Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಡಿ.31ರ ಕರ್ನಾಟಕ ಬಂದ್ ಮುಂದೂಡಲಾಗಿದೆ:...

ಡಿ.31ರ ಕರ್ನಾಟಕ ಬಂದ್ ಮುಂದೂಡಲಾಗಿದೆ: ವಾಟಾಳ್ ನಾಗರಾಜ್

ವಾರ್ತಾಭಾರತಿವಾರ್ತಾಭಾರತಿ30 Dec 2021 6:48 PM IST
share
ಡಿ.31ರ ಕರ್ನಾಟಕ ಬಂದ್ ಮುಂದೂಡಲಾಗಿದೆ: ವಾಟಾಳ್ ನಾಗರಾಜ್

ಬೆಂಗಳೂರು, ಡಿ.30: ಕನ್ನಡಿಗರು ಹಾಗೂ ಮರಾಠಿಗರ ಮಧ್ಯೆ ದ್ವೇಷ ಹುಟ್ಟುಹಾಕುತ್ತಿರುವ  ಎಂಇಎಸ್ ಸಂಘನೆಯನ್ನು ನಿಷೇಧಿಸಬೇಕೆಂದು ಒತ್ತಾಯಿಸಿ ವಿವಿಧ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಡಿ.31ರ ಕರ್ನಾಟಕ ಬಂದ್ ಅನ್ನು ಮುಂದೂಡಲಾಗಿದೆ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.

ಗುರುವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜತೆ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬಸವರಾಜ ಬೊಮ್ಮಾಯಿ ಅವರು ಎಂಇಎಸ್ ಸಂಘಟನೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಡಿ.31ರ ಕರ್ನಾಟಕ ಬಂದ್ ಅನ್ನು ಮುಂದೂಡಲಾಗಿದೆ ಎಂದು ತಿಳಿಸಿದರು.  

ಎಂಇಎಸ್ ನಿಷೇಧಕ್ಕೆ ಸಂಬಂಧಿಸಿದಂತೆ ಸಿಎಂ ಬೊಮ್ಮಾಯಿ ಅವರಿಗೆ ಯಾವುದೇ ಗಡುವು ನೀಡಿಲ್ಲ. ಆದರೆ, ಎಂಇಎಸ್ ಅನ್ನು ರಾಜ್ಯದಲ್ಲಿ ನಿಷೇಧಿಸಲೇಬೇಕು ಎಂದು ಒತ್ತಾಯಿಸಿದ್ದೇವೆ ಎಂದರು. 

ಸಿಎಂ ಅವರು ತಮಗೆ ಬಂದ್‍ಗೆ ಸಂಬಂಧಿಸಿದಂತೆ ಎರಡು ಬಾರಿ ಮನವಿ ಮಾಡಿದ್ದರಿಂದ ಇಂದು ಸಿಎಂ ಗೃಹ ಕಚೇರಿಗೆ ಬಂದಿದ್ದೇನೆ. ಸಿಎಂ ಅವರೂ ಕಾನೂನು ಪ್ರಕಾರ ಎಂಇಎಸ್ ನಿಷೇಧಿಸಲು ಯಾವ ಕ್ರಮಗಳು ಇವೆ ಎಂಬುದನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ಅಲ್ಲದೆ, ಬಂದ್ ಕರೆ ಹಿಂದೆ ಪಡೆಯಿರಿ ಎಂದು ಸಿಎಂ ಅವರು ಹೇಳಿದ್ದರಿಂದ ಅವರ ಮಾತಿಗೆ ಗೌರವ ನೀಡಿ, ಬಂದ್ ವಾಪಸ್ ಪಡೆದಿದ್ದೇವೆ ಎಂದರು.  

ನನ್ನ ಮೇಲೆ ನಿರಂತರ ಒತ್ತಡ ಇತ್ತು. ಇಂತಹ ಒತ್ತಡ ಎಂದೂ ಆಗಿರಲಿಲ್ಲ. ಒತ್ತಡದಿಂದ ನನಗೆ ಮಾನಸಿಕವಾಗಿ ಬೇಸರವಾಯಿತು. ಕನ್ನಡ ನಾಡು ನುಡಿಗಾಗಿ, ಎಂಇಎಸ್ ನಿಷೇಧಕ್ಕಾಗಿ ನಾವು ಬಂದ್ ಮಾಡಲು ನಿರ್ಧಾರ ಮಾಡಿದ್ದೆವು, ಯಾರ ವಿರುದ್ಧವೂ ಅಲ್ಲ ಎಂದು ವಾಟಾಳ್ ನಾಗರಾಜ್ ತಿಳಿಸಿದರು.

‘ನಾವು ನಿಮ್ಮ ಜೊತೆ ಸದಾ ಇರುತ್ತೇವೆ. ಬಂದ್ ಮಾಡಬೇಡಿ’ ಎಂದು ಮುಖ್ಯಮಂತ್ರಿಗಳು ಪ್ರೀತಿ ಮತ್ತು ಅಭಿಮಾನದಿಂದ ಹೇಳಿದರು. ಬಂದ್ ಮಾಡಿದರೆ ರಾಜ್ಯಕ್ಕೆ ಏನೋ ಅನಾಹುತ ಆಗುತ್ತದೆ, ನಮ್ಮ ಮೇಲೆ ದಬ್ಬಾಳಿಕೆಯ ಮಾತುಗಳೆಲ್ಲ ಬಂದವು. ಯಾರ ಮಾತಿಗೂ ತಲೆ ಕೆಡಿಸಿಕೊಂಡಿರಲಿಲ್ಲ. ಡಿ.30ರ ಬೆಳಗ್ಗೆಯಿಂದಲೂ ನಮ್ಮ ಒಕ್ಕೂಟದವರು ಬಂದ್ ಬೇಡ ಎಂದು ಒತ್ತಡ ತಂದಿದ್ದರು. ಅವರ ಮಾತಿಗೂ ಬೆಲೆ ಕೊಡಬೇಕಾಯಿತು, ಮುಖ್ಯಮಂತ್ರಿಗಳ ಮಾತಿಗೂ ಬೆಲೆ ಕೊಡಬೇಕಾಯಿತು. ಹೀಗಾಗಿ, ಶುಕ್ರವಾರ ನಡೆಯಬೇಕಾದ ಬಂದ್ ನಡೆಯುವುದಿಲ್ಲ ಎಂದು ತಿಳಿಸಿದರು.

ಎಂಇಎಸ್ ನಿಷೇಧದ ಬಗ್ಗೆ ಪರಿಶೀಲಿಸುತ್ತೇವೆ

ವಾಟಾಳ್ ನಾಗರಾಜ್ ಜೊತೆಗೆ ಮಾತನಾಡಿದ್ದೇವೆ. ಕನ್ನಡಪರ ಸಂಘಟನೆಗಳ ನಾಯಕರು ತಮ್ಮ ಅಭಿಪ್ರಾಯ ಈಗಾಗಲೇ ತಿಳಿಸಿದ್ದಾರೆ. ಕನ್ನಡದ ರಕ್ಷಣೆಗಾಗಿ ನಮ್ಮ ಸರಕಾರ ನಿಮ್ಮ ಜೊತೆಗೆ ಗಟ್ಟಿಯಾಗಿ ನಿಲ್ಲುತ್ತದೆ ಎಂದು ಹೇಳಿದ್ದೇನೆ. ನನ್ನ ಮನವಿಗೆ ಸ್ಪಂದಿಸಿ, ಬಂದ್ ಕರೆ ಹಿಂಪಡೆದಿರುವ ಅವರ ನಿರ್ಧಾರವನ್ನು ನಾನು ಗೌರವಿಸುತ್ತೇನೆ. ಎಂಇಎಸ್ ನಿಷೇಧದ ಬಗ್ಗೆ ಕಾನೂನು ಪ್ರಕಾರ ಪರಿಶೀಲಿಸುತ್ತಿದ್ದೇವೆ. ಈ ಹಿಂದೆಯೂ ಈ ಮಾತು ಹೇಳಿದ್ದೆ. ಈಗ ಮತ್ತೊಮ್ಮೆ ಪುನರುಚ್ಚರಿಸುತ್ತಿದ್ದೇನೆ.’ 

-ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ

ಬೃಹತ್ ರ್‍ಯಾಲಿ

ಕನ್ನಡಿಗರು ಹಾಗೂ ಮರಾಠಿಗರ ಮಧ್ಯೆ ದ್ವೇಷ ಹುಟ್ಟುಹಾಕುತ್ತಿರುವ ಎಂಇಎಸ್ ಸಂಘನೆಯನ್ನು ನಿಷೇಧಿಸಬೇಕೆಂದು ಒತ್ತಾಯಿಸಿ ಡಿ.31ರ ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಟೌನ್‍ಹಾಲ್‍ನಿಂದ ಭಾರೀ ಮೆರವಣಿಗೆ ನಡೆಸುತ್ತೇವೆ ಎಲ್ಲರೂ ಪಾಲ್ಗೊಳ್ಳಬೇಕು.

-ಸಾ.ರಾ.ಗೋವಿಂದು, ಕನ್ನಡ ಪರ ಹೋರಾಟಗಾರ

ಜ.22ಕ್ಕೆ ಕರ್ನಾಟಕ ಬಂದ್ 

‘ಡಿ.31ರ ಕರ್ನಾಟಕ ಬಂದ್ ಅನ್ನು ಹಿಂಪಡೆಯಲು ನನಗೆ ಮನಸ್ಸೇ ಇರಲಿಲ್ಲ. ಆದರೂ ಬಂದ್ ಅನ್ನು ಹಿಂಪಡೆದಿದ್ದೇವೆ. ಜ.22ಕ್ಕೆ ಕರ್ನಾಟಕ ಬಂದ್ ಮಾಡುತ್ತೇವೆ.’

-ವಾಟಾಳ್ ನಾಗರಾಜ್, ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ

ಮುಖ್ಯಮಂತ್ರಿ @BSBommai ಅವರು ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರೊಂದಿಗೆ ಇಂದು ಮಾತುಕತೆ ನಡೆಸಿ, ಡಿಸೆಂಬರ್ 31ರಂದು ಕರೆ ನೀಡಿರುವ ಬಂದ್ ಹಿಂಪಡೆಯುವಂತೆ ಮನವೊಲಿಸಿದರು.

ಮಾಜಿ ಶಾಸಕ ವಾಟಾಳ್ ನಾಗರಾಜ್, ಪ್ರವೀಣ್ ಶೆಟ್ಟಿ, ಸಾ.ರಾ. ಗೋವಿಂದ್ ಮತ್ತಿತರರು ಉಪಸ್ಥಿತರಿದ್ದರು. pic.twitter.com/yQmjnHsdkl

— CM of Karnataka (@CMofKarnataka) December 30, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X