Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ.ಜಿಲ್ಲೆ: ಜ.3ರಿಂದ ವಿದ್ಯಾರ್ಥಿಗಳಿಗೆ...

ದ.ಕ.ಜಿಲ್ಲೆ: ಜ.3ರಿಂದ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲು ಸಿದ್ಧತೆ

ವಾರ್ತಾಭಾರತಿವಾರ್ತಾಭಾರತಿ2 Jan 2022 7:13 PM IST
share
ದ.ಕ.ಜಿಲ್ಲೆ: ಜ.3ರಿಂದ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲು ಸಿದ್ಧತೆ

ಮಂಗಳೂರು, ಜ.2: ಸರಕಾರದ ಸೂಚನೆಯಂತೆ ದ.ಕ.ಜಿಲ್ಲಾಡಳಿತವು 15ರಿಂದ18 ವರ್ಷ ಪ್ರಾಯದೊಳಗಿನ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲು ಸಿದ್ಧತೆ ನಡೆಸಿದೆ. ಜಿಲ್ಲೆಯಲ್ಲಿ ಸುಮಾರು 87 ಸಾವಿರದಷ್ಟು ಕೋವ್ಯಾಕ್ಸಿನ್ ಲಸಿಕೆ ಸಂಗ್ರಹವಿದ್ದು, ಲಸಿಕೆಯ ಕೊರತೆಯಾಗದಂತೆ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ವಹಿಸಿದೆ.

ದ.ಕ.ಜಿಲ್ಲೆಯಲ್ಲಿ 15ರಿಂದ 18 ವರ್ಷ ಪ್ರಾಯದೊಳಗಿನ 1,01,549 ವಿದ್ಯಾರ್ಥಿಗಳಿದ್ದಾರೆ. ಆ ಪೈಕಿ 61 ಸಾವಿರ ವಿದ್ಯಾರ್ಥಿಗಳು ಮಂಗಳೂರು ತಾಲೂಕಿನಲ್ಲಿದ್ದರೆ, ಉಳಿದ 40 ಸಾವಿರ ವಿದ್ಯಾರ್ಥಿಗಳು ಜಿಲ್ಲೆಯ ಇತರ ತಾಲೂಕುಗಳಲ್ಲಿದ್ದಾರೆ. 63,500 ವಿದ್ಯಾರ್ಥಿಗಳು ಪಿಯು ವಿಭಾಗದಲ್ಲಿದ್ದರೆ, ಐಟಿಐ, ಡಿಪ್ಲೊಮಾ ಇತರ ಕೋರ್ಸ್‌ನಲ್ಲಿ ಇರುವ ವಿದ್ಯಾರ್ಥಿಗಳ ಸಂಖ್ಯೆ 3 ಸಾವಿರದಷ್ಟಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.

ಶಾಲೆಯಿಂದ ಹೊರಗುಳಿದ ವಿದ್ಯಾರ್ಥಿಗಳನ್ನು ಪತ್ತೆ ಹಚ್ಚುವ ಕೆಲಸಕ್ಕೆ ಗ್ರಾಪಂಗಳ ಪಿಡಿಒ ಮೂಲಕ ಯೋಜನೆ ರೂಪಿಸಲಾಗಿದೆ. ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ಪಡೆದುಕೊಳ್ಳಲು ಸೂಚಿಸಲಾಗಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಜ.3ರಂದು ವಿದ್ಯಾರ್ಥಿಗಳ ಲಸಿಕೆಗೆ ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ. ಕೋವ್ಯಾಕ್ಸಿನ್ ಸಂಗ್ರಹ ಕೂಡ ಸಾಕಷ್ಟು ಪ್ರಮಾಣದಲ್ಲಿದೆ. ಜಿಲ್ಲೆ, ತಾಲೂಕು ಮಟ್ಟದಲ್ಲಿ ಆರೋಗ್ಯ ಇಲಾಖೆ ಸಂಪೂರ್ಣ ಸಿದ್ಧತೆ ಮಾಡಿಕೊಂಡು ಲಸಿಕೆ ನೀಡುವ ಕೆಲಸ ನಿರ್ವಹಿಸಲಿದೆ ಎಂದು ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕಿಶೋರ್ ಕುಮಾರ್ ತಿಳಿಸಿದ್ದಾರೆ.

ಕೋವಿನ್ ಆ್ಯಪ್: ಜ.3ರಿಂದ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಹಿನ್ನೆಲೆಯಲ್ಲಿ ನೋಂದಣಿಗಾಗಿ ಜ.1ರಿಂದಲೇ ಕೋವಿನ್ ಆ್ಯಪ್ ತೆರೆಯಲಾಗಿದೆ. ವಿದ್ಯಾರ್ಥಿಗಳು ಸ್ವಯಂಪ್ರೇರಿತರಾಗಿ ನೋಂದಣಿ ಮಾಡಿಕೊಳ್ಳಬಹುದು ಅಥವಾ ಜ.3ರಂದು ಶಾಲೆ, ಕಾಲೇಜಿಗೆ ತೆರಳಿದಾಗ ಆರೋಗ್ಯ ಇಲಾಖೆ ಸಿಬ್ಬಂದಿ ಮೂಲಕ ನೋಂದಣಿ ಮಾಡಿಸಿಕೊಳ್ಳಬಹುದು.ನೇರವಾಗಿ ವಿದ್ಯಾರ್ಥಿಗಳ ಮೊಬೈಲ್ ಅಥವಾ ಅವರ ಹೆತ್ತವರ ಮೊಬೈಲ್‌ಗೆ ಮೆಸೇಜ್ ಕಳುಹಿಸಲಾಗುತ್ತದೆ. 28 ದಿನಗಳ ಬಳಿಕ ಮತ್ತೊಂದು ಡೋಸ್‌ಗಾಗಿ ಮಾಹಿತಿ ರವಾನೆ ಮಾಡಲಾಗುತ್ತದೆ. ವಿದ್ಯಾರ್ಥಿಗಳ ಹೆತ್ತವರ ಸಭೆ ನಡೆಸಿ ಮಾಹಿತಿ ನೀಡಲಾಗಿದೆ.

ವಿದ್ಯಾರ್ಥಿಗಳಿಗಾಗಿ ಕೋವಿನ್ ಆ್ಯಪ್‌ನಲ್ಲಿ ವಿಶೇಷ ಬದಲಾವಣೆ ಮಾಡಲಾಗಿದೆ. ಒಟಿಪಿ ಇಲ್ಲದೇ ಲಸಿಕೆ ನೀಡಲಾಗುತ್ತದೆ. ವಿದ್ಯಾರ್ಥಿಗಳಿಗೆ ಹೆತ್ತವರ ಮೊಬೈಲ್ ಸಂಖ್ಯೆ, ಆಧಾರ್ ಕಾರ್ಡ್, ಸ್ಕೂಲ್ ಐಡಿ ಆಧಾರದಲ್ಲಿ ಲಸಿಕೆ ನೀಡುವ ವ್ಯವಸ್ಥೆ ನಡೆಯಲಿದೆ. ಕೋವ್ಯಾಕ್ಸಿನ್ ಲಸಿಕೆಯನ್ನು ಮೊದಲ ಡೋಸ್ ನೀಡಿದ 28 ದಿನಗಳ ಬಳಿಕ ಮತ್ತೊಂದು ಡೋಸ್ ಲಸಿಕೆಯನ್ನು ನೀಡುವ ವ್ಯವಸ್ಥೆ ಮಾಡಲಾಗುತ್ತದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

*ಜ.10ರಂದು ಬೂಸ್ಟರ್ ಲಸಿಕೆ: ಜಿಲ್ಲೆಯಲ್ಲಿ 50 ಸಾವಿರದಷ್ಟು ಆರೋಗ್ಯ ಕ್ಷೇತ್ರದವರು ಹಾಗೂ 14 ಸಾವಿರದಷ್ಟು ಫ್ರಂಟ್‌ಲೈನ್ ವರ್ಕರ್‌ಗಳಿಗೆ ಬೂಸ್ಟರ್ ಲಸಿಕೆಯು ಜ.10ರಂದು ನೀಡಲಾಗುತ್ತದೆ. ಲಸಿಕೆಯ ಮೊದಲ ಎರಡು ಡೋಸ್‌ಗಳನ್ನು ತೆಗೆದುಕೊಂಡು 9 ತಿಂಗಳು ದಾಟಿದವರು ಇದನ್ನು ಪಡೆಯಲು ಅರ್ಹರಾಗುತ್ತಾರೆ.

*ದ.ಕ. ಜಿಲ್ಲೆಯಲ್ಲಿ 1,10,000 ಮಕ್ಕಳಿಗೆ ಲಸಿಕೆ ನೀಡುವ ಗುರಿ ಇಟ್ಟುಕೊಳ್ಳಲಾಗಿದ್ದು, ಜ.3ರಂದು 21,350 ಮಂದಿಗೆ ನೀಡುವ ವ್ಯವಸ್ಥೆ ಮಾಡಲಾಗಿದೆ. ಮಂಗಳೂರಿನಲ್ಲಿ ಜ.3ರಂದು 7 ಸಾವಿರ ಮಂದಿಗೆ ಲಸಿಕೆ ನೀಡಲಾಗುತ್ತದೆ. ಇದರಲ್ಲಿ ನಗರ ಪಾಲಿಕೆ ವ್ಯಾಪ್ತಿಯ 2,800 ಹಾಗೂ ಗ್ರಾಮಾಂತರ ಭಾಗದಲ್ಲಿ 4,200 ಮಂದಿ ಸೇರಿದ್ದಾರೆ. ಬಂಟ್ವಾಳದಲ್ಲಿ 13,900 ಗುರಿ ನಿಗದಿಯಾಗಿದ್ದು, ಮೊದಲ ದಿನ 3,750 ಮಂದಿಗೆ ಲಸಿಕೆ ನೀಡಲಾಗುತ್ತದೆ. ಪುತ್ತೂರಿನಲ್ಲಿ 15,200 ಮಂದಿಯ ಪೈಕಿ ಮೊದಲ ದಿನ 3,200 ಮತ್ತು ಸುಳ್ಯದ 6,000 ಮಂದಿಯ ಪೈಕಿ ಮೊದಲ ದಿನ 3400 ಮಂದಿಗೆ ಲಸಿಕೆ ನೀಡಲಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X