Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಣ್ಣಾಮಲೈ, ಸಿ.ಟಿ ರವಿಯಿಂದಾಗಿ ಮೇಕೆದಾಟು...

ಅಣ್ಣಾಮಲೈ, ಸಿ.ಟಿ ರವಿಯಿಂದಾಗಿ ಮೇಕೆದಾಟು ಯೋಜನೆ ಜಾರಿಯಾಗದೆ ವಿಳಂಬವಾಗುತ್ತಿದೆ: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ2 Jan 2022 6:27 PM IST
share
ಅಣ್ಣಾಮಲೈ, ಸಿ.ಟಿ ರವಿಯಿಂದಾಗಿ ಮೇಕೆದಾಟು ಯೋಜನೆ ಜಾರಿಯಾಗದೆ ವಿಳಂಬವಾಗುತ್ತಿದೆ: ಸಿದ್ದರಾಮಯ್ಯ

ಚಾಮರಾಜನಗರ: ''ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಮೇಕೆದಾಟು ಯೋಜನೆ ಜಾರಿ ಮಾಡಬಾರದು ಎಂದು ಧರಣಿ ಕೂತಿದ್ದಾರೆ. ತಮಿಳುನಾಡಿನ ಬಿಜೆಪಿ ಉಸ್ತುವಾರಿ ಸಿ.ಟಿ ರವಿ  ಅವರು ಕೂಡ ಮೇಕೆದಾಟು ವಿರುದ್ಧವಾಗಿದ್ದಾರೆ. ಹೀಗಾಗಿಯೇ ಯೋಜನೆ ಜಾರಿಯಾಗದೆ ಅನಗತ್ಯ ವಿಳಂಬವಾಗುತ್ತಿದೆ. ಈ ವಿಳಂಬವನ್ನು ವಿರೋಧಿಸಿಯೇ ಕಾಂಗ್ರೆಸ್ ಪಕ್ಷ ಈ ತಿಂಗಳ 9ನೇ ತಾರೀಖಿನಿಂದ ಮೇಕೆದಾಟು ಇಂದ ಬೆಂಗಳೂರು ವರೆಗೆ ಪಾದಯಾತ್ರೆ ಹಮ್ಮಿಕೊಂಡಿದೆ'' ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಚಾಮರಾಜನಗರದಲ್ಲಿ ಇಂದು ಆಯೋಜಿಸಿದ್ದ ಮೇಕೆದಾಟು ಯೋಜನೆ ಜಾರಿ ಕುರಿತಾದ ಜನಜಾಗೃತಿ ಸಭೆ ಮತ್ತು ಕಾಂಗ್ರೆಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 

''ಒಂದು ಸಾಮಾನ್ಯ ವರ್ಷದಲ್ಲಿ ಕರ್ನಾಟಕದಿಂದ ತಮಿಳುನಾಡಿಗೆ 177.25 ಟಿ.ಎಂ.ಸಿ ಕಾವೇರಿ ನೀರು ಹರಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ಇದೆ. ಇದನ್ನು ಬಿಟ್ಟರೆ ತಮಿಳುನಾಡಿಗೆ ಕಾವೇರಿ ನೀರಿನ ವಿಚಾರದಲ್ಲಿ ತಕರಾರು ಮಾಡಲು ಬೇರೆ ಯಾವುದೇ ರೀತಿಯ ಕಾನೂನು ಹಕ್ಕಿಲ್ಲ. ಪ್ರತೀ ವರ್ಷ ಸುಮಾರು 200 ಟಿ.ಎಂ.ಸಿ ನೀರು ಸಮುದ್ರ ಪಾಲಾಗುವ ಮೂಲಕ ವ್ಯರ್ಥವಾಗುತ್ತಿದೆ. ಹೀಗೆ ವ್ಯರ್ಥವಾಗುವ ನೀರನ್ನು ಕುಡಿಯುವ ಮತ್ತು ವಿದ್ಯುತ್ ಉತ್ಪಾದನೆಗೆ ಬಳಕೆ ಮಾಡಿಕೊಳ್ಳುವ ಉದ್ದೇಶದಿಂದ ಮೇಕೆದಾಟು ಯೋಜನೆ ರೂಪಿಸಲಾಗಿದೆ. ವಿದ್ಯುತ್ ಉತ್ಪಾದನೆ ಆದ ಮೇಲೆ ಆ ನೀರು ಕೂಡ ತಮಿಳುನಾಡಿಗೆ ಹೋಗುತ್ತದೆ, ಅದೂ ಅವರಿಗೆ ಇನ್ನೊಂದು ಲಾಭದಾಯಕ ಅಂಶ'' ಎಂದು ತಿಳಿಸಿದರು .

''ಮೇಕೆದಾಟು ಯೋಜನೆ ಜಾರಿ ಮಾಡದಂತೆ ತಮಿಳುನಾಡಿನ ಸರ್ಕಾರ ಸುಪ್ರೀಂ ಕೋರ್ಟ್ ಮೋರೆ ಹೋಗಿದ್ದರು ಕೂಡ ನ್ಯಾಯಾಲಯ ಅವರ ಮನವಿಯನ್ನು ಪುರಸ್ಕರಿಸಿಲ್ಲ. ತಮಿಳುನಾಡು ಸರ್ಕಾರ ಕೇವಲ ರಾಜಕೀಯ ಉದ್ದೇಶಕ್ಕಾಗಿ ಯೋಜನೆಗೆ ತಕರಾರು ಮಾಡುತ್ತಿದೆ. ತಮಿಳುನಾಡಿನ ಮಾತು ಕೇಳಿಕೊಂಡು ಕೇಂದ್ರ ಸರ್ಕಾರ ಡ್ಯಾಂ ನಿರ್ಮಾಣಕ್ಕೆ ಅನುಮತಿ ಕೊಡುತ್ತಿಲ್ಲ'' ಎಂದು ದೂರಿದರು. 

ಹೇಮಾವತಿ, ಕಬಿನಿ, ಕೆಆರ್‌ಎಸ್ ನಲ್ಲಿ ನೀರಿದ್ದರೆ ಮಾತ್ರ ಚಾಮರಾಜನಗರ, ಮೈಸೂರು, ತುಮಕೂರು, ಮಂಡ್ಯ ಜಿಲ್ಲೆಗೆ ನೀರು ಸಿಗೋದು. ಹೀಗಾಗಿ ಮನೆಗೊಂದು ಆಳಿನಂತೆ ಪಾದಯಾತ್ರೆಯಲ್ಲಿ ಭಾಗವಹಿಸಬೇಕು ಎಂದು ತಮ್ಮಲ್ಲಿ ಮನವಿ ಮಾಡುತ್ತೇನೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X