ಭಟ್ಕಳ: ನಾಯಿ ಅಡ್ಡ ಬಂದು ಅಪಘಾತ: ಇಬ್ಬರಿಗೆ ಗಂಭೀರ ಗಾಯ
![ಭಟ್ಕಳ: ನಾಯಿ ಅಡ್ಡ ಬಂದು ಅಪಘಾತ: ಇಬ್ಬರಿಗೆ ಗಂಭೀರ ಗಾಯ ಭಟ್ಕಳ: ನಾಯಿ ಅಡ್ಡ ಬಂದು ಅಪಘಾತ: ಇಬ್ಬರಿಗೆ ಗಂಭೀರ ಗಾಯ](https://www.varthabharati.in/sites/default/files/images/articles/2022/01/2/319907-1641123546.gif)
ಭಟ್ಕಳ: ಬೀದಿ ನಾಯಿಯೊಂದು ಬೈಕ್ ಅಡ್ಡ ಬಂದ ಪರಿಣಾಮ ಮೂವರು ಸವಾರರು ಕೆಳಗೆ ಬಿದ್ದು, ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ನಿ ಬಂದರ್ ಪ್ರದೇಶದಲ್ಲಿ ರವಿವಾರ ಸಂಭವಿಸಿದೆ.
ಗಾಯಗೊಂಡವರನ್ನು ಬೈಕ್ ಸವಾರ ಮಂಜುನಾಥ ಸುಕ್ರ ಗೊಂಡ (31), ಅವರ ತಾಯಿ ದುರ್ಗಿ ಎಸ್. ಗೊಂಡ (50) ಹಾಗೂ ಅಕಿಲ್ ಗೊಂಡ(6) ಎಂದು ಗುರುತಿಸಲಾಗಿದೆ. ಇವರನ್ನು ತಕ್ಷಣವೇ ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲಕ್ಕೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.
ಇವರು ಶಮ್ಸುದ್ದೀನ್ ವೃತ್ತದ ಮೂಲಕ ತಲಗೋಡ್ ಕಡೆಗೆ ಹೋಗುತ್ತಿದ್ದರು ಎನ್ನಲಾಗಿದ್ದು, ಬೆಳ್ನಿ ಬಂದರ್ ಬಳಿ ರಸ್ತೆಗೆ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿದೆ.
ಭಟ್ಕಳ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
Next Story