Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಾಧ್ಯಮವು ನ್ಯಾಯಾಂಗದ ಮೇಲೆ ನಂಬಿಕೆ,...

ಮಾಧ್ಯಮವು ನ್ಯಾಯಾಂಗದ ಮೇಲೆ ನಂಬಿಕೆ, ವಿಶ್ವಾಸವಿರಿಸಬೇಕು: ಸಿಜೆಐ ರಮಣ

"ನಿಮ್ಮನ್ನು ನೀವು ಆಡಳಿತದ ಸಿದ್ಧಾಂತಕ್ಕೆ ಒಪ್ಪಿಸಿಕೊಳ್ಳುವುದು ವಿನಾಶಕ್ಕೆ ದಾರಿ ಮಾಡಿಕೊಟ್ಟಂತಾಗುತ್ತದೆ"

ವಾರ್ತಾಭಾರತಿವಾರ್ತಾಭಾರತಿ30 Dec 2021 1:04 PM IST
share
ಮಾಧ್ಯಮವು ನ್ಯಾಯಾಂಗದ ಮೇಲೆ ನಂಬಿಕೆ, ವಿಶ್ವಾಸವಿರಿಸಬೇಕು: ಸಿಜೆಐ ರಮಣ

ಮುಂಬೈ,ಡಿ.30: ನ್ಯಾಯಾಲಯದ ತೀರ್ಪುಗಳ ಕುರಿತು ‘ಧರ್ಮೋಪದೇಶ’ ಮಾಡುವ ಹಾಗೂ ನ್ಯಾಯಾಧೀಶರುಗಳನ್ನು ಖಳನಾಯಕರಂತೆ ಬಿಂಬಿಸುವ ಪ್ರವೃತ್ತಿ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದ್ದು, ಅದಕ್ಕೆ ಕಡಿವಾಣ ಹಾಕಬೇಕಾಗಿದೆ ಎಂದು ಭಾರತದ ಮುಖ್ಯನ್ಯಾಯಮೂರ್ತಿ (ಸಿಜೆಐ) ಎನ್.ವಿ. ರಮಣ ತಿಳಿಸಿದ್ದಾರೆ.

ಮುಂಬೈ ಪ್ರೆಸ್ ಕ್ಲಬ್‌ನಲ್ಲಿ  ಬುಧವಾರ ನಡೆದ ರೆಡ್ ಇಂಕ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಮುಖ್ಯ ಭಾಷಣ ಮಾಡಿದ ಅವರು ‘‘ನ್ಯಾಯಾಂಗವು ಬೃಹತ್ ಸ್ತಂಭವಾಗಿದೆ. ಎಲ್ಲಾ ರೀತಿಯ ಅಡೆತಡೆಗಳ ನಡುವೆಯೂ ಅದು ಸಾಂವಿಧಾನಿಕ ಗುರಿಗಳನ್ನು ಮುನ್ನಡೆಸಲು ಶ್ರಮಿಸುತ್ತಿದೆ. ಮಾಧ್ಯಮರಂಗವು ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಹಾಗೂ ವಿಶ್ವಾಸವನ್ನಿರಿಸಿಕೊಳ್ಳಬೇಕು. ಪ್ರಜಾಪ್ರಭುತ್ವದ ಪ್ರಮುಖ ಪಾಲುದಾರನಾಗಿರುವ ಮಾಧ್ಯಮರಂಗವು ದುಷ್ಟಶಕ್ತಿಗಳ ಯೋಜಿತ ದಾಳಿಯಿಂದ ನ್ಯಾಯಾಂಗ ವ್ಯವಸ್ಥೆಯನ್ನು ರಕ್ಷಿಸುವ ಕರ್ತವ್ಯವನ್ನು ಹೊಂದಿದೆ. ಪ್ರಜಾಪ್ರಭುತ್ವವನ್ನು ಮುನ್ನಡೆಸುವ ಕಾರ್ಯಾಚರಣೆಯಲ್ಲಿ ಹಾಗೂ ರಾಷ್ಟ್ರೀಯ ಹಿತಾಸಕ್ತಿಯನ್ನು ಉತ್ತೇಜಿಸುವಲ್ಲಿ ನ್ಯಾಯಾಂಗ ಹಾಗೂ ಮಾಧ್ಯಮರಂಗ ಇವೆರಡೂ ಜೊತೆಗೂಡಬೇಕಾಗಿದೆ ಮತ್ತು ನಾವಿಬ್ಬರೂ ಜೊತೆಯಾಗಿ ಸಾಗಬೇಕಾಗಿದೆ.

ಪತ್ರಕರ್ತನಾಗಿ ತನ್ನ ಸಂಕ್ಷಿಪ್ತ ವೃತ್ತಿಜೀವನವನ್ನು ಸ್ಮರಿಸಿಕೊಂಡ ಸಿಜೆಐ ಅವರು ವೃತ್ತಿಪರ ಪತ್ರಕರ್ತರ ಬವಣೆಗಳನ್ನು ಪ್ರಸ್ತಾವಿಸಿದರು. ಅಧಿಕಾರದ ಮುಂದೆ ಸತ್ಯವನ್ನು ಹೇಳುವುದು ಹಾಗೂ ಸಮಾಜಕ್ಕೆ ಕನ್ನಡಿ ಹಿಡಿಯುವುದು ಮಾಧ್ಯಮಗಳ ಅಗಾಧವಾದ ಹೊಣೆಗಾರಿಕೆಯಾಗಿದೆ. ಪತ್ರಕರ್ತರು ಅಪಾರವಾದ ಒತ್ತಡವನ್ನು ಎದುರಿಸುತ್ತಾ ಇರಬೇಕಾಗುತ್ತದೆ ಸಮಕಾಲೀನ ಜಗತ್ತಿನಲ್ಲಿ ಪತ್ರಕರ್ತನಾಗಿ ಕೆಲಸ ಮಾಡುವುದೆಂದರೆ ಕತ್ತಿಯ ಅಲಗಿನ ಮೇಲೆ ನರ್ತಿಸಿದಂತೆ ಎಂದವರು ಹೇಳಿದರು. ರಾಜಕೀಯ ನಾಯಕರು, ಅಧಿಕಾರಿವರ್ಗ, ಎಲ್ಲಾ ವಿಧದ ಮಾಫಿಯಾಗಳು ಹಾಗೂ ಕಾನೂನು ಭಂಜಕರು ಇವರ್ಯಾರಿಗೂ ವೃತ್ತಿಪರ ಪತ್ರಕರ್ತರು ಹಿತವೆನಿಸುವುದಿಲ್ಲವೆಂದು ರಮಣ ವ್ಯಾಖ್ಯಾನಿಸಿದರು.

ಡಿಜಿಟಲ್ ಮಾಧ್ಯಮ ವೇದಿಕೆಗಳು ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿನ ವರದಿಗಾರಿಕೆಗಳಿಂದಾಗಿ ಕೆಲವು ವಿಷಯಗಳಲ್ಲಿ ಒಳಿತಾಗಿದೆ. ಆದಾಗ್ಯೂ ಇವುಗಳಿಂದಾಗಿ ಪತ್ರಿಕೋದ್ಯಮದಲ್ಲಿ ಕೆಲವು ನಿರ್ದಿಷ್ಟ ಸಮಸ್ಯೆಗಳು ಉದ್ಭವಿಸಿದ್ದು, ಇದು ಕಳವಳಕಾರಿಯಾಗಿದೆ ಎಂದರು.

ರೇಟಿಂಗ್ ಪಡೆಯುವ ಪೈಪೋಟಿಯಲ್ಲಿ, ಪ್ರಕಟಣೆಗೆ ಮುನ್ನ ಸುದ್ದಿ ಅಥವಾ ವರದಿಯನ್ನು ದೃಢಪಡಿಸಬೇಕಾದ ನಿಯಮದ ಪಾಲನೆಯಾಗುತ್ತಿಲ್ಲ. ಇದು ತಪ್ಪು ವರದಿಗಾರಿಕೆಗೆ ಕಾರಣವಾಗಿದೆ ಎಂದವರು ತಿಳಿಸಿದರು. ಸಾಮಾಜಿಕ ಜಾಲತಾಣಗಳು ಕ್ಷಣ ಮಾತ್ರದಲ್ಲಿ ತಪ್ಪು ಸುದ್ದಿಗಳನ್ನು ಪ್ರಕಟಿಸುತ್ತವೆ. ಒಮ್ಮೆ ಪ್ರಕಟವಾದಲ್ಲಿ ಅದನ್ನು ಹಿಂತೆಗೆಯುವುದು ಕಷ್ಟಸಾಧ್ಯ. ಮುದ್ರಣ ಹಾಗೂ ಇಲೆಕ್ಟ್ರಾನಿಕ್ ಮಾಧ್ಯಮಗಳಂತಲ್ಲದೆ. ಯೂಟ್ಯೂಬ್‌ನಂತಹ ಸಾಮಾಜಿಕ ಜಾಲತಾಣ ವೇದಿಕೆಗಳಲ್ಲಿ ಜನರ ಬದುಕು ಹಾಗೂ ವೃತ್ತಿಯನ್ನು ಹಾಳಗೆಡವಬಲ್ಲಂತಹ ನಿಂದನಾತ್ಮಕ ಹಾಗೂ ಮಾನಹಾನಿಕಾರಕ ಸುದ್ದಿಗಳನ್ನು ಪ್ರಸಾರ ಮಾಡಿದರೂ ಕೂಡಾ ಅವುಗಳನ್ನು ತಡೆಗಟ್ಟಲು ಅಸಾಧ್ಯವಾಗಿದೆ. ಇಂತಹ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಲು ಮುಂದೆ ಬರುವಂತೆ ಸಿಜೆಐ ಅವರು ಮಾಮರಂಗದ ಮಂದಿಗೆ ಮನವಿ ಮಾಡಿದರು.

ಸುದ್ದಿಯ ವರದಿಗಾರಿಕೆಯಲ್ಲಿ ತಮ್ಮ ಸೈದ್ಧಾಂತಿಕ ನಿಲುವುಗನ್ನು ಹಾಗೂ ಪೂರ್ವಾಗ್ರಹಗಳನ್ನು ತೂರಿಸುವಂತಹ ಪ್ರವೃತ್ತಿ ಹೆಚ್ಚುತ್ತಿರುವುದನ್ನೂ ಕೂಡಾ ತಾನು ಗಮನಿಸಿರುವುದಾಗಿ ರಮಣ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X