗೃಹಗಳ ನಿರ್ಮಾಣಕ್ಕೆ ನ್ಯಾ. ಅಬ್ದುಲ್ ನಝೀರ್ ರಿಂದ ಶಿಲಾನ್ಯಾಸ](https://www.varthabharati.in/sites/default/files/images/articles/2021/12/29/319376-1640754284.gif)
ಮಂಗಳೂರು, ಡಿ.29: ನಗರದ ಹ್ಯಾಟ್ ಹಿಲ್ ಬಳಿ ನ್ಯಾಯಾಧೀಶರ ವಸತಿಗೃಹಗಳ ನಿರ್ಮಾಣಕ್ಕೆ (ಬ್ಲಾಕ್-ಬಿ) ಸುಪ್ರೀಂ ಕೋಟ್೯ನ ನ್ಯಾಯಮೂರ್ತಿ ಎಸ್. ಅಬ್ದುಲ್ ನಝೀರ್ ಅವರು ಬುಧವಾರ ಬೆಳಗ್ಗೆ ಶಿಲಾನ್ಯಾಸ ನೆರವೇರಿಸಿದರು.
ರಾಜ್ಯ ಹೈಕೋರ್ಟ್ ನ್ಯಾಯಾಧೀಶರು ಹಾಗೂ ದ.ಕ. ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಕೆ.ಸೋಮಶೇಖರ್, ಹೈಕೋರ್ಟ್ ನ ನ್ಯಾಯಮೂರ್ತಿ ಮುಹಮ್ಮದ್ ನವಾಝ್, ಹೈಕೋರ್ಟ್ ನ ರಿಜಿಸ್ಟ್ರರ್ ಜನರಲ್ ಶಿವಶಂಕರೇ ಗೌಡ, ದ.ಕ. ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶ ಮುರಳೀಧರ್ ಪೈ. ಬಿ. ಸುಪ್ರೀಂ ಕೋರ್ಟ್ ನ್ಯಾಯಾಧೀಶರೊಂದಿಗೆ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಜತೆಯಾದರು.
ಈ ಸಂದರ್ಭದಲ್ಲಿ ನ್ಯಾಯಾಧೀಶರು, ನ್ಯಾಯಾಂಗ ಇಲಾಖೆಯ ಅಧಿಕಾರಿಗಳು, ಲೋಕೋಪಯೋಗಿ ಇಲಾಖೆಯ ಅಧೀಕ್ಷಕ ಅಭಿಯಂತರ ಗಣೇಶ್, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೆ.ಟಿ. ಚಂದ್ರಶೇಖರ್, ಸೆಕ್ಷನ್ ಆಫೀಸರ್ ಶ್ರೀಧರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.